Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತ್ರಿಶೂಲ ಹಿಡಿದು ಕೋಟೆನಾಡಿಗೆ ಕಾಲಿಟ್ಟ ಹಿಂದೂ ಮಹಾಗಣಪತಿ : ಭಕ್ತಿಯಲ್ಲಿ ಮಿಂದೆದ್ದ ಯುವ ಸಮೂಹ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಸೆ.09) : ಕೈಯಲ್ಲಿ ತ್ರಿಶೂಲ ಹಿಡಿದು ವಿರಾಜಮಾನವಾಗಿ ಕೋಟೆನಾಡಿಗೆ ಬಂದ ಹಿಂದೂ ಮಹಾಗಣಪತಿ.

ಗುರುವಾರ ಬೆಳಗ್ಗೆ ಚಿತ್ರದುರ್ಗದ ಹೊರವಲಯದ ಮಾದಾರ ಚೆನ್ನಯ್ಯ ಗುರುಪೀಠದಿಂದ ಗಣಪತಿ ಪುರ ಪ್ರವೇಶ ಮಾಡಿತು. ಬೃಹತ್ ಲಾರಿಯಲ್ಲಿ ಮಠದ ಆವರಣಕ್ಕೆ ಗಣಪತಿ ಆಗಮಿಸುತ್ತಿದ್ದಂತೆ ಜಯಘೋಷಗಳು ಮೊಳಗಿದವು. ಬಳಿಕ ಸಂಪ್ರದಾಯದಂತೆ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಗಣೇಶನಿಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.

ಮಠದ ಆವರಣದಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರ ನೇತೃತ್ವದಲ್ಲಿ ಗಣೇಶನ ಮೂರ್ತಿಯನ್ನು ಎಲ್ಲಿಲ್ಲದ ಸಡಗರ ಮತ್ತು ಸಂಭ್ರಮದಿಂದ ಸರ್ಕಾರಿ ವಿಜ್ಞಾನ ಕಾಲೇಜು ಎದುರಿನ ಜೈನಧಾಮಕ್ಕೆ ತರಲಾಯಿತು. ಗಣಪತಿ ಆಗಮನದ ಸುದ್ದಿ ತಿಳಿದ ನಗರದ ಜನತೆ ರಸ್ತೆ ಬದಿಯಲ್ಲಿ ನಿಂತು ಕೈ ಮುಗಿದು  ಜೈಕಾರ ಹಾಕುತ್ತ ದರ್ಶನ ಪಡೆದು ಭಕ್ತಿ ಸಮರ್ಪಿಸಿ ಪುನೀತರಾದರು.

ಗಣಪತಿಯನ್ನು ಪ್ರತಿಷ್ಠಾಪನ ಸ್ಥಳಕ್ಕೆ ತರುತ್ತಿದ್ದಂತೆ ಯುವಸಮುದಾಯ ಕಣ್ತುಂಬಿಕೊಂಡು ನಮಿಸಿದರು. ಸೆಲ್ಫಿ ತೆಗದು ಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈಗಾಗಲೇ ಪ್ರತಿಷ್ಠಾಪನೆಗೆ ಸಿದ್ಧತೆ ಅಂತಿಮಗೊಂಡಿದ್ದು, ಶುಕ್ರವಾರದ ಪೂಜೆ ಸಿದ್ಧತೆಗಳು ಪ್ರಾರಂಭವಾಗಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!