Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

DCP ಆಗಿ ಅಧಿಕಾರ ವಹಿಸಿಕೊಂಡ RCB ಸ್ಟಾರ್ ಕ್ರಿಕೆಟರ್ : ಸಿರಾಜ್ ಸಂಬಳ ಎಷ್ಟು ಗೊತ್ತಾ..?

Facebook
Twitter
Telegram
WhatsApp

ಟೀಂ ಇಂಡಿಯಾದ ಸ್ಟಾರ್ ವೇಗಿ ಎಂದೇ ಗುರುತಿಸಿಕೊಂಡಿದ್ದ ಮೊಹಮ್ಮದ್ ಸಿರಾಜ್ ಇದೀಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಡಿಸಿಪಿಯಾಗಿ ಅಧಿಕಾರ ವಹಿಸಿಕೊಂಡ ಸಿರಾಜ್ ಗೆ ಅಭಿಮಾನಿಗಳು ಕೂಡ ವಿಶ್ ಮಾಡಿದ್ದಾರೆ. ಸದ್ಯ ಮೊಹಮ್ಮದ್ ಸಿರಾಜ್ ತೆಲಂಗಾಣದ ಡೆಪ್ಯೂಟಿ ಸೂಪರಿಡೆಂಟ್ ಆಫ್ ಪೊಲೀಸ್ ಆಗಿದ್ದಾರೆ. ಇಂದು ಮೊಹಮ್ಮದ್ ಸಿರಾಜ್ ಅವರು ತೆಲಂಗಾಣ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಗೆ ರಿಪೋರ್ಟ್ ಮಾಡಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಭಾರತದ ಪರವಾಗಿ ಮೊಹಮ್ಮದ್ ಸಿರಾಜ್ ಮಾಡಿದ ಸಾಧನೆಗಾಗಿ ತೆಲಂಗಾಣ ಸರ್ಕಾರ ಡಿಸಿಪಿ ಹುದ್ದೆ ನೀಡಿ ಗೌರವಿಸಿದೆ. ರಾಜ್ಯ ಸರ್ಕಾರ ತನಗೆ ನೀಡಿರುವ ಪೋಸ್ಟ್ ಸ್ವೀಕರಿಸಿದ್ದಾಗಿ, ರಿಪೋರ್ಟ್ ನಲ್ಲಿ ಡಿಜಿಪಿಗೆ ಸಿರಾಜ್ ತಿಳಿಸಿದ್ದಾರೆ. ಆರ್ಸಿಬಿ ತಂಡದ ಸ್ಟಾರ್ ವೇಗಿಯಾಗಿದ್ದ ಮೊಹಮ್ಮದ್ ಸಿರಾಜ್ ಈಗ ಸರ್ಕಾರಿ ಅಧಿಕಾರಿಯಾಗಿದ್ದಾರೆ. ಇವರ ತಿಂಗಳ ಸಂಬಳ 1,37,050 ರೂಪಾಯಿ ಆಗಿದೆ. ಡಿಸಿಪಿಯಾಗಿ ಈಗಾಗಲೇ ಚಾರ್ಜ್ ತೆಗೆದುಕೊಂಡಿದ್ದಾರೆ.

ಮೊಹಮ್ಮದ್ ಸಿರಾಜ್ ಸಾಮಾನ್ಯ ಆಟೋ ಚಾಲಕನ ಮಗನಾಗಿ ಕ್ರಿಕೆಟ್ ಜೀವನ ಆರಂಭಿಸಿದರು. ತಮ್ಮ ಅಸಾಧಾರಣ ಪ್ರತಿಭೆಯಿಂದಾನೇ ಆರ್ಸಿಬಿ ತಂಡ ಸೇರಿಕೊಂಡರು. ಬಳಿಕ ಟೀಂ ಇಂಡಿಯಾದ ವೇಗಿ ಎನಿಸಿಕೊಂಡರು. 2024ರಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದಾಗ ಮೊಹಮ್ಮದ್ ಸಿರಾಜ್ ಕೂಡ ಸದಸ್ಯರಾಗಿದ್ದರು. ವಿಶ್ವಕಪ್ ಗೆದ್ದಾಗ ಸಿರಾಜ್ ಗೆ ಬಿಸಿಸಿಐ 5 ಕೋಟಿ ನೀಡಿದೆ. ಆದಾಯ ಗಳಿಕೆಯಲ್ಲೂ ಸಿರಾಜ್ ಮುಂದಿದ್ದಾರೆ. ಇತ್ತೀಚೆಗಷ್ಟೆ ಸಿರಾಜ್ ಬರೋಬ್ಬರಿ ಮೂರು ಕೋಟಿ ರೂಪಾಯಿ ಬೆಲೆಯ ರೇಂಜ್ ರೋವರ್ ಕಾರು ಖರೀದಿ ಮಾಡಿದ್ದಾರೆ. ಈಗ ಸರ್ಕಾರಿ ಅಧಿಕಾರಿಯು ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

ಚಿತ್ರದುರ್ಗ | ಮೂವರು ಮಹಿಳೆಯರು ಕಾಣೆ : ಪತ್ತೆಗೆ ಮನವಿ

ಚಿತ್ರದುರ್ಗ. ಅ.18: ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಮಹಿಳೆಯರು ಕಾಣೆಯಾದ ಕುರಿತು ಮೂರು  ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗೊಲ್ಲರಹಟ್ಟಿ ಗ್ರಾಮದ ರೇಣುಕಮ್ಮ ಗಂಡ ಕರಿಯಪ್ಪ

error: Content is protected !!