Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಂಚ ಪಡೆಯುವಾಗ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಮದಕರಿಪುರ PDO

Facebook
Twitter
Telegram
WhatsApp

ಚಿತ್ರದುರ್ಗ, (ಮಾ.07) : ತಾಲ್ಲೂಕಿನ ಮದಕರಿಪುರ ಗ್ರಾಮ ಪಂಚಾಯತಿ PDO ಅವರು ಶಾಲಾ ಶಿಕ್ಷಕರೋರ್ವರಿಂದ ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ಆರೋಪಿಯು ಚಳ್ಳಕೆರೆ ರಸ್ತೆಯ ಅಕ್ಷಯ ಗ್ಲೋಬಲ್ ಆಸ್ಪತ್ರೆ ಹಿಂಭಾಗದ ಶ್ರೀರಾಮ್ ಬಡಾವಣೆಯ ಪ್ರಾಥಮಿಕ ಶಾಲಾ ಶಿಕ್ಷಕರ ಖಾತೆ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ.

ಈ ಸಂಬಂಧವಾಗಿ ದೂರುದಾರರು ಎಸಿಬಿ ಠಾಣೆಗೆ ಹಾಜರಾಗಿ ನೀಡಿರುತ್ತಾರೆ. ಅಧಿಕಾರಿಗಳು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿರುತ್ತಾರೆ.

ಇಂದು (ಸೋಮವಾರ) ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ದೂರುದಾರರೊಂದಿಗೆ ಮದಕರಿಪುರ ಗ್ರಾಮ ಪಂಚಾಯಿತಿ ಕಛೇರಿಗೆ ಹಾಜರಾಗಿ ತನ್ನ ಬಾಕಿಯಿದ್ದ ಕೆಲಸದ ಬಗ್ಗೆ ಪಿ.ಡಿ.ಓ.ರವರನ್ನು ಭೇಟಿ ಮಾಡಿ ವಿಚಾರಿಸಿದ್ದು, ಪಿ.ಡಿ.ಓ. ಲಂಚದ ಹಣವನ್ನು ನೀಡುವಂತೆ ತಮ್ಮ ಕೈಸನ್ನೆಯಿಂದ ಸೂಚಿಸಿದ್ದು ಪಿ.ಡಿ.ಓ.ರವರು ಸೂಚಿಸಿದಂತೆ 2ನೇ ಅಪಾದಿತೆ ದೂರುದಾರರು‌ ಲಂಚದ ಹಣವನ್ನು ಪಡೆದಿದ್ದು, ಆರೋಪಿತರನ್ನು ಟ್ರ್ಯಾಪ್ ಮಾಡಲಾಗಿದೆ.

ಆಪಾದಿತರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಕ್ಕೆ ಪಡೆಯಲಾಗಿರುತ್ತದೆ. ಅದೇ ವೇಳೆಯಲ್ಲಿ ಆಪಾದಿತರ ಮನೆಯ ಶೋಧನೆಯನ್ನು ಸಹ ಕೈಗೊಳ್ಳಲಾಯಿತು. ಶೋಧನಾ ಕಾರ್ಯವನ್ನು ಪಿ.ಐ. ಪ್ರವೀಣ್ ಕುಮಾರ್ ವಿ. ರವರ ತಂಡ ಕೈಗೊಂಡಿರುತ್ತದೆ. ಪ್ರಕರಣದ ತನಿಖೆ ಮುಂದುವರೆದಿದೆ.

ಆ ಸಂದರ್ಭದಲ್ಲಿ ಚಿತ್ರದುರ್ಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಾದ ಪ್ರತಾಪ್‌ರೆಡ್ಡಿ., ಡಿ.ವೈ.ಎಸ್.ಪಿ, ಹಾಗೂ ಉಮೇಶ್ ಕುಮಾರ್ ಎಸ್.ಎಮ್., ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳಾದ ಶ್ರೀ ಎ. ಮಾರುತಿರಾಂ, ಹೆಚ್.ಸಿ., ಶ್ರೀ ಜಿ.ಎಸ್, ಓಬಣ್ಣ, ಹೆಚ್.ಸಿ., ಶ್ರೀ ಹರೀಶ್‌ಕುಮಾರ್, ಹೆಚ್.ಸಿ. ಶ್ರೀ ಫಕೃದ್ದೀನ್, ಪಿ.ಸಿ., ಶ್ರೀ ಕೆ.ಬಿ. ಯತಿರಾಜ, ಪಿ.ಸಿ., ಶ್ರೀ ಎಮ್. ಫಯಾಜ್, ಪಿ.ಸಿ. ಇವರು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

error: Content is protected !!