Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ ಎಸ್ ಸಿ ಹುದ್ದೆಗೆ ಅರ್ಜಿ ಆಹ್ವಾನ : ಕನ್ನಡ ಸೇರಿ ಪ್ರಾದೇಶಿಕ ಭಾಷೆ ಮಾತನಾಡುವವರು ಏನು ಮಾಡಬೇಕು.? : ಕುಮಾರಸ್ವಾಮಿ ಪ್ರಶ್ನೆ

Facebook
Twitter
Telegram
WhatsApp

 

ಕನ್ನಡದ ಕತ್ತು ಹಿಚುಕುವುದನ್ನೇ ನಿತ್ಯ ಕಾಯಕ ಮಾಡಿಕೊಂಡಿರುವ ಬಿಜೆಪಿ ಆಡಳಿತಕ್ಕೆ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಮುಗಿಸಲೇಬೇಕು ಎನ್ನುವ ಹಪಾಹಪಿ, ತವಕ, ಹಠ ಉತ್ಕಟವಾಗಿದೆ ಎನ್ನುವುದಕ್ಕೆ ಇಲ್ಲಿದೆ ಹೊಸ ಸಾಕ್ಷಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಕ್ರೋಶ ಹೊರ ಹಾಕಿದ್ದಾರೆ.

ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ?

ಗಡಿ ಭದ್ರತಾ ಪಡೆ, ಕೇಂದ್ರೀಯ ಕೈಗಾರಿಕಾ ಪಡೆ, ಕೇಂದ್ರ ಪೊಲೀಸ್ ಮೀಸಲು ಪಡೆ, ಇಂಡೋ ಟಿಬೆಟಿಯನ್ ಗಡಿ ಪೊಲೀಸ್, ಸಶಸ್ತ್ರ ಸೀಮಾಬಲ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್, ಮಾದಕ ವಸ್ತು ನಿಯಂತ್ರಣಾ ಇಲಾಖೆ ಸೇರಿ ಹಲವು ವಿಭಾಗಗಳಿಗೆ ಪೇದೆಗಳ ಆಯ್ಕೆಗೆ ಜನವರಿಯಲ್ಲಿ ಪರೀಕ್ಷೆ ನಡೆಯಲಿದೆ

ಈ ಪರೀಕ್ಷೆ ಕೇವಲ ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಇರುತ್ತದೆ. ಅಲ್ಲಿಗೆ ಹಿಂದಿ ಭಾಷಿಕರು ಬಿಟ್ಟರೆ ಬೇರೆ ಯಾರೂ ಆಯ್ಕೆ ಆಗಲೇಬಾರದು ಎನ್ನುವ ಹುನ್ನಾರ ಇದರಲ್ಲಿ ಅಡಗಿದೆ. ನನ್ನ ಅಭಿಪ್ರಾಯದಲ್ಲಿ, ಇದು ಕನ್ನಡ ವಿರೋಧಿ ಅಷ್ಟೇ ಅಲ್ಲ; ಭಾರತವನ್ನು ಉತ್ತರ, ದಕ್ಷಿಣ ಎಂದು ವಿಭಜಿಸಲು ಕೇಂದ್ರ ಬಿಜೆಪಿ ಸರಕಾರವೇ ಕೊಡುತ್ತಿರುವ ಕುಮ್ಮಕ್ಕು.

ಕೇಂದ್ರ ಬಿಜೆಪಿ ಸರಕಾರ ಈ ಅಪಾಯದ ಅರಿವು ಮಾಡಿಕೊಂಡು, ಕೂಡಲೇ ಈ ಕನ್ನಡ ವಿರೋಧಿ ಆದೇಶ ಹಿಂಪಡೆದು, ಹೊಸ ಆದೇಶ ಹೊರಡಿಸಿ ಕನ್ನಡವೂ ಸೇರಿ ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಇಲ್ಲವಾದರೆ, ಬೀದಿಗಿಳಿದು ಕನ್ನಡಿಗರ ಶಕ್ತಿ ಏನೆಂದು ತೋರಿಸಬೇಕಾಗುತ್ತದೆ.

ಕೋಟಿ ಕಂಠ ಗಾಯನ ಎಂದರೆ ಕೋಟಿಗೂ ಹೆಚ್ಚು ಕನ್ನಡ ಕಂಠಗಳಿಗೆ ಜೀವ ತುಂಬುವುದು, ಅನ್ನದ ದಾರಿ ತೋರಿಸುವುದು, ಬದುಕಿನ ಖಾತರಿ ಕೊಡುವುದು. ಕೇವಲ ನಾಲಿಗೆ ಮೇಲೆ ಕನ್ನಡ ಎಂದು ಹೇಳಿ, ಮನದಾಳದಲ್ಲಿ ಅದೇ ಕನ್ನಡದ ಮೇಲೆ ವಿಷ ಕಕ್ಕುವುದಲ್ಲ. ಅದನ್ನು ಕನ್ನಡಿಗರು ಎಂದಿಗೂ ಸಹಿಸುವುದೂ ಅಲ್ಲ.

ನಿನ್ನೆಯಷ್ಟೇ ಕೋಟಿ ಕಂಠ ಗಾಯನ ಕಾರ್ಯಕ್ರಮ ಮಾಡಿದ ರಾಜ್ಯ ಬಿಜೆಪಿ ಸರಕಾರ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಏನು ಹೇಳುತ್ತದೆ?. ಕೋಟಿ ಕಂಠ ಗಾಯನ ಎನ್ನುತ್ತಲೇ ಕನ್ನಡದ ಕತ್ತು ಸೀಳುವುದಾ? ಕನ್ನಡಿಗರ ಅನ್ನ ಕಸಿದುಕೊಳ್ಳುವುದಾ? ಕನ್ನಡಿಗರ ಹಕ್ಕುಗಳಿಗೆ ಮರಣಶಾಸನ ಬರೆಯುವುದಾ? ಕನ್ನಡಿಗರಿಗೆ ಬೇಕಿದೆ ಉತ್ತರ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯುವ ಪೀಳಿಗೆ ದುಶ್ಚಟಗಳಿಂದ ದೂರವಿರಿ : ಎ.ಎಸ್ಪಿ ಕುಮಾರಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.02  : ಡ್ರಗ್ಸ್ ಸೇವನೆ ಮತ್ತು ಮಾರಾಟದಿಂದ ದೇಶವೇ ಹಾಳಾಗುತ್ತದೆ. ಹಾಗಾಗಿ ಯುವ ಪೀಳಿಗೆ ದುಶ್ಚಟಗಳಿಂದ

ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಡಾ.ಫ.ಗು.ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

  ಚಿತ್ರದುರ್ಗ. ಜುಲೈ.02:   ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ. ಫ.ಗು. ಹಳಕಟ್ಟಿಯವರ ಸಾಹಿತ್ಯ ಸೇವೆ ಅವಿಸ್ಮರಣೀಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಚಿತ್ರದುರ್ಗದಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತ ತರಬೇತಿ : ಅರ್ಜಿ ಸಲ್ಲಿಸಲು ಜುಲೈ 13 ಕೊನೆಯ ದಿನ

    ಸುದ್ದಿಒನ್, ಚಿತ್ರದುರ್ಗ, ಜುಲೈ.02 : ನಗರದ ರುಡ್‌ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತವಾಗಿ ಈ ಕೆಳಕಂಡ ತರಬೇತಿಯನ್ನು ನೀಡಲಾಗುತ್ತದೆ. 1. ಎಲೆಕ್ಟ್ರಿಕ್  ರಿವೈಂಡಿಂಗ್ ಮತ್ತು ಪಂಪ್ ಸೆಟ್ ರೀಪೇರಿ ತರಬೇತಿ 2.ಪೋಟೋಗ್ರಫಿ

error: Content is protected !!