Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಕ್ಸಿಟ್ ಪೋಲ್ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿ..!

Facebook
Twitter
Telegram
WhatsApp

 

ಲೋಕಸಭಾ ಚುನಾವಣೆಯ ಫಲಿತಾಂಶಕ್ಕಾಗಿ ದೇಶವೇ ಕಾಯುತ್ತಿದೆ. ನಾಳೆಯೇ ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ಎಕ್ಸಿಟ್ ಪೋಲ್ ಹೊರ ಬಿದ್ದಿದ್ದು, ಬಿಜೆಪಿಯೇ ಮತ್ತೆ ಅಧಿಕಾರದ ಗದ್ದುಗೆ ಏರಲಿರುವ ಸೂಚನೆ ನೀಡಲಾಗಿದೆ. ಎಕ್ಸಿಟ್ ಪೋಲ್ ಬಳಿಕ ಷೇರು ಮಾರುಕಟ್ಟೆಯಲ್ಲಿ ಬಾರೀ ಸಂಚಲನವನ್ನೇ ಸೃಷ್ಟಿಸಿದೆ.

ಸೆನ್ಸೆಕ್ಟ್ 2000 ಸಾವಿರ ಪಾಯಿಂಟ್ ಗೆ ಜಿಗಿತ ಕಂಡರೆ, ನಿಫ್ಟಿ 600 ಅಂಕ ಜಾಸ್ತಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ 2621.98 ಪಾಯಿಂಟ್ ಆಗಿದೆ. 76,583 ಮಟ್ಟದಲ್ಲಿ ಪ್ರಾರಂಭವಾಗಿದೆ. ಎನ್​ಎಸ್​ಇ (National Stock Exchange) ನಿಫ್ಟಿ 807.20 ಪಾಯಿಂಟ್ (ಶೇ.3.58) ನೊಂದಿಗೆ ಆರಂಭವಾಗಿದೆ.

 

ಈ ಮೂಲಕ ಷೇರು ಮಾರುಕಟ್ಟೆಯು ಐತಿಹಾಸಿಕ ಉತ್ತುಂಗದಲ್ಲಿದೆ ಎಂದು ತಜ್ಞರು ವಿಶ್ಲೇಸುತ್ತಿದ್ದಾರೆ. ಎಕ್ಸಿಟ್ ಪೋಲ್ ಬಳಿಕವೇ ಷೇರು ಮಾರುಕಟ್ಟರ ಇಷ್ಟೊಂದು ಏರಿಕೆಯಾಗಿರುವಾಗ, ನಾಳೆ ಫಲಿತಾಂಶ ಹೊರ ಬಿದ್ದ ಬಳಿಕ ಇನ್ನು ಏನೆಲ್ಲಾ‌ ಬದಲಾವಣೆಯಾಗಬಹುದು ಎಂಬುದರ ಕುತೂಹಲವಿದೆ.

ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಬಿಜೆಪಿಯನ್ನು ಸೋಲಿಸಲೇಬೇಕೆಂಬ ಹಠಕ್ಕೆ‌ಕಾಂಗ್ರೆಸ್ ಬಿದ್ದಿತ್ತು. ಹೀಗಾಗಿ ಇಂಡಿಯಾ ಎಂಬ ಮೈತ್ರಿ ಕೂಟ ರಚನೆ ಮಾಡಿ, ಸ್ಪರ್ಧೆಗೆ ಇಳಿದಿತ್ತು. ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಬೇಕೆಂಬ ಹಠಕ್ಕೆ ಬಿದ್ದ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಸ್ಪರ್ಧೆ ನಡೆಸಿರುವುದೇ ಮೂರು ಕ್ಷೇತ್ರ. ಸದ್ಯ ಎಕ್ಸಿಟ್ ಪೋಲ್ ನಲ್ಲಿ ಮೂರು ಕ್ಷೇತ್ರಗಳನ್ನು ಗೆಲ್ಲಬಹುದು ಎಂದೇ ಹೇಳಲಾಗುತ್ತಿದೆ. ಎರಡು ಕ್ಷೇತ್ರದಲ್ಲಾದರೂ ಜೆಡಿಎಸ್ ಬರುವ ಗ್ಯಾರಂಟಿಯನ್ನು ಎಕ್ದಿಟ್ ಪೋಲ್ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

  ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್

ಹೆಚ್ಡಿಕೆ ಜನತಾ ದರ್ಶನಕ್ಕೆ 3 ಸಾವಿರ ಜನ ಬಂದಿದ್ರು..ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಯೋಜನೆಗಳನ್ನ ಕೊಡಿಸಲಿ ನೋಡೋಣಾ : ಚೆಲುವರಾಯಸ್ವಾಮಿ

ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದರು‌. ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ಮೇಲೆ ಕಿಡಿಕಾರಿದ್ದರು. ಇದೀಗ ಜನತಾ ದರ್ಶನದ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಅವರು ಆಕ್ರೋಶ

ಚಿತ್ರದುರ್ಗ | ಪಿ.ಸಿ.ಪಿ.ಎನ್.ಡಿ.ಟಿ ಸಲಹಾ ಸಮಿತಿಯ ಅಧ್ಯಕ್ಷರಾಗಿ ಡಾ. ಸೌಮ್ಯ ನೇಮಕ

ಚಿತ್ರದುರ್ಗ. ಜುಲೈ.06:  ಪಿ.ಸಿ.ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ ಅನುಸಾರ ಸಲಹಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಲಹಾ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗದ ಖಾಸಗಿ ನರ್ಸಿಂಗ್

error: Content is protected !!