Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಂತ್ರ ಕುತಂತ್ರದಿಂದ ಅತಿಥಿ ಉಪನ್ಯಾಸಕರ ಬದುಕನ್ನ ಇನ್ನಷ್ಟು ಅಭದ್ರಗೊಳಿಸಿದೆ : ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು: ಅತಿಥಿ ಉಪನ್ಯಾಸಕರ ವೇತನವನ್ನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಟ್ವೀಟ್ ಮಾಡಿ ಬೇಸರ ಹೊರ ಹಾಕಿರುವ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸಿರುವ @BJP4Karnataka ಸರ್ಕಾರ, ಅವರ ಕಾರ್ಯಭಾರದ ಎಂಟು ಗಂಟೆಯ ಅವಧಿಯನ್ನು ಹಿಂದಿನಂತೆಯೇ ಉಳಿಸಬೇಕು ಮತ್ತು ಈಗಾಗಲೇ ನಿವೃತ್ತಿಗೆ ಸಮೀಪ ಇರುವ ಅತಿಥಿ ಉಪನ್ಯಾಸಕರೂ ಸೇರಿದಂತೆ ಎಲ್ಲರಿಗೂ ಸೇವಾ ಭದ್ರತೆಯನ್ನು ಒದಗಿಸಬೇಕು.

ಕಾರ್ಯಭಾರವನ್ನು ದುಪ್ಪಟ್ಟು ಗೊಳಿಸುವ ನಿರ್ಧಾರದಿಂದಾಗಿ ಸುಮಾರು 14-15 ಸಾವಿರ ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಹೊಸದಾಗಿ ಅತಿಥಿ ಉಪನ್ಯಾಸಕರ ನೇಮಕಾತಿಯ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿರುವುದು ಈ ಅನುಮಾನವನ್ನು ಬಲಪಡಿಸಿದೆ.

ಅತಿಥಿ ಉಪನ್ಯಾಸಕರ ಗೌರವಧನವನ್ನು ಹೆಚ್ಚಿಸುವ ಜೊತೆಯಲ್ಲಿ ಅವರ ತರಗತಿಗಳ ಅವಧಿಯನ್ನು ಹೆಚ್ಚಿಸಿರುವ @BJP4Karnataka ಸರ್ಕಾರ,
ಅರ್ಧದಷ್ಟು ಅತಿಥಿ ಉಪನ್ಯಾಸಕರನ್ನು ಮನೆಗೆ ಕಳಿಸಲು ಹೊರಟಿರುವುದು ಸ್ಪಷ್ಟವಾಗಿದೆ. ಇದು ನಿರಂತರ ಶೋಷಿತ ಅತಿಥಿ ಉಪನ್ಯಾಸಕರಿಗೆ ಬಗೆದಿರುವ ದ್ರೋಹವಾಗಿದೆ.

ಅತಿಥಿ ಉಪನ್ಯಾಸಕರ 8 ಗಂಟೆಯ ತರಗತಿಗಳಿಗೆ ನೀಡುತ್ತಿದ್ದ 11-12 ಸಾವಿರ ಗೌರವಧನವನ್ನ ರೂ.30-32 ಸಾವಿರಕ್ಕೆ ಹೆಚ್ಚಿಸಿರುವ @BJP4Karnataka ಸರ್ಕಾರ, ಅವರ ತರಗತಿಗಳ ಅವಧಿಯನ್ನು 8 ಗಂಟೆಯಿಂದ 16 ಗಂಟೆಗೆ ಹೆಚ್ಚಿಸಿ ಒಂದು ಕೈಯಲ್ಲಿ ಕೊಟ್ಟಿರುವುದನ್ನು ಇನ್ನೊಂದು ಕೈಯಿಂದ ಕಿತ್ತುಕೊಂಡಿದೆ.

ಗೌರವಧನ ಹೆಚ್ಚಿಸಿ, ಸೇವಾ ಸೌಲಭ್ಯ ಒದಗಿಸಿ ಅತಿಥಿ ಉಪನ್ಯಾಸಕರ ಬದುಕಿಗೆ ನೆರವಾಗಬೇಕಾಗಿದ್ದ @BJP4Karnataka ತನ್ನ ತಂತ್ರ-ಕುತಂತ್ರದ ಕ್ರಮಗಳ ಮೂಲಕ ಅವರ ಬದುಕನ್ನು ಇನ್ನಷ್ಟು ಅಭದ್ರಗೊಳಿಸಿ ವಿಶ್ವಾಸದ್ರೋಹ ಎಸಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!