Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಡಗರ ಸಂಭ್ರಮದಿಂದ ನೆರವೇರಿದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ, ನಾಳೆ ರಥೋತ್ಸವ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ, ಮಾರ್ಚ್. 18 : ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಇಂದು ಸ್ವಾಮಿಯ ಕೆಂಡಾರ್ಚನೆ ಕಾರ್ಯಕ್ರಮ ನಡೆಯಿತು.

ಇಂದು ಬೆಳಿಗ್ಗೆ ಸ್ವಾಮಿಗೆ ಹೂವಿನ ಉತ್ಸವ ನಡೆದಿದ್ದು, ನಂತರ ಪಲ್ಲಕ್ಕಿಯಲ್ಲಿ ಸ್ವಾಮಿಯನ್ನು ಕುಳ್ಳರಿಸಿ ದೇವಾಲಯದ ಸುತ್ತಾ-ಮುತ್ತಾ ಪ್ರದೇಶದಲ್ಲಿ ಮೆರವಣಿಗೆಯನ್ನು ನಡೆಸಲಾಯಿತು. ರಥೋತ್ಸವದ ಅಂಗವಾಗಿ ಸ್ವಾಮಿಗೆ ಕಂಕಣಧಾರಣೆ, ಆಶ್ವೋತ್ಸವ, ವೃಷಭೋತ್ಸವ ಕಾರ್ಯಕ್ರಮ ನಡೆಯಿತು.

ಕೆಂಡಾರ್ಚನೆ ಸಮಯದಲ್ಲಿ ಕಡೂರಿನಿಂದ ಬಂದಿದ್ದ ಚನ್ನವೀರಪ್ಪ ಮತ್ತು ತಂಡದವರು ಸ್ವಾಮಿಯ ಮುಂದೆ ವೀರಭದ್ರ ಸ್ವಾಮಿಯ ಒಡಪುಗಳನ್ನು ಹೇಳುವುದರ ಮೂಲಕ ಪಲ್ಲಕ್ಕಿಯ ಮೆರವಣಿಗೆಯನ್ನು ನಡೆಸಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಆಗಮಿಸಿದ ಭಕ್ತಾಧಿಗಳು ಮಾವಿನಹಳ್ಳಿ ಬಸವೇಶ್ವರ ಮಹಾರಾಜ್ ಕೀ ಜೈ, ವೀರಭದ್ರ ಸ್ವಾಮಿಜೀ ಕೀ ಎಂಬ ಘೋಷಣೆಗಳು ಕೇಳಿ ಬಂದವು.

ಸ್ವಾಮಿಯನ್ನು ಕುಳ್ಳರಿಸಿದ ಪಲ್ಲಕ್ಕಿಯನ್ನು ವಿವಿಧ ರೀತಿಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಅದರಲ್ಲಿ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಮೆರವಣಿಗೆಯನ್ನು ನಡೆಸಲಾಯಿತು. ನಂತರ ದೇವಾಲಯದ ಆವರಣದಲ್ಲಿ ನಿರ್ಮಾಣ ಮಾಡಲಾದ ಕೆಂಡದ ಕುಂಡದಲ್ಲಿ ಸ್ವಾಮಿಯ ಪಲ್ಲಕ್ಕಿಯನ್ನು ಹೊತ್ತ ಭಕ್ತಾಧಿಗಳು ಅದರ ಮೇಲೆ ಆಗಮಿಸುವುದರ ಮೂಲಕ ಕೆಂಡಾರ್ಚನೆ ಕಾರ್ಯಕ್ರಮವನ್ನು ನೇರವೇರಿಸಲಾಯಿತು.

ಮಾರ್ಚ್ 19 ರಂದು ಸಂಜೆ 4 ಗಂಟೆಗೆ ಸ್ವಾಮಿಗೆ ಹೂವಿನ ಪಲ್ಲಕ್ಕಿ ಉತ್ಸವದ ನಂತರ 5 ಗಂಟೆಗೆ ಶ್ರೀ ಸ್ವಾಮಿಯ ರಥೋತ್ಸವ ಕಾರ್ಯಕ್ರಮ ನಡೆಯಲಿದೆ. ಮಾ.20 ರಂದು ಸಂಜೆ 5 ಕ್ಕೆ ಕಂಕಣ ವಿಸರ್ಜನೆ ಹಾಗೂ ಮಹಾ ಮಹಾಮಂಗಳಾರತಿಯೊಂದಿಗೆ ಸ್ವಾಮಿಯ ಸೇವಾ ಕಾರ್ಯಕ್ರಮ ಮುಕ್ತಾಯವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!