Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಜವಾಬ್ದಾರಿಯಿಂದ ಮುಕ್ತಳಾಗುತ್ತಿದ್ದೇನೆ, ನನ್ನ ಭುಜದ ಮೇಲಿನ ಭಾರ ಈಗ ಹಗುರವಾಗಿದೆ : ಸೋನಿಯಾ ಗಾಂಧಿ

Facebook
Twitter
Telegram
WhatsApp

ಸುದ್ದಿಒನ್ ವೆಬ್ ಡೆಸ್ಕ್

ನವದೆಹಲಿ,(ಅ.26) : ನಾನು
ಸುಮಾರು 23 ವರ್ಷಗಳ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿ ಈ ಹುದ್ದೆಯಲ್ಲಿದ್ದೆ, ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕೃತವಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದರಿಂದ ನನಗೆ ನಿರಾಳವಾಗಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ನಾನು ನನ್ನ ಕರ್ತವ್ಯವನ್ನು ನನ್ನ ಕೈಲಾದಷ್ಟು ಮಾಡಿದ್ದೇನೆ. ಇಂದು ನಾನು ಈ ಜವಾಬ್ದಾರಿಯಿಂದ ಮುಕ್ತಳಾಗುತ್ತಿದ್ದೇನೆ. ನನ್ನ ಭುಜದ ಮೇಲಿನ ಭಾರ ಈಗ ಹಗುರವಾಗಿದೆ ಇದರಿಂದ ನನಗೆ ಸಮಾಧಾನವಾಗಿದೆ ಎಂದು ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ಹೇಳಿದರು.

ಇದೊಂದು ದೊಡ್ಡ ಜವಾಬ್ದಾರಿಯಾಗಿದ್ದು, ಈಗ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಈ ಜವಾಬ್ದಾರಿಯಿದೆ. ದೇಶದ ಪ್ರಜಾಪ್ರಭುತ್ವ ಮೌಲ್ಯಗಳ ಬಿಕ್ಕಟ್ಟು ಇಂದಿನ ದೊಡ್ಡ ಸವಾಲಾಗಿದೆ. ಕಾಂಗ್ರೆಸ್ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ನಾವು ಅದನ್ನು ಹೇಗೆ ಎದುರಿಸುತ್ತೇವೆ ಎಂಬುದೇ ಸವಾಲಾಗಿದೆ. ಸಂಪೂರ್ಣ ಶಕ್ತಿ ಮತ್ತು ಒಗ್ಗಟ್ಟಿನಿಂದ ನಾವು ಮುನ್ನಡೆಯಬೇಕು ಮತ್ತು ಈ ದಿಸೆಯಲ್ಲಿ ನಾವು ಯಶಸ್ವಿಯಾಗಬೇಕು” ಎಂದು ಅವರು ಹೇಳಿದರು.

ಕಳೆದ ವಾರ ನಡೆದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ 80 ವರ್ಷದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಸೋಲಿಸಿ ಭರ್ಜರಿ ಗೆಲುವು ಸಾಧಿಸಿದ್ದರು.

ಖರ್ಗೆ ಅವರು ಗಾಂಧಿ ಕುಟುಂಬದ ಅನುಮೋದಿತ ಅಭ್ಯರ್ಥಿಯಾಗಿ” ಗೆಲ್ಲುವುದು ಖಚಿತ ಎಂದು ಪ್ರತಿಪಕ್ಷಗಳು ಟೀಕಿಸಿದ್ದವು.

ನಂತರ ಮಾತನಾಡಿದ ಖರ್ಗೆ, ಅವರು ಸೋನಿಯಾ ಗಾಂಧಿಯವರ  ನಾಯಕತ್ವವನ್ನು ಶ್ಲಾಘಿಸಿದರು. ಸೋನಿಯಾ ಗಾಂಧಿ ಯಾವಾಗಲೂ ನಿಷ್ಠಾವಂತರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಅವರು ನೀಡಿದ ಕೊಡುಗೆ ಅಪಾರ ಮತ್ತು ಅಪ್ರತಿಮವಾದದ್ದು. ಅವರ ನಾಯಕತ್ವದಲ್ಲಿ, ಎರಡು ಬಾರಿ ಯುಪಿಎ ಸರ್ಕಾರಗಳು ರಚನೆಯಾದವು ಮತ್ತು ಉದ್ಯೋಗ ಯೋಜನೆ (MGNREGA), ಆಹಾರ ಭದ್ರತಾ ಕಾಯಿದೆ, RTI (ಮಾಹಿತಿ ಹಕ್ಕು) ಕಾಯ್ದೆಯನ್ನು ಆ ಸರ್ಕಾರಗಳಲ್ಲಿ ಜಾರಿಗೊಳಿಸಲಾಯಿತು.  ಎಂದು ನೂತನವಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆಯವರು ಸೋನಿಯಾ ಗಾಂಧಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!