Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಂಗಾಭದ್ರಾ ಜಲಾಶಯದ ಗೇಟ್ ಚೈನ್ ಕಟ್ : ಡಿಕೆ ಶಿವಕುಮಾರ್ ಪರಿಶೀಲನೆ..!

Facebook
Twitter
Telegram
WhatsApp

 

ವಿಜಯನಗರ: ತುಂಗಾಭದ್ರಾ ಜಲಾಶಯದ 19ನೇ ಗೇಟಿನ ಚೈನ್ ಕಟ್ ಆಗಿತ್ತು. ಇದರಿಂದ 60 ಟಿಎಂಸಿ ನೀರು ಹೊರಗೆ ಹೋಗಿತ್ತು. ಈ ಘಟನೆಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೇಟ್ ಲಿಂಕ್ ಚೈನ್ ಕಟ್ ಆಗಿರುವ ಜಾಗಕ್ಕೆ ಭೇಟಿ ನೀಡಿ, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದುರಸ್ತಿ ಕಾರ್ಯ ಮಾಡುವುದಕ್ಕೆ ಹಿಡಿಯುವ ಸಮಯದ ಬಗ್ಗೆಯೂ ಮಾಹಿತಿ ತಿಳಿದುಕೊಂಡರು.

 

ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಡ್ಯಾಂನ ನೀಲನಕ್ಷೆ ತೋರಿಸಿದ ಅಧಿಕಾರಿಗಳು ಇಂಚಿಂಚು ಮಾಹಿತಿಯನ್ನು ನೀಡಿದರು. ಡ್ಯಾಂ ಪರಿಶೀಲನೆ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇಲ್ಲಿನ ನೀರು ಕರ್ನಾಟಕ, ಆಂಧ್ರ, ತೆಲಂಗಾಣ ಜನತೆಯ ಜೀವನಾಡಿ ಇದು. 13 ಲಕ್ಷ ರೈತರಿಗೆ ನೀರು ಒದಗಿಸುವ ಜಲಾಶಯವಿದು. ಈ ರೀತಿಯ ಪರಿಸ್ಥಿತಿ ಕಂಡು ಬೇಸರವಾಗಿದೆ. ಇಂತಹ ಡ್ಯಾಂಗೆ ಗೇಟ್ ಚೈನ್ ಕಟ್ ಆಗಿದ್ದು ಆಶ್ಚತ್ಯಕರ ಸಂಗತಿ. ನಿನ್ನೆ ಮಧ್ಯರಾತ್ರಿ 10 ಗೇಟ್ ಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ 19ನೇ ನಂಬರಿನ ಗೇಟ್ ಕಿಚ್ಚಿ ಹೋಗಿದೆ.

 

ಇದರಿಂದ ಡ್ಯಾಂಗೆ ಡ್ಯಾಮೇಜ್ ಆಗುವ ಸಾಧ್ಯತೆ ಇತ್ತು. ಆದರೆ ನಮ್ಮ ಅಧಿಕಾರುಗಳು ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ. ಎಲ್ಲಾ ಗೇಟ್ ಗಳನ್ನು ತೆಗೆದು ನೀರು ಬಿಟ್ಟಿದ್ದಾರೆ. ಈಗ ಗೇಟ್ ಕೊಚ್ಚಿ ಹೋಗಿರುವುದಕ್ಕೆ ನಾರಾಯಣ ಹಾಗೂ ಹಿಂದೂಸ್ತಾನಿ ಸ್ಟೀಲ್ ಕಂಪನಿಯನ್ನು ಸಂಪರ್ಕ‌ ಮಾಡಿದ್ದೇವೆ. ಗೇಟ್ ಮಾದರಿಯನ್ನು ತಯಾರಿಸಲು ಹೇಳಿದ್ದೇವೆ. ಮುರಿದು ಹೋಗಿರುವ ಗೇಟನ್ನು ಶೀಘ್ರವೇ ಸರಿ ಪಡಿಸುವ ಕೆಲಸವಾಗುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!