Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿನಿಮಾ ತೆಗೆಯುವುದು ತುಂಬಾ ಕಷ್ಟದ ಕೆಲಸ : ರಘುಆಚಾರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಜ.16): ಸಿನಿಮಾಕ್ಕಿಂತ ಶಕ್ತಿಶಾಲಿ ಆಯುಧ ಬೇರೆ ಯಾವುದೂ ಇಲ್ಲ ಎಂದು ವಿಧಾನಪರಿಷತ್ ಮಾಜಿ ಸದಸ್ಯ ರಘುಆಚಾರ್ ಹೇಳಿದರು.

ನಿರ್ಮಾಪಕ ಹಾಗೂ ನಟ ಕೆ.ಮಂಜುನಾಥನಾಯ್ಕರವರ ಕಾದಂಬರಿ ಆಧಾರಿತ ಅರಳಿದ ಹೂಗಳು ಚಲನಚಿತ್ರದ ಹಾಡುಗಳ ವೀಡಿಯೋವನ್ನು ಸೋಮವಾರ ಬಂಜಾರ ಭವನದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು.

ಹಿಂದಿನ ಕಾಲದ ಸಿನಿಮಾಗಳು ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡುತ್ತಿದ್ದವು. ಈಗಿನ ಚಿತ್ರಗಳು ವ್ಯಾಪಾರಿಕರಣವಾಗಿರುವುದು ನೋವಿನ ಸಂಗತಿ. ಪದ್ಮಭೂಷಣ ಡಾ.ರಾಜ್‍ಕುಮಾರ್‍ರವರ ಚಿತ್ರಗಳಲ್ಲಿ ಅತ್ಯುತ್ತಮವಾದ ಸಂದೇಶಗಳಿರುತ್ತಿದ್ದವು. ಮನೆಯಲ್ಲಿ ಅಪ್ಪ ಅಮ್ಮ ಮೊದಲು ಮಕ್ಕಳಿಗೆ ಸಂಸ್ಕಾರ ಹೇಳಿಕೊಡಬೇಕು. ನಂತರ ಮಕ್ಕಳನ್ನು ಸತ್ಪಪ್ರಜೆಗಳನ್ನಾಗಿ ಮಾಡುವ ಹೊಣೆಗಾರಿಕೆ ಶಿಕ್ಷಕರುಗಳ ಮೇಲಿದೆ. ಬಜೆಟ್ ಕಡಿಮೆಯಾಗಲಿ, ಜಾಸ್ತಿಯಾಗಿರಲಿ ಸಿನಿಮಾ ತೆಗೆಯುವುದು ತುಂಬಾ ಕಷ್ಟದ ಕೆಲಸ ಎಂದರು.

ಚಿತ್ರದ ನಿರ್ದೇಶಕ ಪುರುಷೋತ್ತಮ್ ಓಂಕಾರ್ ಮಾತನಾಡಿ ಅರಳಿದ ಹೂಗಳು ಚಿತ್ರದಲ್ಲಿ ಸಮಾಜಕ್ಕೆ ಉತ್ತಮವಾದ ಸಂದೇಶವಿದೆ. ಯಾವುದೇ ಒಂದು ಚಿತ್ರ ಯಶಸ್ವಿಯಾಗಬೇಕಾದರೆ ಪ್ರೇಕ್ಷಕರು, ಅಭಿಮಾನಿಗಳು ಮುಖ್ಯ. ಚಿತ್ರದಲ್ಲಿನ ಪ್ರತಿಯೊಂದು ದೃಶ್ಯಗಳಲ್ಲೂ ಒಂದೊಂದು ಸಂದೇಶವಿದೆ. ಮಕ್ಕಳಿಂದ ಹಿಡಿದು ವೃದ್ದರವರೆಗೂ ಎಲ್ಲರೂ ಜೊತೆಯಲ್ಲಿ ಕುಳಿತು ಯಾವುದೇ ಮುಜುಗರವಿಲ್ಲದೆ ವೀಕ್ಷಬಹುದಾದ ಚಿತ್ರವನ್ನು ಕೆ.ಮಂಜುನಾಥ ನಾಯ್ಕ ಸಮರ್ಪಿಸಿದ್ದಾರೆಂದು ಗುಣಗಾನ ಮಾಡಿದರು.

ನಿರ್ಮಾಪಕ ಹಾಗೂ ನಟ ಕೆ.ಮಂಜುನಾಥನಾಯ್ಕ ಮಾತನಾಡಿ ನಾನು ಸಿನಿಮಾ ರಂಗಕ್ಕೆ ಬರುತ್ತೇನೆಂದು ಊಹಿಸಿರಲಿಲ್ಲ. ವೃತ್ತಿಯಲ್ಲಿ ಶಿಕ್ಷಕನಾಗಿ ನಿವೃತ್ತಿಯಾದ ಮೇಲೆ ಬಂದ ಹಣದಲ್ಲಿ ಸಿನಿಮಾ ಮಾಡಿದ್ದೇನೆ. ಸೀತಮ್ಮನ ಮಗ ಮೊದಲು ಚಿತ್ರ ಯಶಸ್ವಿಯಾಯಿತು.

ಹಣ ಗಳಿಸುವ ಆಸೆಯಿಂದ ಚಿತ್ರವನ್ನು ಮಾಡಿಲ್ಲ. ಹೆಣ್ಣು ಅಬಲೆಯಲ್ಲ. ಸಬಲೆ, ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕೆಂಬ ಸಂದೇಶವನ್ನು ಸಮಾಜಕ್ಕೆ ನೀಡುವುದು ನನ್ನ ಉದ್ದೇಶ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.

ಎಸ್.ಆರ್.ಎಸ್.ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ.ಎ.ಲಿಂಗಾರೆಡ್ಡಿ, ಟೌನ್ ಕ್ಲಬ್ ಕಾರ್ಯದರ್ಶಿ ಚಿತ್ರಲಿಂಗಪ್ಪ, ಖಜಾಂಚಿ ಅಮಿತ್‍ಜೈನ್, ಗೊಡಬನಹಾಳ್‍ನಲ್ಲಿರುವ ಕಾನ್ವೆಂಟ್‍ನ ಕಾರ್ಯದರ್ಶಿ ಪಿ.ಟಿ.ಪರಮೇಶ್ವರಪ್ಪ, ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ಶಿವಕುಮಾರ್, ರಾಜೇಂದ್ರಾಚಾರ್, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಚಿತ್ರದ ನಟಿ ಧನಲಕ್ಷ್ಮಿ ಸಹ ನಿರ್ದೇಶಕ ಎಂ.ಸುನಿತ್‍ಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದು, ಅರಳಿದ ಹೂಗಳು ಚಿತ್ರ ಯಶಸ್ವಿಯಾಗಿ ತೆರೆಕಾಣಲಿ ಎಂದು ಶುಭ ಹಾರೈಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!