Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ : ಅಭಿಯಾನಕ್ಕೆ ಸಿದ್ಧತೆ

Facebook
Twitter
Telegram
WhatsApp

ಬೆಂಗಳೂರು: ‘ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ’ ಎಂಬ ಚಳವಳಿ ಆರಂಭಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜುಲೈ 1ರಂದು ರಾಜ್ಯಾದ್ಯಂತ ಹೋರಾಟಕ್ಕೆ ಕರೆ ನೀಡಿದ್ದು ಇದಕ್ಕೆ ಪೂರಕವಾಗಿ ಸತತ 24 ಗಂಟೆಗಳ ಎಕ್ಸ್ (ಟ್ವಿಟರ್) ಅಭಿಯಾನಕ್ಕೆ ಕರೆ ನೀಡಲಾಗಿದೆ. ಜೂನ್ 30 ರ ಭಾನುವಾರ ಸಂಜೆ 5 ಗಂಟೆಗೆ ಆರಂಭವಾಗುವ ಅಭಿಯಾನ ಜುಲೈ 1 ರ ಸಂಜೆ 5 ಗಂಟೆಯವರೆಗೆ ನಡೆಯಲಿದೆ.

ಕನ್ನಡ ನಾಡಿನ ಯುವಪೀಳಿಗೆಯ ಭವಿಷ್ಯಕ್ಕಾಗಿ ಕನ್ನಡಿಗರಿಗೇ ಉದ್ಯೋಗ ಮೀಸಲಿರಿಸುವ ಸಮಗ್ರ ಕಾಯ್ದೆ ರೂಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.‌ನಾರಾಯಣಗೌಡ ಕರೆ ನೀಡಿದ್ದಾರೆ.

ಜುಲೈ 1 ರಂದು‌ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಬೃಹತ್ ಧರಣಿ ಸತ್ಯಾಗ್ರಹಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ದಿನ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ‌ ನೇತೃತ್ವದಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಧರಣಿ‌ ನಡೆಸಲಿದ್ದಾರೆ. ಧರಣಿಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರವೇ ಮುಖಂಡರು ಹಕ್ಕೊತ್ತಾಯಗಳನ್ನು ಸಲ್ಲಿಸಲಿದ್ದಾರೆ.

ಹಾಗೇ ಉಳಿದ ಜನರಿಗೂ ಟ್ವಿಟ್ಟರ್ ನಲ್ಲಿ ಅಭಿಯಾನವನ್ನು ಮಾಡುವುದಕ್ಕೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿ ಕನ್ನಡಿಗರೆ ಮೊದಲು ಉದ್ಯೋಗ ನೀಡಬೇಕು ಎಂಬ ಕೂಗು ಹೊಸದೇನು ಅಲ್ಲ. ಈ ಹೋರಾಟ, ಈ ಅಭಿಯಾನ ಆಗಾಗ ಸದ್ದು ಮಾಡುತ್ತಲೇ ಇರುತ್ತದೆ. ಇದೀಗ ಕರವೇ ಈ ಅಭಿಯಾನವನ್ನು ಶುರು ಮಾಡಿದೆ. ಸಕ್ಸಸ್ ಆಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದ್ದು, ಬದಲಾವಣೆಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿವಮೊಗ್ಗದಲ್ಲಿ ಭೀಕರ ಅಪಘಾತ: ಚಿತ್ರದುರ್ಗದ ಮೂವರು ಸಾವು..!

ಶಿವಮೊಗ್ಗ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂರು ಜನ ಮೃತಪಟ್ಟಿದ್ದಾರೆ. ಶಿವಮೊಗ್ಗದ ಲಯನ್ ಸಫಾರಿ ಬಳಿ ಈ ದುರ್ಘಟನೆ ನಡೆದಿದ್ದು, ಮೃತರು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೊಡ್ಡೆರಿ

ರಾಜ್ಯದಲ್ಲಿ ಕೋಮು-ಗಲಭೆ ನಡೆಯದಂತೆ ಕಾಪಾಡಿದ ಪೊಲೀಸ್ ಹಾಗೂ ಗೃಹ ಇಲಾಖೆ ಸಿಎಂ ಸಿದ್ದರಾಮಯ್ಯ ಅಭಿನಂದನೆ..!

  ಬೆಂಗಳೂರು (ಜು 6): ಪ್ರತೀ SP-DCP-IG ಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ

ನಾವೂ ಕೇಳಿದಾಗ ಅಕ್ಕಿ ಇಲ್ಲ ಅಂದ್ರು… ಚುನಾವಣೆಗಾಗಿ ಅಕ್ಕಿ‌ ಕೊಟ್ಟು.. ಈಗ ನಿಲ್ಲಿಸಿದರು : ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಇತ್ತಿಚೆಗಷ್ಟೇ ಭಾರತ್ ಎಂಬ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಅಕ್ಕಿಯನ್ನು ದೇಶದಾದ್ಯಂತ ವಿತರಣೆ ಮಾಡಿತ್ತು. ಈಗ ಅಕ್ಕಿಯನ್ನು ನಿಲ್ಲಿಸಿದೆ. ಇದು ಚುನಾವಣೆಗಾಗಿ ಮಾಡಿದ ಕಾರ್ಯ ಎಂದು ಕೇಂದ್ರ ಸರ್ಕಾರದ ಮೇಲೆ ಸಿಎಂ

error: Content is protected !!