Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

85 ವರ್ಷ ದಾಟಿದ ಹಿರಿಯರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ : ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್

Facebook
Twitter
Telegram
WhatsApp

ಚಿತ್ರದುರ್ಗ. ಏ.10: 85 ವರ್ಷ ದಾಟಿದ ಹಿರಿಯ ನಾಗರೀಕರಿಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸುವ ಹಕ್ಕು ನೀಡಲಾಗಿದೆ. ಇದರೊಂದಿಗೆ ಮತಗಟ್ಟೆ ಕೇಂದ್ರಗಳಲ್ಲಿ ಹಿರಿಯರು ನಾಗರಿಕರು ಮತದಾನ ಮಾಡಲು ಅನುಕೂಲವಾಗುವಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಹೇಳಿದರು.

ಸೋಮವಾರ ಸಂಜೆ ನಗರದ ಕೆಳಗೋಟೆಯ ಸಿ. ಕೆ ಪುರ ಬಡಾವಣೆಯಲ್ಲಿರುವ ಈಶ್ವರಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು‌.

ಏಪ್ರಿಲ್ 26 ರಂದು ನಡೆಯುವ ಮತದಾನ ಎನ್ನುವ, ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರು ಪಾಲ್ಗೊಂಡು ತಮ್ಮ ಮತದಾನ ಹಕ್ಕು ಚಲಾಯಿಸಬೇಕು. ಪ್ರತಿ 5 ವರ್ಷಕೊಮ್ಮೆ ಬರುವ ಈ ಹಬ್ಬದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರುಳ್ಳ 18 ವರ್ಷ ತುಂಬಿದ ಪುರುಷ ಮತ್ತು ಮಹಿಳೆಯರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ಸುವರ್ಣ ಅವಕಾಶವನ್ನು ಯಾರು ಕೈಚೆಲ್ಲಬಾರದು ಎಂದರು.

ಕುಟುಂಬದಲ್ಲಿ ಗೌರವ, ಪ್ರೀತಿ ಮತ್ತು ಮಮತೆ ಇವೆಲ್ಲವನ್ನು ಕಾಪಾಡಿಕೊಂಡು ಬಂದಿರುವ ಹಿರಿಯರು, ಮನೆಯ ಎಲ್ಲ ಸದಸ್ಯರು ಹಾಗೂ ಸ್ನೇಹಿತರು, ಬಂಧು ಬಳಗದವರು ಮತದಾನ ಮಾಡುವಂತೆ ತಿಳಿ ಹೇಳಬೇಕು. ನಿಮ್ಮ ಜೀವನದಲ್ಲಿ ಬಹಳಷ್ಟು ಚುನಾವಣೆಗಳನ್ನು ನೋಡಿದ್ದೀರಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇಕಡ.70/% ರಷ್ಟು ಮತದಾನವಾಗಿತ್ತು. ಈ ಬಾರಿ ಶೇಕಡ.5% ರಷ್ಟು ಮತದಾನದ ಪ್ರಮಾಣ ಹೆಚ್ಚು ಮಾಡಲು ಗುರಿ‌ ಹೊಂದಲಾಗಿದೆ. ಪ್ರತಿಯೊಬ್ಬರು ಮತದಾನ ಮಾಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಎಸ್.ಜೆ.ಸೋಮಶೇಖರ್ ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ದಾಟಿದ ವೃದ್ಧರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗಿತ್ತು. ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಯೋಮಿತಿಯನ್ನು 85 ವರ್ಷಕ್ಕೆ ಏರಿಕೆ ಮಾಡಿದೆ. ಜಿಲ್ಲೆಯಲ್ಲಿ 85 ವರ್ಷ ದಾಟಿದ 11,827 ಮತದಾರರು ಇದ್ದಾರೆ. ಬೇಸಿಗೆಯ ಬಿಸಿಲಿನಲ್ಲಿ ಮತಗಟ್ಟೆಗೆ ಬರಲು ತೀವ್ರ ಸಮಸ್ಯೆ ಎದುರಿಸುತಿದ್ದ ವಯೋವೃದ್ಧರು, ಹಾಸಿಗೆ ಹಿಡಿದವರು ಮನೆಯಿಂದ ಮತದಾನ ಮಾಡಬಹದು. ಮತಗಟ್ಟೆ ಕೇಂದ್ರಗಳಿಗೆ ಬರುವ ಹಿರಿಯ ನಾಗರಿಕರಿಗೆ ವೀಲ್ ಚೇರ್ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ಇದರೊಂದಿಗ ಅಗತ್ಯ ವೈದ್ಯಕೀಯ ಸಿಬ್ಬಂದಿಗಳನ್ನು ಸಹ ನೇಮಕ ಮಾಡಲಾಗಿರುತ್ತದೆ. ಆದ್ದರಿಂದ ಯಾರು ಮತದಾನದಿಂದ ವಂಚಿತರಾಗದೆ ಮತದಾನ ಮಾಡುವಂತೆ ಎಸ್.ಜೆ.ಸೋಮಶೇಖರ್ ಕೋರಿದರು.

ಇದೇ ವೇಳೆ ಮತದಾರ ಪ್ರತಿಜ್ಞಾ ವಿಧಿಯನ್ನು ಎಸ್.ಜೆ.ಸೊಮಶೇಖರ್ ಭೋದಿಸಿದರು. ಕಾರ್ಯಕ್ರಮದಲ್ಲಿ ಉಪ ಕಾರ್ಯದರ್ಶಿ ಕೆ. ತಿಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ್, ನಗರ ಸಭೆಯ ಆಯುಕ್ತೆ ರೇಣುಕಾ,ಜಿಲ್ಲಾ ಸ್ವೀಪ್ ಸಮಿತಿಯ ಸಂಯೋಜಕಿ ಸುಷ್ಮಾರಾಣಿ,ಈಶ್ವರಿ ವಿಶ್ವವಿದ್ಯಾಲಯದ ರಶ್ಮಿ‌ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!