Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

Facebook
Twitter
Telegram
WhatsApp

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ರಾಜ್ಯ ಸರ್ಕಾರಕ್ಕೆ ಯಾರನ್ನೂ ರಕ್ಷಣೆ ಮಾಡುವ ಉದ್ದೇಶವಿಲ್ಲದೆ ಇದ್ದರೆ ತನಿಖೆಯನ್ನು ಸಿಬಿಐಗೆ ವಹಿಸಲಿ ಎಂದೇ ಹೇಳಿದ್ದಾರೆ.

ಇಂದು ನಿರಂಜನ ಹೀರೆಮಠ ಅವರ ಮನೆಗೆ ಭೇಟಿ ನೀಡಿದ ಬಸವರಾಜ್ ಬೊಮ್ಮಾಯಿ ಅವರು ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ನಿರಂಜನ ಕುಟುಂಬಕ್ಕೂ ನಮಗೂ ಹಳೆಯ ಸಂಬಂಧವಿದೆ. ಕಮಡೊಳ್ಳಿಯಲ್ಲಿ ನಿರಂಜನ ಹಿರಿಯರು ನಮ್ಮ ಕುಟುಂಬದ ಗುರುಗಳು. ನೇಹಾ ಹತ್ಯೆ ಬಹಳ ಆಘಾತಕಾರಿಯಾದಂತ ಸಂಗತಿ. ಅಮಾಯಕ ಹೆಣ್ಣು ಮಗುವನ್ನು ಕ್ರೂರವಾಗಿ ಕೊಲೆ ಮಾಡಿರುವುದು ತಲೆ ತಗ್ಗಿಸುವಂತ ಕೆಲಸ. ಕಾಂಗ್ರೆಸ್ ಇಡೀ ಪ್ರಕರಣದ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಈ ಷಡ್ಯಂತ್ರದ ಹಿಂದೆ ಬಹಳಷ್ಟು ಜನ ಇದ್ದಾರೆ ಎಂದು ಈಗಾಗಲೇ ನೇಹಾ ತಂದೆ ತಾಯಿ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಸಮಗ್ರ ತನಿಖೆಯಾಗಬೇಕಾದರೆ ಸಿಬಿಐಗೆ ನೀಡಬೇಕು. ಇದು ಅವರ ಕುಟುಂಬಸ್ಥರ ಆಗ್ರಹ ಕೂಡ. ಆದರೆ ರಾಜ್ಯ ಸರ್ಕಾರ ಸಿಐಡಿಗೆ ಕೊಟ್ಟು ಕೈ ತೊಳೆದುಕೊಂಡಿದೆ. ಈ ಪ್ರಕರಣದಲ್ಲಿ ಏನನ್ನು ಮುಚ್ಚಿಡಬಾರದು. ಯಾರನ್ನೂ ರಕ್ಷಿಸಬಾರದು ಎಂಬ ಮನೋಭಾವ ರಾಜ್ಯ ಸರ್ಕಾರಕ್ಕೆ ಇದ್ದರೆ ಪ್ರಕರಣವನ್ನು ಕೂಡಲೇ ಸಿಬಿಐಗೆ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು, ಈ ರಾಶಿಯವರಿಗೆ ವಿದೇಶಿ ಯೋಗ, ಈ ರಾಶಿಗಳಿಗೆ ಸಂತಾನ ಭಾಗ್ಯ, ಭಾನುವಾರರಾಶಿ ಭವಿಷ್ಯ -ಅಕ್ಟೋಬರ್-6,2024 ಸೂರ್ಯೋದಯ: 06:11, ಸೂರ್ಯಾಸ್ತ : 05:57 ಶಾಲಿವಾಹನ ಶಕೆ

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

error: Content is protected !!