Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ ಸಿಓಡಿ ಗೆ ವಹಿಸಲು ಶಿಫಾರಸು : ಸಚಿವ ಡಿ. ಸುಧಾಕರ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜೂನ್.26 :  ಚಿತ್ರದುರ್ಗ ನಿರ್ಮಿತಿ ಕೇಂದ್ರದಲ್ಲಿ ಈ ಹಿಂದಿನ ಯೋಜನಾ ನಿರ್ದೇಶಕರ ಅವಧಿಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಒಡಿ ಗೆ ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.  

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿರ್ಮಿತಿ ಕೇಂದ್ರದ ಈಗಿನ ಯೋಜನಾ ನಿರ್ದೇಶಕ ಹರೀಶ್ ಮಾತನಾಡಿ, ನಿರ್ಮಿತಿ ಕೇಂದ್ರದ ಮೂಲಕ ಒಂದು ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ಭೌತಿಕವಾಗಿ ನಡೆದಿರುವ ಕಾಮಗಾರಿ ಗಿಂತಲೂ ಹೆಚ್ಚಿನ ಹಣವನ್ನು ಪಾವತಿಸಿರುವುದು ಹಾಗೂ ಖರ್ಚು ಮಾಡಿರುವುದು ಕಂಡುಬಂದಿದೆ.

ಈಗಾಗಲೇ ಈ ಕುರಿತ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲಾಗಿದೆ ಎಂದರು.  ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಕೆ.ಸಿ.ವೀರೇಂದ್ರ ಪಪ್ಪಿ, ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದರ್ ಕುಮಾರ್ ಮೀನಾ, ಜಿಲ್ಲಾ ಪಂಚಾಯಿತಿ ಕೆಡಿಪಿ ನಾಮನಿರ್ದೇಶಿತ ಸದಸ್ಯರಾದ ಖಲಿಂ ಉಲ್ಲಾ, ರಂಗಸ್ವಾಮಿ, ದೀಪಿಕಾ, ಸತೀಶ್, ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಜಾಗೃತಿ ಮೂಡಿಸಿ : ಪಿಡಿಒಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್

ಚಿತ್ರದುರ್ಗ. ಜುಲೈ.03:  ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿರುವುದರಿಂದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾಗೃತಿ ಮೂಡಿಸುವ ಕೆಲಸ

120 ವರ್ಷಗಳ ಇತಿಹಾಸ ಇರುವ ರೋಟರಿ ಸಂಸ್ಥೆಯ ಮೂಲ ಉದ್ದೇಶ ಸೇವೆ : ರೊ.ಪಿ.ಹೆಚ್.ಎಫ್. ಎಂ.ಕೆ.ರವೀಂದ್ರ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : : ಕೇವಲ ನಾಲ್ಕು ಸದಸ್ಯರಿಂದ 1905 ರಲ್ಲಿ ಆರಂಭಗೊಂಡ ರೋಟರಿ ಸಂಸ್ಥೆ 119

ಶಾಸಕ ಎನ್.ವೈ.ಗೋಪಾಕೃಷ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ : ಶುಭಕೋರಿದ ಕಾಂಗ್ರೆಸ್ ಮುಖಂಡರು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.03 : ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಕೃಷ್ಣರವರಿಗೆ ಬೃಹದಾಕಾರವಾದ ಹಾರ ಹಾಕಿ ಕಾಂಗ್ರೆಸ್‍ನಿಂದ ಹುಟ್ಟುಹಬ್ಬದ ಶುಭಾಷಯಗಳನ್ನು ಕೋರಲಾಯಿತು.

error: Content is protected !!