Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೊಡಗು ಜಿಲ್ಲೆಯಲ್ಲಿ ಶವಗಾರದಲ್ಲೊಬ್ಬ ಕಾಮುಕ ಪ್ರತ್ಯಕ್ಷ..!

Facebook
Twitter
Telegram
WhatsApp

ಮಡಿಕೇರಿ: ಪೋಸ್ಟ್ ಮಾರ್ಟಮ್ ಗೆ ಹೋಗುವ ದೇಹಗಳನ್ನು ಆದಷ್ಟು ಬೇಗ ವಾಪಾಸ್ ಕೊಡುವ ಬರದಲ್ಲಿ ಇರುತ್ತಾರೆ ಒಳಗಿರುವವರು. ಎಷ್ಟೇ ಧೈರ್ಯವಂತರಾದರೂ, ಜೀವವಿಲ್ಲದ ದೇಹ ನೋಡುವುದು ಕಷ್ಟವೇ. ಆದರೆ ಅಲ್ಲೊಬ್ಬ ಕಾಮುಕ ಹೆಣವಾಗಿ ಬರುತ್ತಿದ್ದ ಮಹಿಳೆಯರ ಫೋಟೋಗಳನ್ನು ಸೆರೆಹಿಡಿದು, ತನ್ನ ಮೊಬೈಲ್ ನಲ್ಲಿ ಇಟ್ಟುಕೊಂಡಿದ್ದ ಘಟನೆ ಬೆಳಕಿಗೆ ಬಂದಿದೆ.

ಸೈಯ್ಯದ್ ಎಂಬಾತ 2021ರಲ್ಲಿ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಮ್ ನಲ್ಲಿ ಅಟೆಂಡರ್ ಆಗಿ ಕೆಲಸಕ್ಕೆ ಸೇರಿದ್ದನಂತೆ. ಅದು ಕಾಂಟ್ರಾಕ್ಟ್ ಬೇಸ್ ಮೇಲೆ. ಪೋಸ್ಟ್ ಮಾರ್ಟಮ್ ಗೆ ಬರುವ ಮಹಿಳೆಯರ ನಗ್ನ ಚಿತ್ರಗಳನ್ನು ತೆಗೆಯುತ್ತಿದ್ದನಂತೆ. ಅಷ್ಟೇ ಅಲ್ಲ ಆಸ್ಪತ್ರೆಯ ಕೆಲವು ಮಹಿಳೆಯರ ಮೇಲೂ ದೌರ್ಜನ್ಯ ಎಸಗುತ್ತಿದ್ದನಂತೆ.

ಇತ್ತಿಚೆಗೆ ಸೈಯ್ಯದ್ ಮಡಿಕೇರಿಯಲ್ಲಿ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ್ದನಂತೆ. ಈ ವೇಳೆ ಜನರೆಲ್ಲ ಸೇರಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದರಂತೆ. ಈತನ ಫೋನ್ ಕೂಡ ಪೊಲೀಸರ ವಶದಲ್ಲಿತ್ತಂತೆ. ಫೋನ್ ಪರಿಶೀಲಿಸಿದಾಗ ಅವನ ಕಾಮ ಕೃತ್ಯಗಳೆಲ್ಲಾ ಬಯಲಾಗಿದೆ.

ಸದ್ಯ ಸಯ್ಯದ್ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹಿಂದೂ ಜಾಗರಣಾ ವೇದಿಕೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳ ನಿರ್ದೇಶಕ ಹಾಗೂ ಡೀನ್ ಗೆ ದೂರು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!