Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಆರ್ಸಿಬಿ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್

Facebook
Twitter
Telegram
WhatsApp

ಆರ್ಸಿಬಿ ಅಭಿಮಾನಿಗಳಿಗೆ ದಿನೇಶ್ ಕಾರ್ತಿಕ್ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಆರ್ಸಿಬಿಯ ಸ್ಟಾರ್ ಫಿನಿಶರ್ ಇದೀಗ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ತಮ್ಮ ನಿರ್ಧಾರ ಘೋಷಿಸಿದ್ದಾರೆ. ತನ್ನನ್ನು ಬೆಂಬಲಿಅಇದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದೆ.

ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ದಿನೇಶ್ ಕಾರ್ತಿಕ್, ಕಳೆದ ಕೆಲವು ದಿನಗಳಿಂದ ನನಗೆ ಸಿಗುತ್ತಿರುವ ಬೆಂಬಲ ಹಾಗೂ ಅಪಾರ ಪ್ರೀತಿಗೆ ನಾನು ಆಭಾರಿ. ನಾನು ಸಾಕಷ್ಟು ಯೋಚನೆ ಮಾಡಿ ನಿವೃತ್ತಿ ಘೋಷಣೆ ಮಾಡಿದ್ದೇನೆ. ಮುಂದೆ ಎದುರಾಗುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ನಾನು ಸಿದ್ಧನಾಗಿದ್ದೇನೆ. ನನ್ನನ್ನು ಬೆಂಬಲಿಸಿದ ಕೋಚ್ ಗಳು, ಆಟಗಾರರು, ಸೆಲೆಕ್ಟರ್ಸ್, ಸಹ ಆಟಗಾರರಿಗೆ ಹಾಗೂ ಅಭಿಮಾನಿಗಳಿಗೆ ವಿಶೇಷವಾದ ಧನ್ಯವಾದಗಳನ್ನು ತಿಳಿಸುತ್ತೇನೆ. ನನ್ನ ಪೋಷಕರೇ ನನ್ನ ಸ್ಟ್ರೆಂಥ್. ಅವರ ಆಶೀರ್ವಾದವೇ ಇಲ್ಲದೆ ಇಷ್ಟೆಲ್ಲಾ ಸಾಧನೆ ಮಾಡಲು ಸಾಧ್ಯವಿರಲಿಲ್ಲ ಎಂದು ಬರೆದಿದ್ದಾರೆ.

ಇದೇ ವೇಳೆ ಬೆನ್ನೆಲುಬಾಗಿ ನಿಂತ ತನ್ನ ಹೆಂಡತಿಗೂ ಧನ್ಯವಾದ ತಿಳಿಸಿದ್ದಾರೆ. ಅಭಿಮಾನಿಗಳ ಬೆಂಬಲವಿಲ್ಲದೆ ಏನು ಮಾಡಲು ಸಾಧ್ಯವಿಲ್ಲ ಎಂದು ತಮ್ಮ ಅಭಿಮಾನಿಗಳಿಗೂ ವಿಶೇಷವಾದ ಧನ್ಯವಾದ ತಿಳಿಸಿದ್ದಾರೆ. 2004 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಕಾಲಿಟ್ಟಿದ ದಿನೇಶ್ ಕಾರ್ತಿಕ್ ಅವರ ಸುಮಾರು 20 ವರ್ಷಗಳ ಸುದೀರ್ಘ ಕ್ರಿಕೆಟ್ ಪಯಣಕ್ಕೆ ಇಂದು ಫುಲ್​ ಸ್ಟಾಪ್ ಬಿದ್ದಿದೆ. ಎಲ್ಲಾ ಮಾದರಿಯ ಕ್ರಿಕೆಟ್ ಗೂ ದಿನೇಶ್ ಕಾರ್ತಿಕ್ ವಿದಾಯ ಹೇಳುವ ಮೂಲಕ ಶಾಕ್ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

error: Content is protected !!