Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಂದಾಯ ತೆರಿಗೆ ಹೆಚ್ಚಿಸಿರುವುದು ಮೌಲ್ವಿಗಳಿಗೆ ಹಣ ಕೊಡುವುದಕ್ಕೆ : ಆರ್ ಅಶೋಕ್ ವಾಗ್ದಾಳಿ

Facebook
Twitter
Telegram
WhatsApp

ಬೆಳಗಾವಿ: ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಜನರ ತೆರಿಗೆ ಹಣದಿಂದ ಮೌಲ್ವಿಗಳಿಗೆ ಹಣ ನೀಡಲಾಗುತ್ತಿದೆ. ಅದಕ್ಕೆ ತೆರಿಗೆ ಹೆಚ್ಚಳ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಆರ್ ಅಶೋಕ್, ಎಲ್ಲದಕ್ಕೂ ತೆರಿಗೆ ಹೇರುವ ಸರ್ಕಾರವಿದು. ಸ್ಟಾಂಪ್ ಡ್ಯೂಟಿ ಹೆಚ್ಚಳ ಮಾಡಿ, ಜನರಿಗೆ ಹೆಚ್ಚಿನ ಹೊರೆ ಆಗಿದೆ. ರೈತರ ಸಮಸ್ಯೆ ಬಗ್ಗೆ ಇವರಿಗೆ ಗಮನವಿಲ್ಲ. ರೈತರಿಗೆ 25 ಸಾವಿರ ಕೊಡಿ ಎಂದು ಆಗ್ರಹಿಸಿದ್ದೇವೆ. ಬೆಳಗಾವಿ ಅಧಿವೇಶನವನ್ನು ಇನ್ನೂ ನಾಲ್ಕು ದಿನ ಮುಂದುವರೆಸಲು ಕೋರಿದ್ದೇವೆ. ಸರ್ಕಾರ ಅದ್ಯಾವುದಕ್ಕೂ ಸ್ಪಂದನೆ ತೋರುತ್ತಿಲ್ಲ. ತೆರಿಗೆ ಹೆಚ್ಚಳ ಮಾಡಿರುವುದು, ಮೌಲ್ವಿಗಳಿಗೆ ಹಣ ನೀಡಿರುವುದಕ್ಕೆ. ಈ ಸರ್ಕಾರ ಬೇಜವಬ್ದಾರಿ ಸರ್ಕಾರ.

ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿರುವ ಬಗ್ಗೆ ಬುಧವಾರ ಪ್ರತಿಭಟನೆ ನಡೆಸುತ್ತೇವೆ‌. ರಾಜ್ಯಕ್ಕಿಂತಲೂ ತೆಲಂಗಾಣದ ಮೇಲೆ ಈ ರಾಜ್ಯಕ್ಕೆ ಆಸಕ್ತಿ ಜಾಸ್ತಿ. ಇದು ದಿವಾಳಿಯಾಗಿರುವ ಸರ್ಕಾರ. ಉತ್ತರ ಕರ್ನಾಟಕ ಭಾಗದ ಜನರ ಹಿತವನ್ನು ಈ ಸರ್ಕಾರ ಕಡೆಗಣಿಸಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜಾತಿಗಣತಿ ವರದಿ, ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು, ಅಕ್ಟೋಬರ್, 05 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ

ಪ್ರಧಾನಿ ಕಡೆಯಿಂದ ಗುಡ್ ನ್ಯೂಸ್ : ಇಂದು ರೈತರ ಖಾತೆಗೆ ಬರಲಿದೆ 2 ಸಾವಿರ ರೂಪಾಯಿ

  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ರೈತರ ಖಾತೆಗೆ ಹಣ ಹಾಕಲಾಗುತ್ತದೆ. ವರ್ಷಕ್ಕೆ ಆರು ಸಾವಿರದಂತೆ ಮೂರು ಬಾರಿ 2 ಸಾವಿರ ಹಾಕಲಾಗುತ್ತದೆ. ಫಲಾನುಭವಿ ರೈತರು ಈಗಾಗಲೇ ಇದರ ಲಾಭ

TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಕೊಟ್ಟ ನಟಿ‌ ಸಂಜನಾ ಹಾಗೂ ನಟ ವಿರಾಟ್

Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್

error: Content is protected !!