Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಥಳೀಯ ಉತ್ಪನ್ನಗಳ ಬಳಕೆ ಮತ್ತು ಸರಳ ಜೀವನದಿಂದ ಪರಿಸರ ಸಂರಕ್ಷಣೆ ಸಾಧ್ಯ : ಡಾ. ಎಚ್.ಕೆ.ಎಸ್. ಸ್ವಾಮಿ

Facebook
Twitter
Telegram
WhatsApp

 

ಫೋಟೋ ಮತ್ತು ವರದಿ ಕೃಪೆ
ಅರ್ಜಿತ್ ಗೋವಿಂಧನ್
9741738979

ಸುದ್ದಿಒನ್, ಚಿತ್ರದುರ್ಗ : ಇಂಧನ ಉಳಿತಾಯ, ಸರಳ ಜೀವನ, ಸ್ಥಳೀಯ ಉತ್ಪನ್ನಗಳ ಬಳಕೆ, ಗಾಂಧೀಜಿಯವರ  ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವುದರ ಮುಖಾಂತರ ಪರಿಸರ ಸಂರಕ್ಷಣೆ ಸಾಧ್ಯವೆಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಡಾ, ಎಚ್. ಕೆ.ಎಸ್.ಸ್ವಾಮಿ  ತಿಳಿಸಿದರು.

ಅವರು ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನ ವತಿಯಿಂದ ಶುಕ್ರವಾರ  ಜ್ಞಾನವಿಕಾಸ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆಯೋಜಿಸಿದ್ದ ಇಂಡಕ್ಷನ್ ಪ್ರೋಗ್ರಾಂನ ಭಾಗವಾಗಿ ಯುವಜನಾಂಗವನ್ನು ಪರಿಸರ ಸಂರಕ್ಷಣೆಗಾಗಿ ಜಾಗೃತಗೊಳಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸ್ಥಳೀಯ ಉತ್ಪನ್ನಗಳ ಬಳಕ ಹೆಚ್ಚಿಸಿ, ಜನರಲ್ಲಿ ದುಡಿಮೆಯ ಮಹತ್ವವನ್ನು ತಿಳಿಸಿ, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಪರಿಸರ ಸಂರಕ್ಷಣೆ ಮಾಡಿಕೊಳ್ಳವುದು ಸಹ ಒಂದು ವಿಧಾನ ಎಂದು ಚರಕದ ಪ್ರಾತ್ಯಕ್ಷಿಕೆಯ ಮುಖಾಂತರ ತಿಳಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ  ಜಿ. ಸುರೇಶ್ ರವರು ಪರಿಸರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡದೆ ಅದನ್ನು ಸಂಗ್ರಹಿಸಿ, ವಿಂಗಡಿಸಿ ವಿಲೇವಾರಿ ಮಾಡಿ ಸೃಚ್ಛತೆಗೆ ಆಧ್ಯತೆ ನೀಡುತ್ತ ಪರಿಸರ ಸಂರಕ್ಷಣೆ ಮೂಲಕ ಜಾಗ್ರತಿ ಮೂಡಿಸಬೇಕೆಂದು ತಿಳಿಸಿದರು.

ಸಿವಿಲ್ ವಿಭಾಗದ ಮುಖ್ಯಸ್ಥ ಹರೀಶಯಾದವ್ ಎಸ್ ಜಿ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾಥಿ೯ಗಳು ಭಾಗವಹಿಸಿದ್ದರು..

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!