Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾ ಸ್ವಾಮಿ ಸಾವಿನಿಂದ ತಾಯಿ ಕಣ್ಣೀರು : ದರ್ಶನ್, ಪವಿತ್ರಾಗೆ ಆಕ್ರೋಶದ ಬೈಗುಳ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜೂ. 12 : ಅಶ್ಲೀಲ ಮೆಸೇಜ್ ಮಾಡಿದ ಎಂಬ ಕಾರಣಕ್ಕೆ ಕೊಲೆಯಾದ ರೇಣುಕಾಸ್ವಾಮಿ ತಾಯಿ ಮಗನನ್ನು ಕಳೆದುಕೊಂಡು ದುಃಖದಲ್ಲಿದ್ದಾರೆ. ಈ ನೋವಿನಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡಗೆ ಹಿಡಿ ಶಾಪ ಹಾಕಿದ್ದಾರೆ. ಮನೆಗೆ ಮಗನೇ ಆಧಾರ ಸ್ತಂಭವಾಗಿದ್ದ. ಅವನೇ ಇಲ್ಲವೆಂದರೆ ನಾವೂ ಈಗ ಏನು ಮಾಡುವುದು. ಅವನು ಮಗುವನ್ನು ನೋಡುವುದಕ್ಕೆ ಆಗಲಿಲ್ಲ. ಈಗ ಸೊಸೆಯ ಮುಂದಿನ ಜೀವನ ಹೇಗೆ ಎಂದು ಪ್ರಶ್ನಿಸಿದ್ದಾರೆ.

ದರ್ಶನ್ ಒಬ್ಬ ಕಟುಕನಾಗಿ ಈ ರೀತಿ ಮಾಡಿದ್ದಾನೆ. ಆ ಸಮಯದಲ್ಲಿ ನನ್ನ ಮಗ ರಿಕ್ವೆಸ್ಟ್ ಮಾಡಿಕೊಂಡಿದ್ದನಂತೆ. ತಪ್ಪು ಮಾಡಿದ್ದೀನಿ. ಬಿಟ್ಟು ಬಿಡಿ. ನನ್ನ ಹೆಂಡತಿ ಬಸುರಿ ಇದ್ದಾಳೆ ಅಣ್ಣ ಅಂತ ರೇಣುಕಾ ಬೇಡಿಕೊಂಡಿದ್ದನಂತೆ. ಮಗ ಅಷ್ಟೆಲ್ಲಾ ಕೇಳಿಕೊಂಡರು ಬಿಡದೆ ಈ ರೀತಿ ಕೊಲೆ ಮಾಡಿದ್ದಾರಲ್ಲ, ದರ್ಶನ್ ಇನ್ನೆಂಥಾ ನೀಚ ಇರಬಹುದು. ದರ್ಶನ್ ನಾಯಕ ಅಲ್ಲ, ಖಳನಾಯಕ. ಅವನಿಗೆ ಮೆಟ್ಟು ತೆಗೆದುಕೊಂಡು ಹೊಡೆಯಬೇಕು. ದರ್ಶನ್ ಕಂಡಲ್ಲೇ ಶೂಟ್ ಮಾಡಬೇಕು. ಈ ಸಾವಿಗೆ ಮುಖ್ಯ‌ ಕಾರಣ ದರ್ಶನ್ ಹಾಗೂ ಪವಿತ್ರಾ ಗೌಡ.

ಪವಿತ್ರಾ ಗೌಡಗೆ ಬೇರೆ ಬೇರೆಯವರು ಕೂಡ ಕೆಟ್ಟದಾಗಿ ಮೆಸೇಜ್ ಮಾಡುತ್ತಾರೆ. ಅವರನ್ನೆಲ್ಲಾ ಬಿಟ್ಟು ನನ್ನ ಮಗನನ್ನು ಮಾತ್ರ ಹೊಡರದು ಸಾಯಿಸಿದ್ದಾನಲ್ಲ. ಅವಳು ಒಂದು ಹೆಣ್ಣಾಗಿ ಇನ್ನೊಂದು ಹೆಣ್ಣಿನ ಜೀವನವನ್ನು ಹಾಳು ಮಾಡಿದ್ದಾಳೆ. ಅವಳು ಮನುಷ್ಯಳಾ..? ಇಟ್ಟುಕೊಂಡವಳು ಇರುವ ತನಕ ಕಟ್ಟುಕೊಂಎವಳು ಕಡೆಯ ತನಕ. ಇಟ್ಟುಕೊಂಡವಳೇ ಇಷ್ಟೊಂದು ಸೊಕ್ಕಿನಿಂದ ಇದ್ದಾಳೆ. ನನ್ನ ಮಗನನ್ನು ಸಾಯಿಸಿದ್ದಾರಲ್ಲ, ವಾಪಸ್ ತಂದು ಕೊಡುವುದಕ್ಕೆ ಸಾಧ್ಯವಾಗುತ್ತದಾ..? ಅವನು ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾನೋ ಬಿಟ್ಟಿದ್ದಾನೋ, ಮಗನನ್ನು ಕರೆದು ಎಚ್ವರಿಕೆ ಕೊಟ್ಟು ಬಿಡಬಹುದಿತ್ತು. ಬೇಡಿಕೊಂಡರು ಬಿಟ್ಟಿಲ್ಲ ಅಂದ್ಋ ಎಂಥಹ ಕಟುಕರಿರಬಹುದು ಎಂದು ಕಣ್ಣೀರು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ವಿಶ್ವ ಹೃದಯ ದಿನ : ಇಂದಿನ ಯುವಕರು ಏಕೆ ಹೃದಯಾಘಾತದಿಂದ ಬಳಲುತ್ತಿದ್ದಾರೆ ?

    ಸುದ್ದಿಒನ್ : ಜಾರ್ಖಂಡ್ ಅಬಕಾರಿ ಇಲಾಖೆಯು ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಪರೀಕ್ಷೆ ನಡೆಯಿತು. ಈ ಸಂದರ್ಭದಲ್ಲಿ ಇದರಲ್ಲಿ ಭಾಗವಹಿಸಿದ್ದ ಹಲವು ಯುವಕರು ಓಟದ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದಾರೆ. ಓಡುವಾಗ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ

ಈ ರಾಶಿಯವರಿಗೆ ವಿರೋಧಿಗಳಿಂದ ಭಯ, ದ್ವೇಷ, ಅಸೂಯೆ, ಸೇಡಿನಂತ ನಕರಾತ್ಮಕ ಭಾವನೆಗಳು ಕಾಡಬಹುದು, ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ, ಭಾನುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-29,2024 ಸೂರ್ಯೋದಯ: 06:09, ಸೂರ್ಯಾಸ್ತ : 06:02 ಶಾಲಿವಾಹನ

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

error: Content is protected !!