Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಳಗಾವಿ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿ ಸ್ವೀಕರಿಸಿ : ಅಬ್ದುಲ್ ಮಜೀದ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.06 : ನ್ಯಾಯಯುತ ಸಂವಿಧಾನಬದ್ದ ಹಕ್ಕುಗಳನ್ನು ಸರ್ಕಾರ ಕೂಡಲೆ ಪರಿಗಣಿಸಿ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೊರಟಿರುವ ಜಾಥ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿತು.

ಒನಕೆ ಓಬವ್ವ ವೃತ್ತದಲ್ಲಿ ಜಾಥವನ್ನು ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಾಂತರಾಜ್ ಆಯೋಗದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳೇ ಕಳೆದಿದ್ದರೂ ಇನ್ನು ಜಾರಿಗೆ ತರುವಲ್ಲಿ ಆಳುವ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಹಾಗಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೆ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟರ ಒಳಮೀಸಲಾತಿ ಹಂಚಿಕೆಯಲ್ಲಿ ಅಸ್ಪøಶ್ಯರು ಎನ್ನುವ ಕಾರಣಕ್ಕಾಗಿ ಸಮುದಾಯಕ್ಕೆ ಅನ್ಯಾಯವಾಗುತ್ತಲೆ ಬರುತ್ತಿದೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ 30 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಶೀಘ್ರವೇ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ಮುಸಲ್ಮಾನರಿಗಿದ್ದ 2 ಬಿ.ಯಡಿ ನಾಲ್ಕು ಪರ್ಸೆಂಟ್ ಮೀಸಲಾತಿಯನ್ನು ಹಿಂದಿನ ಬಸವರಾಜ್ ಬೊಮ್ಮಾಯಿ ಸರ್ಕಾರ ರದ್ದುಪಡಿಸಿತ್ತು. ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ 2 ಬಿ. ಮೀಸಲಾತಿಯನ್ನು ಪುನರ್ ಘೋಷಿಸಿ ಶೇ.ನಾಲ್ಕರಿಂದ ಎಂಟು ಪರ್ಸೆಂಟ್‍ಗೆ ಹೆಚ್ಚಿಸುವಂತೆ ಮನವಿ ಮಾಡಿದರು.

ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಜಾಥ ಉದ್ದೇಶಿಸಿ ಮಾತನಾಡಿ ದಲಿತರು, ಮುಸಲ್ಮಾನರು, ಹಿಂದುಳಿದಿರುವ ಮತಗಳನ್ನು ಪಡೆದು ಗೆದ್ದಿರುವ ಚಿತ್ರದುರ್ಗ ಶಾಸಕ ಬೆಳಗಾವಿಯ ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಣುತ್ತಿಲ್ಲ. ನಿಜವಾಗಿಯೂ ಮತದಾರರ ಋಣ ನಿಮ್ಮ ಮೇಲಿದ್ದರೆ ದಲಿತರು, ಮುಸಲ್ಮಾನರ ಪರ ಧ್ವನಿಎತ್ತಿ. ಎಲ್ಲಿಯವರೆಗೂ ಸುಳ್ಳು ಇರುತ್ತದೋ ಅಲ್ಲಿಯತನಕ ಎಸ್.ಡಿ.ಪಿ.ಐ. ಜೀವಂತವಾಗಿದ್ದು, ಹೋರಾಟ ನಡೆಸುತ್ತದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಮ್ಮ ಶಕ್ತಿಯನ್ನು ತೋರಿಸುತ್ತವೆಂದು ಗುಡುಗಿದರು.

ಎಸ್.ಡಿ.ಪಿ.ಐ. ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೂಡ್ಲಿಪೇಟೆ, ಭೀಮಯಾತ್ರೆ ಬಳಗದ ಮುಖಂಡ ಭಾಸ್ಕರ್‍ಪ್ರಸಾದ್, ಕುಂಚಿಗನಹಾಳ್ ಮಹಾಲಿಂಗಪ್ಪ, ಎಸ್.ಡಿ.ಪಿ.ಐ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಕೀರ್‍ಹುಸೇನ್, ಉಪಾಧ್ಯಕ್ಷ ಕಮ್ರಾನ್‍ಆಲಿ ಸೇರಿದಂತೆ ಪದಾಧಿಕಾರಿಗಳು ಜಾಥದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!