Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧ್ರುವನಾರಾಯಣ್ ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟ ಮಹದೇವಪ್ಪ : ಬೆಂಬಲಿಗರಿಗೆ ಫುಲ್ ಖುಷಿ..!

Facebook
Twitter
Telegram
WhatsApp

ಚಾಮರಾಜನಗರ: ಧ್ರುವನಾರಾಯಣ್ ಬದುಕಿದ್ದಾಗ ನಂಜನಗೂಡು ಕ್ಷೇತ್ರದ ಟಿಕೆಟ್ ಗಾಗಿ ಅರ್ಜಿ ಹಾಕಿದ್ದರು. ಜೊತೆಗೆ ಈ ಬಾರಿ ಮಗನಿಗೂ ಟಿಕೆಟ್ ಬೇಕು ಅಂತಾನೇ ಕೇಳಿದ್ದರು. ಆದ್ರೆ ಎಲೆಕ್ಷನ್ ಗೂ ಮುನ್ನವೇ ಹೇಳದೆ ಕೇಳದೆ ಬಾರದೂರಿಗೆ ಹೊರಟೇ ಹೋದರೂ. ಅಂತ ವ್ಯಕ್ತಿಯನ್ನ ಕಳೆದುಕೊಂಡ ಕಾರ್ಯಕರ್ತರಿಗೆ ಇನ್ನಿಲ್ಲದ ನೋವು. ಹೀಗಾಗಿ ಅವರ ಆಸೆಯಂತೆ ಮಗನಿಗೆ ಟಿಕೆಟ್ ನೀಡಿ ಎಂದು ಪಕ್ಷದ ಬಳಿ, ಕ್ಷೇತ್ರ ಬಿಟ್ಟುಕೊಡಿ ಎಂದು ಹೆಚ್ ಸಿ ಮಹದೇವಪ್ಪ ಬಳಿ ಮನವಿ ಮಾಡಿದ್ದರು.

ಇದೀಗ ಕಾರ್ಯಕರ್ತರ ಆಸೆಯಂತೆ ಮಹದೇವಪ್ಪ ಅವರು ಕ್ಷೇತ್ರ ಬಿಟ್ಟುಕೊಡಲು ಒಪ್ಪಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ನೀನು ಬೇರೆಯಲ್ಲ, ನನ್ನ ಮಗ ಬೇರೆಯಲ್ಲ. ನಿನ್ನ ಕುಟುಂಬಕ್ಕೆ ಬೇಕಾದ ಎಲ್ಲಾ ರೀತಿಯ ನೆರವು ನೀಡುತ್ತೇನೆ ಎಂದು ಆಶ್ವಾಸನೆ ನೀಡಿದ್ದಾರೆ. ಇಂದು ಧ್ರುವನಾರಾಯಣ್ ಅವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಲ್ಲದೆ ಕ್ಷೇತ್ರ ಬಿಟ್ಟು ಕೊಡುವ ಬಗ್ಗೆಯೂ ಮಾತನಾಡಿದ್ದಾರೆ.

ಧ್ರುವನಾರಾಯಣ್ ಅವರ ಮಗ ದರ್ಶನ್ ಗೆ ನಾನು ಬೆಂಬಲ ನೀಡುತ್ತೇನೆ. ಹೀಗಾಗಿ ನಂಜನಗೂಡ ಕ್ಷೇತ್ರದಿಂದ ಹಿಂದೆ ಸರಿಯುತ್ತಿದ್ದೇನೆ. ಧ್ರುವನಾರಾಯಣ್ ಹಠಾತ್ ನಿಧನರಾದಾಗಲೇ ನಾನು ಈ ನಿರ್ಧಾರ ಮಾಡಿದ್ದೆ. ದರ್ಶನ್ ಗೆಲುವಿಗೆ ಓಡಾಡುತ್ತೇನೆ. ಈ ಸಂದರ್ಭದಲ್ಲಿ ನಾನು ನಂಜನಗೂಡು ಅಭ್ಯರ್ಥಿಯಾಗಲೂ ಬಯಸುವುದಿಲ್ಲ. ಇದನ್ನು ನನ್ನ ಮಗ ಸುನೀಲ್ ಬೋಸ್ ಹಾಗೂ ದರ್ಶನ್ ಧ್ರುವನಾರಾಯಣ್ ಮುಂದೆ ಬಹಿರಂಗ ಪಡಿಸುತ್ತಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!