Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧ : ಇಂದು ತುಮಕೂರು ಬಂದ್

Facebook
Twitter
Telegram
WhatsApp

 

 

ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಇಂದು ತುಮಕೂರು ಬಂದ್ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆಯಿಂದಾನೇ ಪ್ರತಿಭಟನೆ ಶುರುವಾಗಿದೆ. ನಿನ್ನೆಯೆಲ್ಲಾ ಶಾಸಕ ಸುರೇಶ್ ಗೌಡರು ಕೂಡ ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇಂದು ತುಮಕೂರು ಬಂದ್ ಗೆ ಕರೆ ನೀಡಲಾಗಿದೆ. ಹೋರಾಟ ಸಮಿತಿ ಬಂದ್ ಮಾಡಲು ಕರೆ ನೀಡಿದ್ದು, ಅದರಂತೆ ಕಾರ್ಯಕರ್ತರು ಕೂಡ ಬೀದಿಗೆ ಇಳಿದು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ್ದಾರೆ.

ಇಂದಿನ ಬಂದ್ ಗೆ ವಿವಿಧ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಠಾಧೀಶರು, ವರ್ತಕರು, ವಕೀಲ ಸಂಘದವರು ಕೂಡ ಬೆಂಬಲ ಘೋಷಿಸಿವೆ. ಇಂದು ಹತ್ತು ತಾಲೂಕುಗಳಲ್ಲಿ ಬಂದ್ ಗೆ ಸಿದ್ಧತೆ ಮಾಡಿಕೊಂಡಿದ್ದು, ಆಯಾ ತಾಲೂಕು ಕೇಂದ್ರದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.

ತುಮಕೂರಿನ ಟೌನ್ ಹಾಲ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಲಿದ್ದಾರೆ. ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಬಿಗಿ ಭದ್ರತೆ ನೋಡಿಕೊಂಡಿದೆ. ಗುಬ್ಬಿ, ತುರುವೆಕೆರೆ, ತುಮಕೂರಿನಲ್ಲಿ ಬಂದ್ ತೀವ್ರ ಸ್ವರೂಪ ಪಡೆಯಬಹುದು. ಹೀಗಾಗಿ ಹೇಮಾವತಿ ನಾಲಾ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.

ತುಮಕೂರು ಬಂದ್ ಹಿನ್ನೆಲೆ ಸ್ವಯಂಪ್ರೇರಿತ ಬೆಂಬಲ ನೀಡಲಾಗಿದೆ. ಆಸ್ಪತ್ರೆ, ಮೆಡಿಕಲ್ ಶಾಪ್, ಆಂಬ್ಯುಲೆನ್ಸ್ ಸೇವೆ ಇರಲಿದೆ. ಅಂಗಡಿ ಮುಂಗಟ್ಟುಗಳು ಬಹುತೇಕ ಮುಚ್ಚಲಾಗಿದೆ. ಆದರೆ ಸರ್ಕಾರಿ ಶಾಲೆ, ಸಾರಿಗೆ ವ್ಯವಸ್ಥೆಗಳು ಕೂಡ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ರೂಪ್ಸಾ ಬಂದ್ ಗೆ ಬೆಂಬಲ ನೀಡಿದ್ದು, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹೇಮಾವತಿ ನದಿಯ ಗೋರೂರು ಡ್ಯಾಮ್ ನಿರೀಗಾಗಿ ತುಮಕೂರು ಜಿಲ್ಲೆ ಹಾಗೂ ರಾಮನಗರ ಜಿಲ್ಲೆಯ ನಡುವೆ ಕಿತ್ತಾಟ ಶುರುವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!