Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

New Parliament : 140 ಕೋಟಿ ಭಾರತೀಯರ ಕನಸು ನನಸಾಗಿದೆ : ಪ್ರಧಾನಿ ನರೇಂದ್ರ ಮೋದಿ

Facebook
Twitter
Telegram
WhatsApp

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯ ಸ್ಪೀಕರ್ ಒಂಬಿರ್ಲಾ ಸೇರಿದಂತೆ ರಾಜ್ಯಸಭಾ ಉಪ ಸಭಾಪತಿಗಳು, ಸಂಸದರು ಮತ್ತು ಹಲವು ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನೂತನ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ತಮ್ಮ ಮೊದಲ ಭಾಷಣ ಮಾಡಿದರು. ಭಾರತ ಅಭಿವೃದ್ಧಿಯಾದರೆ ವಿಶ್ವವೂ ಅಭಿವೃದ್ಧಿ ಹೊಂದುತ್ತದೆ ಮತ್ತು ಹೊಸ ಸಂಸತ್ತು ಪ್ರಜಾಪ್ರಭುತ್ವದ ಆಧುನಿಕ ದೇವಾಲಯವಾಗಿದೆ ಎಂದು ಮೋದಿ ನಂಬಿದ್ದಾರೆ. ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ನೂತನ ಸಂಸತ್ತು ನಿರ್ಮಾಣವಾಗಿದ್ದು, ಈ ದಿನ ಇತಿಹಾಸದಲ್ಲಿ ದಾಖಲಾಗಲಿದೆ ಎಂದು ಪ್ರಧಾನಿ ಸ್ಪಷ್ಟಪಡಿಸಿದರು.

ಇದು ಕೇವಲ ಕಟ್ಟಡವಲ್ಲ, 140 ಕೋಟಿ ಜನರ ಆಕಾಂಕ್ಷೆ ಮತ್ತು ಕನಸುಗಳ ಸಂಕೇತವಾಗಿದೆ ಎಂದು ಹೇಳಿದರು. ಈ ನೂತನ ಕಟ್ಟಡ ವಿಶ್ವಕ್ಕೆ ಭಾರತದ ಸಂಕಲ್ಪ ಸಂದೇಶ ಸಾರಲಿದೆ ಎಂದು ಅಭಿಪ್ರಾಯಪಟ್ಟರು.

ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸುವ ಮಾಧ್ಯಮವಾಗಿ ಮತ್ತು ಸ್ವಾವಲಂಬಿ ಭಾರತಕ್ಕೆ ಸಾಕ್ಷಿಯಾಗಲಿದೆ ಎಂದು ಮೋದಿ ಹೇಳಿದರು. ಹೊಸ ಆಲೋಚನೆಗಳು ಮತ್ತು ಸಂಕಲ್ಪದೊಂದಿಗೆ ಭಾರತ ಪ್ರಗತಿಯ ಹಾದಿಯಲ್ಲಿದೆ ಎಂದರು. ಇಡೀ ವಿಶ್ವವೇ ನಮ್ಮ ದೇಶದ ಸಂಕಲ್ಪ ಮತ್ತು ಅಭಿವೃದ್ಧಿಯನ್ನು ಗಮನಿಸುತ್ತಿದೆ ಎಂದು ಪ್ರಧಾನಿ ಹೇಳಿದರು.

ನೂತನ ಸಂಸತ್ತು ಆಧುನಿಕ ಭಾರತದ ಕನ್ನಡಿಯಾಗಿದೆ. ಸೇವೆ ಮತ್ತು ಕರ್ತವ್ಯದ ಸಂಕೇತವಾಗಿರುವ ಪವಿತ್ರ ಸೆಂಗೋಲ್ (ರಾಜದಂಡ) ಅನ್ನು ಸಂಸತ್ತಿನಲ್ಲಿ ಪ್ರತಿಷ್ಠಾಪಿಸಲಾಗಿದೆ. ಚೋಳ ಸಾಮ್ರಾಜ್ಯದ ಇತಿಹಾಸದಲ್ಲಿ ಸೆಂಗೋಲ್‌ಗೆ ವಿಶೇಷ ಸ್ಥಾನವಿದೆ ಎಂದರು. ಪ್ರತಿಯೊಂದು ದೇಶದ ಅಭಿವೃದ್ಧಿ ಪಯಣದಲ್ಲಿ ಕೆಲವು ಕ್ಷಣಗಳು ಅಮರವಾಗುತ್ತವೆ ಮತ್ತು ಮೇ 28 ಅಂತಹ ದಿನವಾಗಿದೆ ಎಂದು ಪ್ರಧಾನಿ ಹೇಳಿದರು.

ಭಾರತವು ವಿಶ್ವ ಪ್ರಜಾಪ್ರಭುತ್ವದ ತಾಯಿ, ಮತ್ತು ಅಡಿಪಾಯವೂ ಆಗಿದೆ.
ಪ್ರಜಾಪ್ರಭುತ್ವವು ನಮ್ಮ ಕಲ್ಪನೆ ಮತ್ತು ಸಂಪ್ರದಾಯವಾಗಿದೆ ಎಂದು ಅವರು ಹೇಳಿದರು. ಹಲವು ವರ್ಷಗಳ ಪರಕೀಯರ ಆಡಳಿತ ನಮ್ಮ ಸ್ವಾಭಿಮಾನವನ್ನು ಕಸಿದುಕೊಂಡಿದ್ದು, ಭಾರತ ಇಂದು ಆ ವಸಾಹತುಶಾಹಿ ಮನಸ್ಥಿತಿಯನ್ನು ತೊಲಗಿಸಿದೆ ಎಂದರು. “ಹೊಸ ಸಂಸತ್ತಿನ ಅವಶ್ಯಕತೆ ಇದೆ. ಮುಂಬರುವ ಅವಧಿಯಲ್ಲಿ ಸಂಸದರ ಸಂಖ್ಯೆ ಹೆಚ್ಚಾಗಲಿದೆ ಎಂಬುದನ್ನು ಅರಿತುಕೊಳ್ಳಬೇಕು. ಅದಕ್ಕಾಗಿಯೇ ನಾವು ಹೊಸ ಸಂಸತ್ತನ್ನು ನಿರ್ಮಿಸಬೇಕಾಗಿದೆ” ಎಂದು ಪ್ರಧಾನಿ ಹೇಳಿದರು. ಹೊಸ ಸಂಸತ್ ಕಟ್ಟಡವು ದೇಶದ ಹಲವು ಸಂಸ್ಕೃತಿಗಳ ಸಮ್ಮಿಲನವಾಗಿದೆ ಎಂದು ಹೇಳಲಾಗುತ್ತದೆ.

ಇಲ್ಲಿ ಕೈಗೊಳ್ಳುವ ನಿರ್ಧಾರಗಳು ಭಾರತದ ಉಜ್ವಲ ಭವಿಷ್ಯವನ್ನು ನಿರ್ಧರಿಸುತ್ತವೆ ಮತ್ತು ತುಳಿತಕ್ಕೊಳಗಾದ ಮತ್ತು ದೀನದಲಿತ ಜನರಿಗೆ ನ್ಯಾಯ ಸಿಗುತ್ತದೆ ಎಂದು ಮೋದಿ ಆಶಿಸಿದರು. ಭಾರತ ತನ್ನ ಹಿಂದಿನ ವೈಭವವನ್ನು ಮರಳಿ ಪಡೆಯುತ್ತಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಭಾಷಣದ ನಂತರ ಪ್ರಧಾನಿಯವರು ಹಲವು ನಾಯಕರೊಂದಿಗೆ ಸಂವಾದ ನಡೆಸಿದರು. ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ದೇವೇಗೌಡರನ್ನೂ ಭೇಟಿಯಾದರು. ಇದಕ್ಕೂ ಮೊದಲು 75 ರೂಪಾಯಿ ನಾಣ್ಯ ಮತ್ತು ಸ್ಟಾಂಪ್ ಬಿಡುಗಡೆ ಮಾಡಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!