Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

NEET PG 2024 Postponed : ಇಂದು ನಡೆಯಬೇಕಿದ್ದ ನೀಟ್ -UG ಪರೀಕ್ಷೆ ದಿಢೀರ್ ಮುಂದೂಡಿಕೆ : ಆಕ್ರೋಶಗೊಂಡ ವಿದ್ಯಾರ್ಥಿಗಳು

Facebook
Twitter
Telegram
WhatsApp

ನವದೆಹಲಿ : ನೀಟ್ -PG ಪರೀಕ್ಷೆಗೆ ಇಂದು ದಿನಾಂಕ ಫಿಕ್ಸ್ ಆಗಿತ್ತು. ಅದರಂತೆ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗಾಗಿ ಎಲ್ಲಾ ರೀತಿಯ ತಯಾರಿಯನ್ನು ನಡೆಸಿದ್ದರು. ಶ್ರಮವಹಿಸಿ ಓದುತ್ತಿದ್ದ ಅದೆಷ್ಟೋ ವಿದ್ಯಾರ್ಥಿಗಳಿಗೆ ದಿಢೀರನೇ ಶಾಕಿಂಗ್ ನ್ಯೂಸ್ ಒಂದು ಎದುರಾಗಿದೆ. ನಿನ್ನೆ ರಾತ್ರಿ 10 ಸುಮಾರಿಗೆ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಿದೆ ಕೇಂದ್ರ ಸರ್ಕಾರ.

ನೀಟ್-ಪಿಜಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣ ದೇಶಾದ್ಯಂತ ಭಾರೀ ಚರ್ಚೆಯಾಗಿತ್ತು. ಈ ಸಂಚಲನದ ನಡುವೆ ಇಂದು ನಡೆಯಬೇಕಿದ್ದ ನೀಟ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಈ ಸಂಬಂಧ ಮಾಹಿತಿಯನ್ನು ನೀಡಿದೆ.

ಇಂದು ದೇಶದ 270 ಪರೀಕ್ಷಾ ‌ಕೇಂದ್ರಗಳಲ್ಲಿ 2.2 ಲಕ್ಷ ಅಭ್ಯರ್ಥಿಗಳು ನೀಟ್ – ಪಿಜಿ ಎಂಟ್ರೆನ್ಸ್ ಪರೀಕ್ಷೆ ಬರೆಯಬೇಕಾಗಿತ್ತು. ಪರೀಕ್ಷೆಯ ಪಾವಿತ್ರ್ಯತೆ ಹಾಗೂ ವಿದ್ಯಾರ್ಥಿಗಳ‌ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಟ್ವಿಟ್ಟರ್ ನಲ್ಲಿ ದಿನಾಂಕ ಮುಂದೂಡಿಕೆಯಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಆದರೆ ಮುಂದಿನ ದಿನಾಂಕ ಯಾವಾಗ ಎಂಬುದನ್ನು ಇನ್ನು ಘೋಷಣೆ ಮಾಡಿಲ್ಲ‌. ಪರೀಕ್ಷೆಗೆಂದು ತಯಾರಾಗಿದ್ದ ವಿದ್ಯಾರ್ಥಿಗಳಿಗೆ ಈಗ ತಾಳ್ಮೆಯಿಂದ ಕಾಯಲೇಬೇಕಾದ ಅನಿವಾರ್ಯತೆಯಾಗಿದೆ.

ಆದರೆ ಕೇಂದ್ರ ಸರ್ಕಾರದಿಂದ ಈ ಟ್ವೀಟ್ ನೋಡುತ್ತಿದ್ದಂತೆ ಸಾಕಷ್ಟು ಜನ ಆಕ್ರೋಶಗೊಂಡಿದ್ದಾರೆ. ಈಗಾಗಲೇ ಎಷ್ಟೋ ವಿದ್ಯಾರ್ಥಿಗಳು ಅರ್ಧ ದಾರಿ ಕ್ರಮಿಸಿದ್ದಾರೆ. ಈಗ ದಿಢೀರೆಂದು ಪರೀಕ್ಷೆ ರದ್ದು ಮಾಡಿದರೆ ಅವರ ಪಾಡೇನಾಗಬೇಕು ಎಂದು ಒಬ್ಬರು ಕೇಳಿದರೆ, ಈ ಪರೀಕ್ಷೆಗಾಗಿ ತಿಂಗಳಾನುಗಟ್ಟಲೇ ತಯಾರಿ ನಡೆಸಿಕೊಂಡಿರುತ್ತಾರೆ. ಈಗ ಪರೀಕ್ಷೆ ಕ್ಯಾನ್ಸಲ್ ಮಾಡಿದರೆ ಹೇಗೆ. ಮೊದಲೇ ಹೇಳಬಾರದಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

error: Content is protected !!