Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿನೇ ದಿನೇ ಕ್ಷೀಣಿಸುತ್ತಿರುವ ಲೀಲಾವತಿಯವರ ಆರೋಗ್ಯ : ನಟಿ ಆಸೆಯಂತೆ ಆಸ್ಪತ್ರೆ ಉದ್ಘಾಟಿಸಿದ ಡಿಕೆಶಿ

Facebook
Twitter
Telegram
WhatsApp

ಬೆಂಗಳೂರು: ಹಿರಿಯ ನಟಿ ಲೀಲಾವತಿ ಬೆಂಗಳೂರು ಹೊರವಲಯ ಸೋಲದೇವನಹಳ್ಳಿಯಲ್ಲಿ ನೆಲೆಸಿದಾಗಿನಿಂದಲೂ ಅಲ್ಲಿನ ಜನರಿಗೆ ಅನುಕೂಲವಾಗುವಂತ ಸಮಾಜಮುಖಿ ಕೆಲಸಗಳನ್ನೇ ಮಾಡುತ್ತಾ ಇದ್ದಾರೆ. ಈಗಾಗಲೇ ಪ್ರಾಥಮಿಕ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ. ಇದೀಗ ಪಶು ಸಂಗೋಪನ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ. ಇದರ ಉದ್ಘಾಟನೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ನೆರವೇರಿಸಿದ್ದಾರೆ.

ಲೀಲಾವತಿ ಅವರಿಗೆ ಪ್ರಾಣಿ, ಪಕ್ಷಿಗಳೆಂದರೆ ಬಲು ಪ್ರೀತಿ. ಅದಕ್ಕಾಗಿಯೇ ಸೋಲದೇವನಹಳ್ಳಿಯಲ್ಲಿ ಒಂದು ಪಶುಸಂಗೋಪನ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ. ಇಂದು ಅವರ ಕನಸಿನ ಆಸ್ಪತ್ರೆ ಉದ್ಘಾಟನೆಗೊಂಡಿದೆ. ಇದು ಲೀಲಾವತಿ ಅವರಿಗೆ ಇನ್ನಷ್ಟು ಸಂತಸ ನೀಡಿದೆ.

ಲೀಲಾವತಿಯವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತೀರಾ ಸಣ್ಣವಾಗಿದ್ದು, ಹೆಚ್ಚಿನ ಊಟ, ತಿಂಡಿ ತಿನ್ನುವುದಕ್ಕೂ ಕಷ್ಟವಾಗಿದೆ. ಹಿರಿಯ ನಟಿಯನ್ನು ನೋಡಲು ಸ್ಯಾಂಡಲ್ ವುಡ್ ನಟ ನಟಿಯರು ಸೋಲದೇವನಹಳ್ಳಿಯ ತೋಟದ ಮನೆಗೆ ಭೇಟಿ ನೀಡುತ್ತಿದ್ದಾರೆ. ಇತ್ತಿಚೆಗಷ್ಟೇ ಅರ್ಜುನ್ ಸರ್ಜಾ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ಬಳಿಕ ನಿನ್ನೆಯಷ್ಟೇ ನಟ ದರ್ಶನ್ ಕೂಡ ಲೀಲಾವತಿ ಅವರನ್ನು ಭೇಟಿ ಮಾಡಿ ಬಂದಿದ್ದಾರೆ.

ಹಿರಿಯ ನಟಿ ಅವರ ಮಹದಾಸೆ ಪಶುಸಂಗೋಪನೆಯ ಆಸ್ಪತ್ರೆಯಾಗಿತ್ತು. ಅವರ ಆರೋಗ್ಯ ಬೇರೆ ದಿನೇ ದಿನೇ ಕ್ಷೀಣಿಸುತ್ತಿದೆ. ಅವರ ಆಸೆಯಂತೆ ಸರ್ಕಾರವೂ ಸ್ಪಂದಿಸಿದ್ದು, ಬೆಂಗಳೂರಿನ ಥಣೀಸಂಧ್ರದ ಆಸ್ಪತ್ರೆಯನ್ನು ಸರ್ಕಾರ ಸೋಲದೇವನಹಳ್ಳಿಗೆ ಶಿಫ್ಟ್ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ತಾಲೂಕು ಅಧ್ಯಕ್ಷರಾಗಿ ಮಂಚಲದೊರೆ ರಮೇಶ್ ಆಯ್ಕೆ

  ಗುಬ್ಬಿ: ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಮಿತಿ ಸ್ಥಾಪಿತವಾಗಿದ್ದು. ಜಿಲ್ಲೆಯ ಯಾವುದೇ ಭಾಗದಲಾಗಲಿ ಜನರಿಗೆ ತೊಂದರೆ ಆದರೆ ಕೂಡಲೇ ಸಮಿತಿ ವತಿಯಿಂದ ದಮನಿತರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು

ಕೌಶಲ್ಯಾಭಿವೃದ್ಧಿ ಶಿಕ್ಷಣಕ್ಕೆ ಒತ್ತು ನೀಡಿ : ಡಾ. ಶಿವಕುಮಾರ್

    ಚಿತ್ರದುರ್ಗ, ಸೆ, 22 : ಸಿಟ್ಟು, ಅಹಂಕಾರ, ದ್ವೇಷ, ಅತಿಯಾಸೆ ಬಿಟ್ಟು, ಇರುಷ್ಟರಲ್ಲಿ ಸಂತೃಪ್ತಿಯಿಂದ ಜೀವನ ಸಾಗಿಸುವ, ಅಗಾಧ ಐಶ್ವರ್ಯ ಇದ್ದರೂ ಸರಳವಾದ ಬದುಕನ್ನ ನಡೆಸುವಂಥದ್ದು ಒತ್ತಡ ಮುಕ್ತ ಬದುಕಿಗೆ ರಹದಾರಿ.

ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ.. ವಿನಯ್, ಪವನ್ ಸೂಚನೆ ಮೇರೆಗೆ ಅಪಹರಣವಾಗಿದೆ : ಜಾಮೀನು ಅರ್ಜಿಯಲ್ಲಿ ಉಲ್ಲೇಖ..!

ಬೆಂಗಳೂರು: ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪ್ಲ್ಯಾನ್ ಮಾಡಿ ಕರೆತಂದು, ಪಟ್ಟಣಗೆರೆ ಶೆಡ್ ನಲ್ಲಿ ಕೊಲೆ ಮಾಡಲಾಗಿದೆ. ಈ ಸಂಬಂಧ ಪೊಲೀಸರು 17 ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ ದರ್ಶನ್ ಎ2 ಆರೋಪಿಯಾಗಿದ್ದಾರೆ.

error: Content is protected !!