Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೇಪಾಳದಲ್ಲಿ ಭೀಕರ ದುರಂತ | ನದಿಗೆ ಬಿದ್ದ ಬಸ್ : 14 ಮಂದಿ ಭಾರತೀಯರು ಸಾವು, ಹಲವರು ನಾಪತ್ತೆ…!

Facebook
Twitter
Telegram
WhatsApp

ಸುದ್ದಿಒನ್ | ನೇಪಾಳದಲ್ಲಿ ಭೀಕರ ಅಪಘಾತ ಸಂಭವಿಸಿದೆ. 40 ಭಾರತೀಯರನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಬಿದ್ದಿದೆ. ಸ್ಥಳೀಯರ ಮಾಹಿತಿಯಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

ಈವರೆಗೆ ಬಂದಿರುವ ಮಾಹಿತಿ ಪ್ರಕಾರ ಹಲವರು ಸಾವನ್ನಪ್ಪಿರುವ ಸಾಧ್ಯತೆ ಇದೆ. ನೇಪಾಳ ಪೊಲೀಸ್ ಅಧಿಕಾರಿಗಳ ಪ್ರಕಾರ, 40 ಮಂದಿ ಭಾರತೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿ ನದಿಗೆ ಬಿದ್ದಿದೆ. ಬಸ್ ಪೋಖರಾದಿಂದ ಕಠ್ಮಂಡುವಿಗೆ ಹೋಗುತ್ತಿದೆ.
ಜಿಲ್ಲಾ ಪೊಲೀಸ್ ಕಛೇರಿ ತನಹುನ್ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ಇದನ್ನು ಖಚಿತಪಡಿಸಿದ್ದಾರೆ. ‌ಯುಪಿ ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿರುವ ಬಸ್ ನದಿಗೆ ಬಿದ್ದಿದೆ ಎಂದು ಅವರು ಹೇಳಿದರು. ಈ ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ. ಪೊಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ವೇಳೆ ಬಸ್ ನದಿಗೆ ಬಿದ್ದಿದೆ. ಮಳೆಯಿಂದಾಗಿ ಪರಿಹಾರ ಕಾರ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯಕ್ಕೆ ಸೇರಿದ ಟ್ರಾವೆಲ್ ಬಸ್ ಶುಕ್ರವಾರ (ಆ.23) ಬೆಳಗ್ಗೆ ನೇಪಾಳದ ಪೊಖರಾದಿಂದ ಕಠ್ಮಂಡುವಿಗೆ ಹೊರಟಿತ್ತು. ಬೆಟ್ಟದಲ್ಲಿ ಬಸ್ ನಿಯಂತ್ರಣ ತಪ್ಪಿ ಮರ್ಸಾಂಗಡಿ ನದಿಗೆ ಬಿದ್ದಿದೆ. ಮಾಹಿತಿ ಪಡೆದ ಅಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಸೇನೆ ಮತ್ತು ರಕ್ಷಣಾ ತಂಡಗಳೊಂದಿಗೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಈವರೆಗೆ 16 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, 14 ಮಂದಿಯ ಮೃತದೇಹಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾದವರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ನದಿಯು ವೇಗವಾಗಿ ಹರಿಯುತ್ತಿರುವುದರಿಂದ ಅನೇಕ ಜನರು ನಾಪತ್ತೆಯಾಗಿದ್ದಾರೆ ಮತ್ತು ಕೆಲವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್‌ನಲ್ಲಿ 40 ಜನರಿದ್ದು, ಕೆಲವರನ್ನು ರಕ್ಷಿಸಲಾಗಿದೆ. ಆದರೆ ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದಾರೆ. ತನಹುನ್ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.

ಬಸ್ ಉತ್ತರ ಪ್ರದೇಶಕ್ಕೆ ಸೇರಿದ್ದು. ಆದರೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದವರು ಉತ್ತರ ಪ್ರದೇಶದ ಯಾವ ಜಿಲ್ಲೆಯಿಂದ ನೇಪಾಳಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಏತನ್ಮಧ್ಯೆ, ನೇಪಾಳದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಜನರು ಎಲ್ಲಿಂದ ಬಂದಿದ್ದಾರೆ ಎಂಬುದನ್ನು ತಿಳಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಉತ್ತರ ಪ್ರದೇಶ ಪರಿಹಾರ ಆಯುಕ್ತರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!