Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟ್ರೈನಿಂಗ್ ಸೆಂಟರ್ ನಲ್ಲಿ ಪ್ರೀತಿ.. ಹಣದ ವಿಚಾರಕ್ಕೆ ಪ್ರಿಯಕರನಿಂದ ಕೊಲೆ.. ದಾಂಡೇಲಿ ಟು ಉಡುಪಿ, ಟ್ರಾಜಿಕ್‌ ಲವ್ ಕಹಾನಿ..!

Facebook
Twitter
Telegram
WhatsApp

ಬೆಂಗಳೂರು: ಹಣದ ವಿಚಾರಕ್ಕೆ ಶುರುವಾದ ಗಲಾಟೆ ಕಡೆಗೆ ಪ್ರಿಯತಮೆಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಗರದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 24 ವರ್ಷದ ಗಂಗಾ ಕೊಲೆಯಾದ ಯುವತಿ.

ಶ್ಯಾಮ್ ಎಂಬಾತನೇ ಈ ಕೊಲೆ ಮಾಡಿರುವ ಯುವಕ. ಶ್ಯಾಮ್ ಮೂಲತಹ ದಾಂಡೇಲಿಯವನು. ಜೀವನ ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದಿದ್ದ. ಅದರಂತೆ ಇಲ್ಲಿಯೇ ಒಂದು ಯೋಗ ಸೆಂಟರ್ ಕೂಡ ಓಪನ್ ಮಾಡಿದ್ದ ಆ ಯೋಗ ಸೆಂಟರ್ ಗೆ ಬರ್ತಿದ್ದ ಹುಡುಗಿಯೇ ಗಂಗಾ.

ದಿನ ಕಳೆದನಮತೆ ಯೋಗ ಟ್ರೈನಿಂಗ್ ಜೊತೆಗೆ ಇಬ್ಬರ ನಡುವೆ ಪ್ರೀತಿಯೂ ಮೊಳಕೆಯೊಡೆದಿತ್ತು. ಮದುವೆಯಾಗುವ ನಿರ್ಧಾರಕ್ಕೂ ಬಂದು ನಿಂತಿದ್ದರು. ಆದ್ರೆ ಗಂಗಾಳಿಗೂ ಸ್ವಂತ ಏನಾದ್ರೂ ವ್ಯವಹಾರ ಮಾಡಬೇಕೆಂಬ ತುಡಿತ. ಅದರಂತೆ ಗಂಗಾ ಕೂಡ ಪ್ರತ್ಯೇಕವಾಗಿ ಒಂದು ಯೋಗ ಸೆಂಟರ್ ಓಪನ್ ಮಾಡ್ತಾಳೆ. ಅದಕ್ಕೆ ಶ್ಯಾಮ್ ಬಳಿ ಒಂದು ಲಕ್ಷ ಹಣ ತೆಗೆದುಕೊಂಡಿದ್ದಳಂತೆ.

ಈ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಆ ಜಗಳದಲ್ಲಿ ಶ್ಯಾಮ್, ಗಂಗಾಳ ತಲೆಯನ್ನ ಗೋಡೆಗೆ ಗುದ್ದಿ, ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಬುಧವಾರ ಈ ಘಟನೆ ನಡೆದಿದ್ದು, ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪೊಲೀಸರು ಶ್ಯಾಮ್ ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!