Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯುತ್ ಬಿಲ್ ದಿಢೀರ್ ಹೆಚ್ಚಳಕ್ಕೆ ಕಾರಣವೇನು ಗೊತ್ತಾ..?

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಆಡಳಿತಾವಧಿಯಲ್ಲಿ ಕೊಟ್ಟ ಮಾತಿನಂತೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡುವುದಕ್ಕೆ ಆದೇಶ ಹೊರಡಿಸಿದೆ‌. ಆದರೆ ಅದಕ್ಕೆ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಆದರೆ ಅದಕ್ಕೂ ಮುನ್ನ ಈ ಬಾರಿಯ ವಿದ್ಯುತ್ ಬಿಲ್ ದುಪ್ಪಟ್ಟಾಗಿದೆ. ಎಲ್ಲರಿಗೂ ಶಾಕಿಂಗ್ ಎನಿಸುವಷ್ಟು ವಿದ್ಯುತ್ ದರ ಬಂದಿದೆ. ವಿದ್ಯುತ್ ಫ್ರಿಯಾಗಿ ಕೊಡ್ತೀವಂತ ಹೇಳಿ ಸರ್ಕಾರವೇ ವಿದ್ಯುತ್ ದರ ಏರಿಕೆ ಮಾಡಿದೆ ಅನ್ನೋದು ಹಲವರ ಬೇಸರವಾಗಿದೆ. ಆದರೆ ವಿದ್ಯುತ್ ದರ ಏರಿಕೆಯಾಗುವುದಕ್ಕೆ ಕಾರಣ ಏನು ಅನ್ನೋದನ್ನ ಬೆಸ್ಕಾಂ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತೀ ವರ್ಷ ರಾಜ್ಯ ವಿದ್ಯುತ್ ದರ ನಿಯಂತ್ರಣ ಆಯೋಗ ದರ ಪರಿಷ್ಕರಣೆ ಮಾಡುತ್ತದೆ. ಇದಕ್ಕೆ ಎಲ್ಲಾ ಎಸ್ಕಾಂಗಳಿಂದ ಅರ್ಜಿ ಸಲ್ಲಿಸುತ್ತೇವೆ. ಅದರಂತೆ ಮಾರ್ಚ್, ಎಪ್ರಿಲ್ ತಿಂಗಳಲ್ಲಿ ದರ ಪರಿಷ್ಕರಣೆ ಮಾಡಿದ್ದಾರೆ. ಹೀಗಾಗಿ ದರ ಹೆಚ್ಚಳ ಆಗಿದೆ. ಯೂನಿಟ್ ಗೆ 70 ಪೈಸೆ ಹೆಚ್ಚಳ ಆಗಿದೆ. 1 ರಿಂದ 100 ಯೂನಿಟ್ ವಿದ್ಯುತ್ ಬಳಕೆಗೆ 4 ರೂ .75 ಪೈಸೆ. 101 ಯೂನಿಟ್ ಮೇಲೆ ಬಂದರೆ 7 ರೂಪಾಯಿ ಮಾಡಲಾಗಿದೆ.

ಇನ್ನು ಈ ದರ ಏರಿಕೆಯನ್ನು ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿತ್ತು. ಆದರೆ ಜೂನ್ ನಲ್ಲಿ ಬಿಲ್ ವಿತರಣೆ ಮಾಡಲಾಗಿದೆ. ಕೊಡುವಾಗ ಏಪ್ರಿಲ್ ಹಾಗೂ ಮೇ ಎರಡು ತಿಂಗಳ ಬಿಲ್ ಅನ್ನು ಒಟ್ಟಿಗೆ ಕೊಡಲಾಗಿದೆ. ಹೀಗಾಗಿ ಇಂತದ್ದೊಂದು ಸಮಸ್ಯೆ ಎದುರಾಗಿದೆ ಎನ್ನುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!