Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರಿನಲ್ಲಿ ಕಾಂಗ್ರೆಸ್ ಟಿಕೆಟ್ ಫೈಟ್, ಮಾಜಿ -ಹಾಲಿ ನಾಯಕರ ಗುದ್ದಾಟ..!

Facebook
Twitter
Telegram
WhatsApp

ತುಮಕೂರು: ಚುನಾವಣೆಗೆ ಇನ್ನು ಒಂದು ವರ್ಷವಿರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಗಾಗಿ ಕಿತ್ತಾಟ ಶುರುವಾಗಿದೆ. ಇನ್ನು ಕುಣಿಗಲ್ ನಲ್ಲಿ ಹಾಲಿ ಶಾಸಕ ಡಾ.ರಂಗನಾಥ್ ಮತ್ತು ಮಾಜಿ ಶಾಸಕ ರಾಮಸ್ವಾಮಿಗೌಡ ನಡುವೆ ಟಿಕೆಟ್ ಫೈಟ್ ಶುರುವಾವಿದ್ದು, ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಮೇಲೆಯೇ ಮಾಜಿ ಶಾಸಕ ರಾಮಸ್ವಾಮಿಗೌಡ ಗರಂ ಆಗಿದ್ದಾರೆ.

ಈ ಸಂಬಂಧ ಮಾತನಾಡಿರುವ ರಾಮಸ್ವಾಮಿ ಗೌಡ, ಟಿಕೆಟ್ ಸಿಕ್ಕಿಲ್ಲ ಎಂದರು ನಾನು ಸ್ಪರ್ಧಿಸುತ್ತೇನೆ. ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಹಾಲಿ ಮಾಜಿ ಎಂಬುದು ಬರುವುದಿಲ್ಲ, ಸಂಬಂಧಿ ಎನ್ನುವುದು ಬರಬಹುದು. ಟಿಕೆಟ್ ಸಿಕ್ಕಿಲ್ಲ ಎಂದರೂ ನಾನು ನಿಂತೆ ನಿಲ್ಲುತ್ತೇನೆ ಗೆದ್ದೆ ಗೆಲ್ಲುತ್ತೇನೆ, ಎಂಎಲ್ಎ ಆಗುತ್ತೇನೆ ಎಂದು ರೆಬೆಲ್ ಆಗಿದ್ದಾರೆ.

ಅವರಿಗೆ ನಾನು ಒಂದು ಎರಡು ಮೂರು ಅಂತ ಚಾನ್ಸ್ ಕೊಟ್ಟುಬಿಟ್ಟಿದ್ದೀನಿ. ಅವರ ಮನಸ್ಸಲ್ಲಿ ಅದು ಉಳಿಯಬೇಕಿತ್ತು. ಚುನಾವಣೆಗೆ ನಿಂತೇ ನಿಲ್ಲುತ್ತೇನೆ. ನನಗೆ ಕಾಂಗ್ರೆಸ್ ಬಲವಿದೆ ಎನ್ನುತ್ತಾರೆ. ಬಿಜೆಪಿ ಆರ್ಭಟದಲ್ಲಿ ತುಮಕೂರು ಸಿಟಿ ಯಾವ ರೀತಿ ಆಗುತ್ತೆ ಎಂಬುದು ಗೊತ್ತಿಲ್ಲ. ಮುದ್ದಹನುಮೇಗೌಡರನ್ನೇ ತಗೋಳ್ತಾ ಇದ್ದೀರಿ. ನಾನು ಕೂಡ ಅವರಂತೆ ಶಾಸಕ ಇದ್ದೀನಿ. ನನಗೂ ಸಿದ್ದರಾಮಣ್ಣ, ಡಿಕೆ ಶಿವಕುಮಾರ್ ಪ್ರಾಮಿಸ್ ಮಾಡಿದ್ದರು. ಟಿಕೆಟ್ ಕೂಡ ಅನೌನ್ಸ್ ಆಗಿತ್ತು. ಆದರೆ ಅನೌನ್ಸ್ ಆಗಿರುವ ಟಿಕೆಟ್ ಮತ್ತೆ ಬದಲಾಯಿಸಿದ್ರು. ಬಳಿಕ ನನಗೆ ಪ್ರಾಮಿಸ್ ಮಾಡಿದ್ದರು. ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡ್ತೀನಿ ಅಂತ. ಈಗ ಮುಂದಿನ ಚುನಾವಣೆ ಬಂತಲ್ಲ ನೋಡ್ತೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉತ್ತರಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ : ಕಾಲ್ತುಳಿತಕ್ಕೆ 80 ಕ್ಕೂ ಹೆಚ್ಚು ಮಂದಿ ಸಾವು…!

ಸುದ್ದಿಒನ್, ಜುಲೈ. 02 : ನವದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 87 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೋಲೆ ಬಾಬಾರವರ ಸತ್ಸಂಗ

ಎಸ್‍ಎಸ್‍ಎಲ್‍ಸಿ, ಪಿಯು ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮ ರೂಪಿಸಿ : ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಸೂಚನೆ

ಚಿತ್ರದುರ್ಗ. ಜುಲೈ.02:  2024-25ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷಾ ಫಲಿತಾಂಶ ವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಲಿತರಿಗೆ ಕ್ಷಮೆ ಕೇಳಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ಇಲ್ಲವಾದರೆ ಉಗ್ರ ಹೋರಾಟ : ಗೋವಿಂದ ಕಾರಜೋಳ ವಿರುದ್ದ ಸಾಮಾಜಿಕ ಸಂಘರ್ಷ ಸಮಿತಿ ಪ್ರತಿಭಟನೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.02 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ಜಾತಿ ನಿಂದನೆಯಾದಾಗ ಕೇಸು ನೀಡದೆ ಹೊಂದಿಕೊಂಡು ಹೋಗಿ

error: Content is protected !!