Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೂಡಾ ಸೈಟುಗಳನ್ನು ಹಿಂತಿರುಗಿಸಿದ ಸಿಎಂ ಧರ್ಮಪತ್ನಿ ಪಾರ್ವತಿ : ಸಿದ್ದರಾಮಯ್ಯ ಹೇಳಿದ್ದೇನು..? ಇದರಿಂದ ಆಗುವ ಪ್ರಯೋಜನವೇನು..?

Facebook
Twitter
Telegram
WhatsApp

ಮೈಸೂರು: ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇರಲಿಲ್ಲ. ಆದರೆ ಈ ಬಾರಿ ಎರಡನೇ ಸಲ ಮುಖ್ಯಮಂತ್ರಿಯಾದ ಮೇಲೆ ಮೂಡಾ ಹಗರಣ ಸುತ್ತಿಕೊಂಡಿದೆ. ಈ ಒಂದು ಪ್ರಕರಣ ಸಿಎಂ ಸ್ಥಾನಕ್ಕೆ ಕುತ್ತು ತಂದಿದೆ. ವಿಪಕ್ಷ ನಾಯಕರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದಾರೆ‌‌. ತನಿಖೆ ಎದುರಿಸುತ್ತೇನೆ, ಆದರೆ ರಾಜೀನಾಮೆ ಕೊಡಲ್ಲ ಎಂದಿದ್ದಾರೆ.

ಇದೀಗ ಆ ಸೈಟ್ ಗಳನ್ನು ವಾಪಾಸ್ ನೀಡಲು ಪಾರ್ವತಿ ಅವರು ಸಿದ್ದರಾಗಿದ್ದಾರೆ. ಮೂಡಾ ನಿವೇಶನ ಆರೋಪ ರಾಜಕೀಯ ಸಂಚು ಎಂದುಕೊಂಡಿದ್ದೆ. ಈ ಆರೋಪ ಕೇಳಿ ಬಂದಾಗಲೇ ವಾಪಾಸ್ ಮಾಡಬೇಕು ಎಂದುಕೊಂಡೆ. ಆದರೆ ಎದುರಾಳಿಗಳ ಸಂಚಿಗೆ ಬಲಿಯಾಗಬಾರದೆಂಬ ಆಪ್ತರ ಮಾತಿಗೆ ಸುಮ್ಮನೆ ಆದೆ. ಈಗ ಪತಿಯ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರುತ್ತಿದೆ ಎಂದಾಗ ವಾಪಾಸ್ ನೀಡಲು ನಿರ್ಧರಿಸಿದ್ದೇನೆ. ಇದು ಮಗನಿಗಾಗಲೀ, ಪತಿಯ ಜೊತೆಗಾಗಲಿ ಚರ್ಚಿಸಿ ತೆಗೆದುಕೊಂಡ ನಿರ್ಧಾರವಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಮಾತನಾಡಿ, ನನ್ನ ನಾಲ್ಕು ದಶಕಗಳ ಸುಧೀರ್ಘ ರಾಜಕೀಯದಲ್ಲಿ ಎಂದು ಕೂಡ ಮಧ್ಯಪ್ರವೇಶಿಸದ ನನ್ನ ಧರ್ಮಪತ್ನಿ, ನನ್ನ ವಿರುದ್ಧ ದ್ವೇಷದ ರಾಜಕಾರಣಕ್ಕೆ ಮಾನಸಿಕವಾಗಿ ಹಿಂಸೆ ಅನುಭವಿಸುವಂತೆ ಆಗಿದೆ. ಇದಕ್ಕೆ ನನ್ನ ವಿಷಾಧವಿದೆ. ಹೀಗಿದ್ದರು ಸೈಟ್ ಗಳನ್ನು ಹಿಂತಿರುಗಿಸುವ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

ಸೈಟ್ ವಾಪಾಸ್ ಕೊಡಿಸುವುದರಿಂದ ಕಾನೂನಾತ್ಮಕ ಹೋರಾಟಕ್ಕೆ ಪ್ಲಸ್ ಪಾಯಿಂಟ್ ಆಗಬಹುದು. ಸುಪ್ರೀಂ ಕೋರ್ಟ್ ಹೋಗುವ ಸ್ಥಿತಿ ಬಂದರೆ, ಅಲ್ಲಿ ಸೈಟ್ ವಾಪಾಸ್ ನೀಡಿರುವ ಬಗ್ಗೆಯೂ ವಾದ ಮಂಡಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!