Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಪಾಕಿಸ್ತಾನಿ ಪ್ರಜೆಗಳು : ಬೆಂಗಳೂರು ಪೊಲೀಸರಿಂದ ಬಂಧನ..!

Facebook
Twitter
Telegram
WhatsApp

ದಾವಣಗೆರೆ: ನಕಲಿ ದಾಖಲೆ ಸೃಷ್ಟಿಸಿ ಪಾಕಿಸ್ತಾನದ ಮಹಿಳೆ ದಾವಣಗೆರೆಯಲ್ಲಿ ವಾಸವಿದ್ದ ಮಾಹಿತಿ ಪಡೆದಿದ್ದ ಪೊಲೀಸರು ಇಂದು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಸದ್ಯ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪಾಕ್ ಮೂಲದ ಮಹಿಳೆ ಫಾತಿಮಾ ದಾವಣಗೆರೆಯ ಅಲ್ತಾಫ್ ಜೊತೆಗೆ ವಿವಾಹವಾಗಿದ್ದಳು. ಇವರ ಜೊತೆಗೆ ಪೊಲೀಸರು ಮೊಹಮ್ಮದ್ ಹನೀಫ್ ಎಂಬಾತನನ್ನು ಬಂಧಿಸಿದ್ದಾರೆ. ಹನೀಫ್, ಸೊಸೆ, ಅಳಿಯನನ್ನೂ ಬಂಧಿಸಲಾಗಿದೆ. ಇವರೆಲ್ಲಾ ಹಿಂದೂ ಹೆಸರಗಳನ್ನು ಇಟ್ಟುಕೊಂಡು ವಾಸವಿದ್ದರು ಎನ್ನಲಾಗಿದೆ.

ರಶೀದ್ ಅಲಿ ಎಂಬಾತ ತನ್ನ ಹೆಸರನ್ನು ಶಂಕರ್ ಶರ್ಮಾ, ಆಯೇಷಾ ಹನೀಫಾ ಎಂಬಾಕೆ ಆಶಾ ಶರ್ಮಾ, ಮೊಹಮ್ಮದ್ ಹನೀಫ್ ಎಂವಾತ ರಾಮ್ ಬಾಬಾ ಶರ್ಮಾ, ರುಬೀನಾ ಎಂಬಾಕೆ ರಾಣಿ ಶರ್ಮಾ ಎಂದು ಎಲ್ಲರೂ ಶರ್ಮಾ ಹೆಸರನ್ನೇ ತಮ್ಮ ಹೆಸರಿನ ಜೊತೆಗೆ ಇಟ್ಟುಕೊಂಡಿದ್ದರು. ಸದ್ಯ ಬೆಂಗಳೂರು ಪೊಲೀಸರಿಗೆ ಪಕ್ಕಾ ಮಾಹಿತಿ ಇದ್ದ ಕಾರಣದಿಂದ ಎಲ್ಲರನ್ನು ಬಂಧಿಸಿದ್ದಾರೆ. ವಿಚಾರ ತಿಳಿದು ಅಕ್ಕ ಪಕ್ಕದವರು ಗಾಬರಿಯಾಗಿದ್ದಾರೆ.

ಇನ್ನು ಇದೇ ತರ ಬೆಂಗಳೂರಿನ ಜಿಗಣಿಯಲ್ಲೂ ಪಾಕಿಸ್ತಾನದ ಪ್ರಜೆಗಳ ಬಂಧನವಾಗಿದೆ. ಈ ಸಂಬಂಧ ಪೊಲೀಸರು ಹೈಅಲರ್ಟ್ ಆಗಿದ್ದು, ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚನೆ ಮಾಡಿಕೊಂಡು ತನಿಖೆಗೆ ಇಳಿದಿದ್ದಾರೆ. ಈ ತನಿಖಾ ತಂಡಗಳು ದೆಹಲಿ, ಚೆನ್ನೈ, ಬೆಳಗಾವಿ, ಮುಂಬೈ ಸೇರಿದಂತೆ ಹಲವೆಡೆ ಮಾಹಿತಿಯನ್ನು ಕಲೆ ಹಾಕಲಿವೆ. ಪಾಕಿಸ್ತಾನದ ಪ್ರಜೆಗಳಿಗೆ ನಕಲಿ ಆಧಾರ್ ಕಾರ್ಡ್ ಮಾಡಿಕೊಟ್ಟವರು ಯಾರು ಎಂಬ ಪ್ರಶ್ನೆಯೆ ಇಲ್ಲಿ ಬಹಳ ಮುಖ್ಯವಾಗಿದೆ. ಈಗ ಅವರ ಹುಡುಕಾಟವೂ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜಾತಿಗಣತಿ ವರದಿ, ಒಳಮೀಸಲಾತಿ ಬಗ್ಗೆ ಚರ್ಚಿಸಿ ತೀರ್ಮಾನ : ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಯಚೂರು, ಅಕ್ಟೋಬರ್, 05 : ಜಾತಿಗಣತಿಗೆ ಸಂಬಂಧಿಸಿದಂತೆ , ಒಳಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶವಾಗಿದ್ದು, ಒಳ ಮೀಸಲಾತಿ ಬಗ್ಗೆ ಸರ್ಕಾರಕ್ಕೆ ವಿರೋಧವಿಲ್ಲ. ಆದರೆ ಇದರ ಬಗ್ಗೆಯೂ ವರಿಷ್ಠರೊಂದಿಗೆ ಹಾಗೂ ಸಚಿವ ಸಂಪುಟ

ಪ್ರಧಾನಿ ಕಡೆಯಿಂದ ಗುಡ್ ನ್ಯೂಸ್ : ಇಂದು ರೈತರ ಖಾತೆಗೆ ಬರಲಿದೆ 2 ಸಾವಿರ ರೂಪಾಯಿ

  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ರೈತರ ಖಾತೆಗೆ ಹಣ ಹಾಕಲಾಗುತ್ತದೆ. ವರ್ಷಕ್ಕೆ ಆರು ಸಾವಿರದಂತೆ ಮೂರು ಬಾರಿ 2 ಸಾವಿರ ಹಾಕಲಾಗುತ್ತದೆ. ಫಲಾನುಭವಿ ರೈತರು ಈಗಾಗಲೇ ಇದರ ಲಾಭ

TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಕೊಟ್ಟ ನಟಿ‌ ಸಂಜನಾ ಹಾಗೂ ನಟ ವಿರಾಟ್

Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್

error: Content is protected !!