Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಪ್ರೆಷನ್ ಮಾತ್ರೆ ಬದಲು.. ಕ್ಯಾನ್ಸರ್ ಮಾತ್ರೆ ನೀಡಿದರಾ : ಏನಿದು ಹುಬ್ಬಳ್ಳಿ ಮೆಡಿಕಲ್ ಸಮಸ್ಯೆ..?

Facebook
Twitter
Telegram
WhatsApp

ಹುಬ್ಬಳ್ಳಿ: ಡಾಕ್ಟರ್ ಆಗಲಿ, ಮೆಡಿಕಲ್ ನವರಾಗಲಿ ಕೊಂಚ ಎಚ್ಚರ ತಪ್ಪಿದರೆ ಅದರಿಂದಾಗುವ ಅಪಾಯ ಅಷ್ಟಿಷ್ಟಲ್ಲ. ಅದು ಪ್ರಾಣಕ್ಕೂ ಕುತ್ತು ಬರುತ್ತದೆ. ಇದೀಗ ಅದಲು ಬದಲು ಮಾತ್ರೆಯಿಂದ ವ್ಯಕ್ತಿಯೊಬ್ಬನ ಪ್ರಾಣ ಹೋಗಿರುವ ಆರೋಪ ಮೆಡಿಕಲ್ ಮೇಲೆ ಬಂದಿದೆ.

ಧಾರಾವಾಡದ ಡಾ. ಒಅಂಡುರಂಗು ಬಳಿಗೆ ಕಾರವಾರದ ಅಜ್ಜುಹಳ್ಳಿಯ ಹನುಮಂತಪ್ಪ ಪಾಟೀಲ್ ಎಂಬುವವರನ್ನು ಕರೆದುಕೊಂಡು ಹೋಗಲಾಗಿತ್ತಂತೆ. ಖಿನ್ನತೆಗೆ ಒಳಗಾಗಿದ್ದ ಹನುಮಂತಪ್ಪ ಅವರಿಗೆ ಡಿಪ್ರೆಶನ್ ಮಾತ್ರೆಯನ್ನು ವೈದ್ಯರು ಬರೆದುಕೊಟ್ಟಿದ್ದರಂತೆ. ಹನುಮಂತಪ್ಪ ಪುತ್ರ ಪ್ರವೀಣ್ ಅಲ್ಲೆ ಇದ್ದ ಮೆಡಿಕಲ್ ಶಾಪ್ ಗೆ ಹೋಗಿ ಮಾತ್ರೆ ಕೇಳಿದಾಗ ಈ ಕಂಪನಿಯದ್ದಿಲ್ಲ, ಬೇರೆ ಕಂಪನಿಯದ್ದು ಕೊಡಲಾ ಎಂದಿದ್ದಾರೆ.

ಮಗ ಕೂಡ ಮೆಡಿಕಲ್ ನವರು ಹೇಳಿದಂತೆ ಆ ಮಾತ್ರೆಗಳನ್ನೇ ತೆಗೆದುಕೊಂಡು ಹೋಗಿದ್ದಾರೆ. 12 ದಿನ ಅದೇ ಮಾತ್ರೆಗಳನ್ನು ನೀಡಿದ್ದಾರೆ. ಆದರೆ ದಿನನ ಕಳೆದಂತೆ ಅನಾರೋಗ್ಯ ಹೆಚ್ಚಾಗಿದೆ. ಬಳಿಕ ಆಸ್ಪತ್ರೆಗೆ ಅದೇ ವೈದ್ಯರ ಬಳಿ ಕರೆದುಕೊಂಡು ಹೋದಾಗ ಡಿಪ್ರೆಶನ್ ಮಾತ್ರೆ ಬದಲು, ಕ್ಯಾನ್ಸರ್ ಮಾತ್ರೆ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಬಳಿಕ ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ದೇಹದ ಒಳಗೆ ಸಂಪೂರ್ಣ ಹಾಳಾಗಿದ್ದ ಕಾರಣ ಹನುಮಂತಪ್ಪ ಮೃತಪಟ್ಟಿದ್ದಾರೆ. ಈ ಸಂಬಂಧ ಮೆಡಿಕಲ್ ಶಾಪ್ ವಿರುದ್ಧ ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ

ಈ ರಾಶಿಯವರ ಉದ್ಯೋಗದಲ್ಲಿ ತೊಂದರೆಗಳು ಕಾಣಲಿವೆ, ಈ ಪಂಚರಾಶಿಗಳ ಸಂಸಾರದಲ್ಲಿ ಅಲ್ಲೋಲಕಲ್ಲೋಲ! ಶನಿವಾರ ರಾಶಿ ಭವಿಷ್ಯ -ಸೆಪ್ಟೆಂಬರ್-21,2024 ಸೂರ್ಯೋದಯ: 06:08, ಸೂರ್ಯಾಸ್ತ : 06:09 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ :ಕ್ರೋಧಿ

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

error: Content is protected !!