Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ : ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ

Facebook
Twitter
Telegram
WhatsApp

 

ದಾವಣಗೆರೆ (ಸೆ.08) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2022-23ನೇ ಶೈಕ್ಷಣಿಕ ಸಾಲಿನ (ಜುಲೈಅವೃತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಲಿಬ್.ಐಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಎಂ.ಎ, ಎಂ.ಕಾಂ,ಎಂ.ಎ, ಎಂ.ಸಿ.ಜೆ, ಎಂ.ಲಿಬ್.ಐ.ಎಸ್ಸಿ, ಎಂ.ಬಿ.ಎ, ಎಂ.ಎಸ್ಸಿ, ಸ್ನಾತಕ, ಸ್ನಾತಕೋತ್ತರ ಪದವಿಗಳಿಗೆ ಮತ್ತು ಪಿ.ಜಿ.ಡಿಪ್ಲೊಮಾ

, ಡಿಪ್ಲೋಮಾ, ಸರ್ಟಿಫಿಕೇಟ್, ಕೋರ್ಸಗಳಿಗೆ ಪ್ರವೇಶಾತಿ ಪ್ರಕ್ರಿಯೆಯು ಈಗಾಗಲೇ ಜೂ.20 ರಿಂದ ಆರಂಭವಾಗಿರುತ್ತದೆ.

ಆಸಕ್ತ ವಿದ್ಯಾರ್ಥಿಗಳು ಕ.ರಾ.ಮು.ವಿ.ಯ ಅಧಿಕೃತ ವೆಬ್‍ಸೈಟ್
www.ksoumysuru.ac.in  ಮೂಲಕ ಮೇಲ್ಕಂಡ ಪದವಿಗಳಿಗೆ ಕೋರ್ಸಗಳಿಗೆ  ಆನ್‍ಲೈನ್ ಅಡ್ಮಿಷನ್ ಪೋರ್ಟಲ್  ಮೂಲಕ ಅರ್ಜಿಯನ್ನು ಭರ್ತಿ ಮಾಡಿ,  ದಾವಣಗೆರೆ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕವನ್ನು ಪಾವತಿಸಿ ಪ್ರವೇಶಾತಿಯನ್ನು ಪಡೆಯಬಹುದಾಗಿದೆ. ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ  ಮತ್ತು ಆಟೋ, ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ ಕೋರ್ಸ್‍ಗಳನ್ನು ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.

ದಾವಣಗೆರೆ, ಹಾವೇರಿ ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್

www.ksoumysuru.ac.in
ವೀಕ್ಷಿಸುವುದು ಅಥವಾ ಮೊ.ನಂ. 9916009318, 8095939359, 6363739884, 9008905457 ಕರೆ ಮಾಡುವುದು ನಂತರ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ ಜೆ.ಹೆಚ್.ಪಟೇಲ್ ಬಡಾವಣೆ, ಶ್ಯಾಮನೂರು ಹಿಂಬಾಗ, ನಾಗನೂರು ರಸ್ತೆಯಲ್ಲಿರುವ ಕಛೇರಿಗೆ ಖುದ್ದು ಭೇಟಿ ಮಾಡುವಂತೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!