Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಿಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿರುವ ರಾಜಕಾರಣಿಗಳು : ಈಗ ಆನಂದ್ ಸಿಂಗ್ ಸರದಿ..!

Facebook
Twitter
Telegram
WhatsApp

 

ವಿಜಯನಗರ: ರಾಜಕೀಯ ಭವಿಷ್ಯದಲ್ಲಿ ಮಕ್ಕಳ ಬುನಾದಿ ಗಟ್ಟಿ ಮಾಡುವುದಕ್ಕೆ ತಂದೆಯಂದಿರು ಯೋಚನೆ ಮಾಡುತ್ತಿದ್ದಾರೆ. ಮಕ್ಕಳಿಗಾಗಿ ಟಿಕೆಟ್ ನಿರೀಕ್ಷೆ ಮಾಡುತ್ತಿದ್ದಾರೆ. ಗೆದ್ದೆ ಗೆಲ್ಲುತ್ತೇವೆ ಎಂಬ ಕ್ಷೇತ್ರದಲ್ಲಿ ಮಕ್ಕಳನ್ನು ನಿಲ್ಲಿಸಿ, ಮತ್ತೊಂದು ಕ್ಷೇತ್ರದಲ್ಲಿ ತಾವೂ ನಿಲ್ಲುವ ಪ್ರಯತ್ನ ಮಾಡುತ್ತಾರೆ. ಈಗ ಸಚಿವ ಆನಂದ್ ಸಿಂಗ್ ಅವರು ಅದೇ ಮಾಡ್ತಾ ಇದ್ದಾರೆ.

ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡುವಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪಾತ್ರವೂ ಮಹತ್ವ ಪಡೆದಿದೆ. ವಿಜಯನಗರವನ್ನು ಈಗ ಮಗನಿಗೆ ಬಿಟ್ಟುಕೊಡಲು ಹೊರಟಿದ್ದಾರೆ. ಬಲ್ಲ ಮೂಲಗಳಿಂದ ಬಂದ ಮಾಹಿತಿ ಪ್ರಕಾರ, 2023ರ ಚುನಾವಣೆಯಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ವಿಜಯನಗರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ ಎನ್ನಲಾಗಿದೆ.

ವಿಜಯನಗರ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು, ಆನಂದ್ ಸಿಂಗ್ ಕೊಪ್ಪಳದಿಂದ ಸ್ಪರ್ಧೆ ಮಾಡಲಿದ್ದಾರೆ.ಈಗಾಗಲೇ ಈ ಸಂಬಂಧ ಬಿಜೆಪಿ ವರಿಷ್ಠರ ಜೊತೆಗೆ ಒಂದು ಸುತ್ತಿನ ಮಾತುಕತೆಯಾಗಿದೆ. ಮಗನಿಗೆ ಟಿಕೆಟ್ ನೀಡುವಂತೆ ಮನವಿ ಇಟ್ಟಿದ್ದಾರಂತೆ. ಇದರ ಬೆನ್ನಲ್ಲೆ ಸಿದ್ದಾರ್ಥ್ ಸಿಂಗ್ ಕೂಡ ಜನಸೇವೆಯಲ್ಲಿ ತೊಡಗಿದ್ದಾರೆ. ಗ್ರಾಮ ವಾಸ್ತವ್ಯ ಮಾಡುವುದು, ಬಡವರಿಗೆ ಸಹಾಯ ಮಾಡುವುದು ಹೀಗೆ ಅನೇಕ ಕೆಲಸಗಳಲ್ಲಿ ತೊಡಗಿದ್ದಾರೆ. ಆನಂದ್ ಸಿಂಗ್ ಒಟ್ಟು ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. ಹೀಗಾಗಿ ಈ ಬಾರಿ ಮಗನ ಗೆಲುವಿಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!