Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೌಟುಂಬಿಕ ಕಲಹ : ಬೇಸತ್ತ ಮಹಿಳೆ 3 ವರ್ಷದ ಕಂದಮ್ಮನ ಜೊತೆ ಆತ್ಮಹತ್ಯೆ..!

Facebook
Twitter
Telegram
WhatsApp

ಮಂಡ್ಯ: ಒಂಭತ್ತು ತಿಂಗಳು ಅದೆಷ್ಟೇ ಕಷ್ಟವಾದ್ರೂ ಮಗುವನ್ನ ತುಂಬಾ ಕಾಳಜಿಯಿಂದ ನೋಡಿಕೊಳ್ಳುವವಳು ತಾಯಿ. ಆದ್ರೆ ಹುಟ್ಟಿದ ಮೇಲೆ ಅದೇಕೋ ತಾನೇ ಹೆತ್ತ ಮಗು ಅಂತಾನು ನೋಡದೆ ತಾನೂ ಸಾಯುವುದರ ಜೊತೆ ಮಗುವನ್ನ ಸಾಯಿಸುವ ಹಂತ ತಲುಪಿ ಬಿಡ್ತಾರೆ. ಇಷ್ಟು ಕ್ರೂರ ಮನಸ್ಥಿತಿಗೆ ಅದೆಷ್ಟು ನೋವಿರುತ್ತೋ ಏನೋ. ಇದೀಗ ಅಂತದ್ದೇ ಘಟನೆಯೊಂದು ಜಿಲ್ಲೆಯ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ.

31 ವರ್ಷದ ಭಾರ್ಗವಿ 3 ವರ್ಷದ ದೀಕ್ಷಾ ಮೃತರು. ಭಾರ್ಗವಿ ಮೈಸೂರಿನ ನಿವಾಸಿ. ಐದು ವರ್ಷದ ಹಿಂದೆ ಪಾಂಡವಪುರ ತಾಲೂಕಿನ ಪ್ರದೀಪ್ ಎಂಬಾತನನ್ನ ಮದುವೆಯಾಗಿದ್ದರು. ಮೈಸೂರಿನ ಹೂಟಗಳ್ಳಿಯಲ್ಲಿ ವಾಸವಾಗಿದ್ದ ದಂಪತಿಗೆ ದೀಕ್ಷಾ ಎಂಬ 3 ವರ್ಷದ ಮಗಳು ಇದ್ದಳು.

ಆದ್ರೆ ಈ ದಂಪತಿಯ ನಡುವೆ ಆಗಾಗ ಜಗಳ ಆಗ್ತಾನೆ ಇತ್ತಂತೆ. ಕೌಟುಂಬಿಕ ಕಲಹದಿಂದ ಬೇಸತ್ತ ಭಾರ್ಗವಿ ತನ್ನ ಮೂರು ವರ್ಷದ ಕಂದಮ್ಮನೊಂದಿಗೆ ಕಾವೇರಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಾರುಕಟ್ಟೆಗೆ ಬಂತು ನ್ಯಾನೋ ಎಲೆಕ್ಟ್ರಾನಿಕ್ ಕಾರು : ಏನಿಲ್ಲಾ ವಿಶೇಷತೆ ಇದೆ ಗೊತ್ತಾ..?

ಎಲೆಕ್ಟ್ರಾನಿಕ್ ಬೈಕ್, ಕಾರುಗಳಿಗೆ ಭಾರತದಲ್ಲಿ ಸಿಕ್ಕಪಟ್ಟೆ ಡಿಮ್ಯಾಂಡ್ ಇದೆ. ಪೆಟ್ರೋಲ್ ದರ ಏರಿಕೆಯಾದ ಬೆನ್ನಲ್ಲೇ ಜನ ಎಲೆಕ್ಟ್ರಾನಿಕ್ ಮೊರೆ ಹೋಗುತ್ತಿದ್ದಾರೆ‌.‌ಇದೇ ಕಾರಣಕ್ಕಾಗಿಯೇ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯೂ ಹೆಚ್ಚಳವಾಗುತ್ತಿದೆ. ಇದೀಗ ಭಾರತಕ್ಕೆ ನ್ಯಾನೋ ಎಲೆಕ್ಟ್ರಾನಿಕ್ ಕಾರು

ಬರ, ಬೆಳೆ ನಾಶದಿಂದ ಕಂಗೆಟ್ಟ ರೈತರ ಕಣ್ಣಲ್ಲಿ ನೀರು ತರಿಸಬಾರದು : ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರ ಪರಿಹಾರದ ಹಣ ಬಿಡುಗಡೆಯಾದರೂ, ಕೆಲವು ಬ್ಯಾಂಕ್ ಗಳು ಅದನ್ನ ಸಾಲದ ಮೊತ್ತಕ್ಕೆ ವಜಾ ಮಾಡಿಕೊಳ್ಳುತ್ತಿವೆ. ಯಾದಗಿರಿಯಲ್ಲಿ ಇಂಥದ್ದೊಂದು ಘಟನೆ ನಡೆದಿದೆ. ಈ ಬೆಳವಣಿಗೆ ರೈತರಿಗೂ ಆತಂಕ ತಂದೊಡ್ಡಿದೆ. ಬೆಳೆನಾಶದ

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಬಿಜೆಪಿಯ ಪ್ರೀತಂಗೌಡ ಆಪ್ತರ‌ ಮನೆಯಲ್ಲಿ 10 ಪೆನ್ ಡ್ರೈವ್ ಪತ್ತೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸದ್ಯ ಹಾಸನದಲ್ಲಿ ತಪಾಸಣೆ ನಡೆಸುತ್ತಿದ್ದು, ಪ್ರೀತಂಗೌಡ ಆಪ್ತರ ಮನೆಯಲ್ಲಿ ತಪಾಸಣೆ ನಡೆಸಲಾಗಿದೆ. ಈ ವೇಳೆ ಹತ್ತು ಪೆನ್ ಡ್ರೈವ್

error: Content is protected !!