Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಈ ಮೂವರಿಗೆ ಜಾಮೀನು ಸುಲಭ : ಯಾಕೆ ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಜೊತೆಗೆ ಅವರ ಗ್ಯಾಂಗ್ ಕೂಡ ಜೈಲು ಸೇರಿದೆ. ಜೂನ್ ತಿಂಗಳಲ್ಲಿ ಈ ಕೊಲೆ‌ನಡೆದಿರುವುದು. ಮೂರು ತಿಂಗಳು ಸಮೀಪಿಸುತ್ತಿದೆ. ಜೈಲಿನೊಳಗೆ ಎಲ್ಲರು ಆರೋಪಿಗಳು ಒದ್ದಾಡುತ್ತಿದ್ದಾರೆ. ಪವಿತ್ರಾ ಗೌಡ ಈಗಾಗಲೇ ಜಾಮೀನಿಗೆ ಅರ್ಜಿ ಹಾಕಿ, ಫೇಲ್ ಆಗಿದ್ದಾರೆ. ಇನ್ನು ದರ್ಶನ್ ಚಾರ್ಜ್ ಶೀಟ್ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಸುಮಾರು 4 ಸಾವಿರ ಪುಟಗಳಷ್ಟು ಚಾರ್ಜ್ ಶೀಟ್ ಸಿದ್ದವಾಗಿದೆಯಂತೆ. ಆದರೆ ಆರೋಪಿಗಳ ಗ್ಯಾಂಗ್ ನಲ್ಲಿ ಮೂವರ ಸುಲಭವಾಗಿ ಜಾಮೀನು ಪಡೆಯಬಹುದು ಎನ್ನಲಾಗಿದೆ.

ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಆರೋಪಿಗಳಾದ ನಿಖಿಲ್ ನಾಯ್ಕ್, ಕೇಶವ ಮೂರ್ತಿ ಹಾಗೂ ಕಾರ್ತಿಕ್ ಕೊಲೆಯಲ್ಲಿ ಭಾಗಿಯಾಗಿಲ್ಲ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಆದರೆ ಈ ಮೂವರು ಮೃತದೇಹ ಸಿಕ್ಕ ಮರುದಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದರು. ನಾವೇ ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿ, ಶರಣಾಗಿದ್ದರು. ಮೃತ ದೇಹ ಸಾಗಾಟ ಹಾಗೂ ಶರಣಾಗತಿಯಾಗಲು ಮೂವರು ಒಟ್ಟಿಗೆ ಬಂದಿದ್ದರು. ಆದರೆ ಕೊಲೆಯಲ್ಲಿ ಇವರ ಪಾತ್ರವಿಲ್ಲ ಎಂಬುದು ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ.

ಪೊಲೀಸರು ಸಿದ್ಧ ಮಾಡಿರುವ ಚಾರ್ಜ್ ಶೀಟ್ ನಲ್ಲಿ ಈ ಮೂವರ ಹೆಸರು ಆರೋಪಿ ಸ್ಥಾನದಲ್ಲಿ ಇಲ್ಲದೆ ಇರುವುದರಿಂದ ಇವರಿಗೆ ಜಾಮೀನು ಬೇಗ ಸಿಗುವ ಸಾಧ್ಯತೆ ಇದೆ. ಇನ್ನು ಪೊಲೀಸರ ಚಾರ್ಜ್ ಶೀಟ್ ಸಲ್ಲಿಕೆ ಬಳಿಕವಷ್ಟೇ ದರ್ಶನ್ ಎಷ್ಟರಮಟ್ಟಿಗೆ ಆರೋಪಿಯಾಗಿದ್ದಾರೆಂದು ತಿಳಿಯುತ್ತದೆ. ಜಾಮೀನು ಸಿಗುತ್ತಾ, ಸಿಗಲ್ವಾ ಎಂಬುದು ಆಮೇಲೆ ತಿಳಿಯುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!