Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಂಡ್ತಿ ಮಕ್ಕಳನ್ನು ಬಿಟ್ಟು ಸೇವೆ ಮಾಡಿ ಅಂದ್ರೆ ಹೇಗೆ : ಶಾಸಕ ವೀರೇಂದ್ರ ಪಪ್ಪಿ ಬೇಸರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.05 :  ಕವಾಡಿಗರಹಟ್ಟಿಯಲ್ಲಿ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯವರರು ನಿನ್ನೆ (ಬುಧವಾರ) ಮಾತನಾಡಿದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುವಾಗ ಅವರ ಪತ್ನಿಯ ವಿಚಾರ ಮಾತನಾಡಿ ನನ್ನ ಹೆಂಡತಿಗೆ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿರುವುದರಿಂದ ನಾನು ಹೋಗಬೇಕು ಎಂದಿದ್ದಾರೆ. ತಕ್ಷಣವೇ ಅಲ್ಲಿದ್ದ ಮಹಿಳೆಯೋರ್ವರು ನಾವು ನಾಲ್ಕು ತಿಂಗಳಿಂದ ನಾವು ಸಂಬಂಧಿಕರು ಸತ್ತರೂ ಹೋಗೋಕೆ ಆಗಿಲ್ಲ ಎಂದಿದ್ದಾರೆ. ಇದರಿಂದ ಬೇಸರಗೊಂಡ ಶಾಸಕ ಹೆಂಡತಿ ಮಕ್ಕಳನ್ನ ಬಿಟ್ಟು ಸೇವೆ ಮಾಡಿ ಅಂದ್ರೆ ಹೆಂಗೆ, ಅಂಥ ದೊಡ್ಡ ಗುಣಾನೂ ನಂದಲ್ಲ, ನಾನದನ್ನ ಮಾಡಲ್ಲ. ನನಗದು ಬೇಕಾಗಿಲ್ಲ. ನಾನು ರಾಜಕೀಯದಲ್ಲಿ ಹಂಗಾಗಬೇಕು, ಹಿಂಗಾಗಬೇಕು ಅಂತ ಬಂದಿಲ್ಲ. ಬಂದಿದೀನಿ ಸೇವೆ ಮಾಡ್ತೀದೀನಿ ಅಷ್ಟೇ. ನಿಮಗೆ ಇಷ್ಟ ಇದ್ರೆ ಮುಂದಿನ ಬಾರಿ ಗೆಲ್ಸಿ. ಇಲ್ಲ ಅಂದ್ರೆ ಬಿಡಿ ಎಂದು ಬೇಸರದಿಂದಲೇ ಮಾತನಾಡಿದ್ದಾರೆ.

ನನಗೆ ಮತ ಹಾಕಿ ಗೆಲ್ಲಿಸಿ ಅಂತಾನೂ ಕೇಳೋದಿಲ್ಲ. ನನಗೆ ನಿಮ್ಮಿಂದ ಆಗಬೇಕಾಗಿದ್ದು ಏನೂ ಇಲ್ಲ. ನನ್ನ ಫ್ಯಾಮಿಲಿ ಬಗ್ಗೆ ನೀವು ಮಾತನಾಡಬೇಕಾದರೆ ಬಹಳ ಯೋಚನೆ ಮಾಡಿ ಮಾತಾಡ್ಬೇಕು. ನಿಮ್ಮಿಂದ ನನಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ನನ್ನಿಂದ ನಿಮಗೆ ತೊಂದರೆಯಾಗಿಲ್ಲ. ನನ್ನಿಂದ ನಿಮಗೆ ತೊಂದರೆಯಾಗದಾದ್ರೇ ನಿಮ್ಮ ಮಾತನ್ನು ಒಪ್ಪಿಕೊಳ್ಳುತ್ತಿದ್ದೆ ಎಂದು ಶಾಸಕ ಕೆಸಿ ವೀರೇಂದ್ರ ಪಪ್ಪಿ ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!