Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ, ಡಿಸಿಎಂ ಭೇಟಿ ಮಾಡಿದ ಎಂಪಿ ರೇಣುಕಾಚಾರ್ಯ : ಕುತೂಹಲ ಮೂಡಿಸಿದ ಬೆಳವಣಿಗೆ

Facebook
Twitter
Telegram
WhatsApp

 

ಬೆಂಗಳೂರು: ಬಿಜೆಪಿ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಎಲ್ಲಾ ತಯಾರಿ ನಡೆಯುತ್ತಿದೆ. ಎರಡು ಪಕ್ಷದಿಂದ ನಮ್ಮಲ್ಲಿಗೆ ಬರ್ತಾರೆ ಅಂತ ಆಗಾಗ ಕಾಂಗ್ರೆಸ್ ನಾಯಕರು ಹೇಳುವ ಮಾತಿಗೆ ತಕ್ಕ ಹಾಗೆ ಬೆಳವಣಿಗೆಗಳು ನಡೆಯುತ್ತಿವೆ. ಇಂದು ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

ಹೊನ್ನಾಳಿ ಕ್ಷೇತ್ರದಲ್ಲಿ ಈ ಬಾರಿ ಸೋತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆಯಿಂದ ಸ್ಪರ್ಧಿಸುವ ಯೋಜನೆ ಹಾಕಿಕೊಂಡಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್ ಅವರನ್ನು ಇಂದು ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ.

ಇನ್ನು ಮೂಲಗಳ ಪ್ರಕಾರ, ರೇಣುಕಾಚಾರ್ಯ ಅವರು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಸುಮಾರು 20 ನಿಮಿಷಗಳ ಕಾಲ‌ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸಿಎಂ ಬಳಿಕ ಡಿಸಿಎಂ ಭೇಟಿ ಮಾಡಿ, ತಮ್ಮ ಕ್ಷೇತ್ರದಲ್ಲಿರುವ ಬರಗಾಲದ ಬಗ್ಗೆಯೂ ಚರ್ಚಿಸಿದ್ದಾರೆ. ಅಷ್ಟೇ ಅಲ್ಲ, ಬಿಜೆಪಿಯಲ್ಲಿ ಸೋತವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವೂ ನಡೆದಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!