Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನವರಾತ್ರಿಯೂ ಆರಂಭ : ನಾಳೆ ದರ್ಶನ್ ಗೆ ಸಿಗಬಹುದಾ ಜಾಮೀನು..?

Facebook
Twitter
Telegram
WhatsApp

ಬಳ್ಳಾರಿ: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿ ನೂರು ದಿನಗಳ ಮೇಲಾಗಿದೆ. ಅದರಲ್ಲೂ ಬಳ್ಳಾರಿ ಜೈಲಿನಲ್ಲಿ ಒಂಟಿಯಾಗಿ ಜೀವನ ಕಳೆದು 36 ದಿನಗಳಾಗಿವೆ. ಪರಪ್ಪನ ಅಗ್ರಹಾರದಲ್ಲಿದ್ದಾಗ ಹೇಗೋ ಸಂಗಡಿಗರು ಜೊತೆಗಿದ್ದರು. ಆದರೆ ಬಳ್ಳಾರಿ ಜೈಲಿನಲ್ಲಿ ಹಾಗಲ್ಲ. ಯಾರೂ ಇಲ್ಲದೆ ಒಂಟಿಯಾಗಿದ್ದಾರೆ. ಜೈಲಿನಿಂದ ಯಾವಾಗ ಬಿಡುಗಡೆಯಾಗ್ತಿನೋ ಎಂದೇ ಕಾಯುತ್ತಿದ್ದಾರೆ. ನಾಳೆ ದರ್ಶನ್ ಅವರ ಅರ್ಜಿ ವಿಚಾರಣೆ ನಡೆಯಲಿದೆ. ಜಾಮೀನು ಸಿಗುತ್ತಾ..? ವಿಚಾರಣೆ ಮುಂದೂಡಿಕೆಯಾಗುತ್ತಾ ನೋಡಬೇಕಿದೆ.

ಜಾಮೀನು ಸಿಗುವ ಸಾಧ್ಯತೆ ಯೋಚಿಸಿದರೆ ಸ್ವಲ್ಪ ಕಡಿಮೆಯೆ. ಯಾಕಂದ್ರೆ ದರ್ಶನ್ ಪರ ವಕೀಲರು ವಾದ ಮಂಡಿಸುವುದಕ್ಕೆ ಇನ್ನು ಶುರುನೇ ಮಾಡಿಲ್ಲ. ಎರಡು ಬಾರಿಯಿಂದ ಕಾಲವಕಾಶ ಕೇಳುತ್ತಲೇ ಇದ್ದಾರೆ. ಹೀಗಾಗಿ ನಾಳೆ ವಾದ ಮಂಡಿಸುತ್ತಾರೋ ಅಥವಾ ಮತ್ತೆ ಕಾಲವಕಾಶ ಕೇಳುತ್ತಾರೋ ನೋಡಬೇಕಿದೆ.

ಇದರ ನಡುವೆ ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದರು. ಮಗನನ್ನು ನೋಡಿ ಎಷ್ಟೋ ದಿನಗಳಾಗಿದ್ದ ಮಗ ಇಂದು ತಂದೆಯನ್ನು ನೋಡಿ ಭಾವುಕರಾಗಿದ್ದರು. ಬಳಿಕ ತಂದೆ ನೋಡಿದ ಖುಷಿಯೂ ವಿನೀಶ್ ಮುಖದಲ್ಲಿ ಕಾಣಿಸುತ್ತಿತ್ತು. ಪತಿಗಾಗಿ ವಿಜಯಲಕ್ಷ್ಮೀ ಹಣ್ಣು, ಬೇಕರಿ ತಿನಿಸು, ಡ್ರೈ ಫ್ರೂಟ್ಸ್ ಸೇರಿದಂತೆ ತಿನಿಸುಗಳನ್ನು ತಂದಿದ್ದರು. ನವರಾತ್ರಿ ಬೇರೆ ಆರಂಭವಾಗಿರುವ ಕಾರಣ ವಿಜಯಲಕ್ಷ್ಮೀಗೂ ಒಂದು ನಂಬಿಕೆ. ಈ ಬಾರಿ ಬೇಲ್ ಸಿಗುವ ಸಾಧ್ಯತೆ ಇದೆ ಎಂದು ದರ್ಶನ್ ಅವರ ಮುಂದೆಯೂ ಆತ್ಮವಿಶ್ವಾಸ ತೋರಿದ್ದಾರೆ ಎಂದೇ ಹೇಳಲಾಗುತ್ತಿದೆ. ಬೇಲ್ ಸಿಕ್ಕರೆ ಸಾಕಪ್ಪ, ಜೈಲು ಸಹವಾಸ ಬೇಡಪ್ಪ ಎನ್ನುತ್ತಿರುವ ದರ್ಶನ್, ಹೆಂಡತಿ, ಮಗನನ್ನು ನೋಡಿ ಖುಷಿಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!