Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಟಿ ವೃಕ್ಷ ಅಭಿಯಾನ : ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಡಲಾಗುವುದು : ದೇನಾ ಭಗತ್ ಸ್ವಾಮೀಜಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

 

ಸುದ್ದಿಒನ್, ಚಳ್ಳಕೆರೆ:  ಕೋಟಿ ವೃಕ್ಷ ಅಭಿಯಾನದಡಿ ಔಷಧಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಉಪಯೋಗವಾಗುವಂತಹ ಗಿಡಗಳನ್ನು ಬೆಳೆಸಲಾಗುತ್ತದೆ. ಅಮೃತ ಮಹಲ್ ಕಾವಲಿನಲ್ಲಿ ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೇಖಲಗೆರೆ ಗ್ರಾಮದ ರಾಜಯೋಗ ವಿದ್ಯಾ ಶ್ರಮದ ದೇನಾ ಭಗತ್ ಸ್ವಾಮೀಜಿ ಹೇಳಿದರು.

ಚಳ್ಳಕೆರೆ ತಾಲೂಕಿನ  ರೇಕಲಗೆರೆ ಅಮೃತ್ ಮಹಲ್ ಕಾವಲಿನಲ್ಲಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,  ಸರ್ಕಾರದ ಒಪ್ಪಿಗೆಯಂತೆ ರಾಜ್ಯಪಾಲರ ಅಂಕಿತವಾಗಿ ನಮ್ಮ ಟ್ರಸ್ಟ್ ಸುಪರ್ದಿಗೆ 1500 ಎಕರೆ ಕಾವಲು ಭೂಮಿಯನ್ನು ಮೂವತ್ತು ವರ್ಷದ ಅವಧಿಗೆ ನೀಡಲಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಪರಿಸರ ಸಂರಕ್ಷಣೆ, ಔಷಧೀಯ ಗಿಡಗಳ ಬೆಳವಣಿಗೆ, ಜಾನುವಾರುಗಳಿ ಹುಲ್ಲುಗಾವಲು ಮತ್ತು ಭೂಮಿಯ ಫಲವತ್ತತೆ ಕಾಪಾಡುವ ಜವಾಬ್ದಾರಿ ನೋಡಿಕೊಳ್ಳಬೇಕಿದೆ.

ಇದರಂತೆ ಈಗಾಗಲೇ ಬೇವು, ಅರಳಿ, ಅತ್ತಿ, ಹೊಂಗೆ, ಹುಣಸೆ, ಗೋಣಿನಲ್ಲಿ ಸೇರಿದಂತೆ ವಿವಿಧ ತಳಿಯ ಐವತ್ತು ಸಾವಿರ ಗಿಡ ನೆಡಲಾಗಿದೆ. ಟ್ಯಾಂಕರ್ ಮೂಲಕ ನೀರು ಹಾಕಲಾಗುತ್ತದೆ. ಜಾನುವಾರುಗಳಿಗಾಗಿ ಗೋಕಟ್ಟೆ ಮತ್ತು ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡ ನಡೆಸಲು ಕ್ರಮವಹಿಸಲಾಗಿದೆ.

ಜಾನುವಾರುಗಳ ಹುಲ್ಲುಗಾವಲಿಗಾಗಿ ಮತ್ತು ಸಮೃದ್ಧ ಗಿಡಗಳ ಬೆಳವಣಿಗಾಗಿ ಜಾಲಿ, ತುಗ್ಲಿ ಗಿಡಗಳನ್ನು ತೆರವುಗೊಳಿಸಿ ಹೊಸ ಗಿಡ ಹಾಕಲಾಗಿದೆ. ಇದನ್ನೇ ಕೆಲವರು ತಪ್ಪಾಗಿ ತಿಳಿದು ಅರಣ್ಯ ನಾಶ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಸಾಮಾಜಿಕವಾಗಿ ಒಳ್ಳೆಯ ಕೆಲಸ ಮಾಡುವಾಗ ನಿಂಧನೆ ಮತ್ತು ಅಪಮಾನ ಬರುವುದು ಸಹಜ. ಒಮ್ಮೆ ಪರಾಮರ್ಶೆ ಮಾಡಿ ಮಾತನಾಡಬೇಕೆಂದು ಮನವಿ ಮಾಡಿದರು.

ಸರ್ಕಾರದ ಹಂತದಲ್ಲಿ ಒಬ್ಬ ವ್ಯಕ್ತಿಗೆ 1500 ಎಕರೆ ಭೂಮಿ ಕೊಡಲು ಸಾಧ್ಯವಿಲ್ಲ. ಅಧಿಕಾರಿಗಳ ಮತ್ತು ಇಲಾಖೆಯ ಸುಪರ್ದಿನಲ್ಲೆ ಭೂಮಿ ಇದೆ. ಸರ್ಕಾರದ ಸೂಚನೆಯಂತೆ ಅರಣ್ಯೀಕರಣ ಮಾಡಲಾಗುತ್ತಿದೆ ಎಂದು ಈಗಾಲೆ ಹಾಕಿರುವ ಗಿಡಗಳನ್ನು ಸಂರಕ್ಷಣೆ ಮಾಡಲಾಗುತ್ತಿದ್ದು ಅವುಗಳಿಗೆ ಟ್ಯಾಂಕರ್ ಮೂಲಕ ನೀರು ಹಾಕುವಂಥ ಕಾರ್ಯ ನಡೆಯುತ್ತಿದೆ. ಹಾಕಿದ ಗಿಡಗಳ ರಸಂ ರಕ್ಷಣೆಗೆ ಹಲವು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಸಮಯದಲ್ಲಿ ಗಿಡ ಬೆಳೆಸುವ ಕಾರ್ಮಿಕರಾದ ದೇವೆಂದ್ರ, ಮಾದೇಶ್, ಎ. ಪಾಲಯ್ಯ, ತಿಮ್ಮಣ್ಣ, ಸುರೇಶ್ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!