Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ರಘು ತಾಯಿ ನಿಧನ..!

Facebook
Twitter
Telegram
WhatsApp

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎ4 ಆರೋಪಿಯಾಗಿರುವ ರಘು ತಾಯಿ ಇಂದು ನಿಧನರಾಗಿದ್ದಾರೆ. ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷನಾಗಿದ್ದ ರಘು, ರೇಣುಕಾಸ್ವಾಮಿಯನ್ನು ಹುಡುಕಿ ಕರೆ ತಂದಿದ್ದ. ಮಗ ಜೈಲು ಸೇರಿದ ಕೊರಗಿನಲ್ಲಿಯೇ ತಾಯಿ ಮಂಜುಳಾ ನಿಧನರಾಗಿದ್ದಾರೆ.

ಚಿತ್ರದುರ್ಗದ ಕೋಳಿ ಬುರುಜಹಟ್ಟಿ ನಿವಾಸದಲ್ಲಿ 65 ವರ್ಷದ ಮಂಜುಳ ನಿಧನರಾಗಿದ್ದಾರೆ. ರಘು ಮನೆಗೆ ಒಬ್ಬನೇ ವಾರಸುದಾರನಾಗಿದ್ದ. ಇದ್ದೊಬ್ಬ ಮಗ ಹೀಗೆ ಜೈಲು ಸೇರಿ ಕುಳಿತರೆ ಯಾವ ತಂದೆ ತಾಯಿಗೆ ಆದರೂ ಆತಂಕವಾಗುವುದಿಲ್ಲವೇ, ಚಿಂತೆಯಾಗುವುದಿಲ್ಲವೇ. ಈ ಕೇಸಲ್ಲಿ ಹೈಪ್ರೊಫೈಲ್ ಇರುವಂತ ದರ್ಶನ್ ಅವರೇ ಜಾಮೀನು ತೆಗೆದುಕೊಳ್ಳುವುದಕ್ಕೆ ಆಗಿಲ್ಲ. ಇನ್ನು ಮಗನನ್ನು ಕಾಪಾಡುವುದು ಯಾರು, ಬಿಡಿಸುವುದು ಯಾರು ಎಂಬ ಚಿಂತೆಯಲ್ಲಿಯೇ ಮಂಜುಳಾ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

ತಾಯಿಯ ಅಂತ್ಯ ಸಂಸ್ಕಾರ ಮಾಡುವುದಕ್ಕೆ ರಘು ಕಳುಹಿಸಿಕೊಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಜೈಲು ಸೇರಿರುವ ಚಿತ್ರದುರ್ಗದ ಇನ್ನೊಬ್ಬ ಆರೋಪಿ ಅನಿಲ್ ಎಂಬಾತನ ತಂದೆಯೂ ಕೆಲ ದಿನಗಳ ಹಿಂದೆ ತೀರಿಕೊಂಡಿದ್ದರು. ಈಗ ಮಗನ ಕೊರಗಿನಲ್ಲೇ ರಘು ತಾಯಿ ಕೂಡ ತೀರಿಕೊಂಡಿದ್ದಾರೆ. ಆರೋಪಿಗಳೆಲ್ಲಾ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಾ ಕೂತಿದ್ದಾರೆ.

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಕ್ರೂರವಾಗಿ ಕೊಂದಿರುವ ಆರೋಪದ ಮೇಲೆ ದರ್ಶನ್ ಸೇರಿದಂತೆ ಹದಿನೇಳು ಮಂದಿ ಜೈಲಿನಲ್ಲಿಯೇ ಇದ್ದಾರೆ. ಜುಲೈ 18ಕ್ಕೆ ನ್ಯಾಯಾಂಗ ಬಂಧನ ಮುಕ್ತಾಯವಾಗಿತ್ತು. ಮತ್ತೆ ವಿಚಾರಣೆ ನಡೆಸಿದ ಕೋರ್ಟ್ ಆಗಸ್ಟ್ 1ರ ತನಕ ಮ್ಯಾಯಾಂಗ ಬಂಧನ ವಿಸ್ತರಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ವಿಶ್ವ ಹೃದಯ ದಿನ : ಇಂದಿನ ಯುವಕರು ಏಕೆ ಹೃದಯಾಘಾತದಿಂದ ಬಳಲುತ್ತಿದ್ದಾರೆ ?

    ಸುದ್ದಿಒನ್ : ಜಾರ್ಖಂಡ್ ಅಬಕಾರಿ ಇಲಾಖೆಯು ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಪರೀಕ್ಷೆ ನಡೆಯಿತು. ಈ ಸಂದರ್ಭದಲ್ಲಿ ಇದರಲ್ಲಿ ಭಾಗವಹಿಸಿದ್ದ ಹಲವು ಯುವಕರು ಓಟದ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದಾರೆ. ಓಡುವಾಗ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ

ಈ ರಾಶಿಯವರಿಗೆ ವಿರೋಧಿಗಳಿಂದ ಭಯ, ದ್ವೇಷ, ಅಸೂಯೆ, ಸೇಡಿನಂತ ನಕರಾತ್ಮಕ ಭಾವನೆಗಳು ಕಾಡಬಹುದು, ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ, ಭಾನುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-29,2024 ಸೂರ್ಯೋದಯ: 06:09, ಸೂರ್ಯಾಸ್ತ : 06:02 ಶಾಲಿವಾಹನ

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

error: Content is protected !!