Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದೇಶ್ ಯಾದವ್ ನಿಧನ ಕುಂಟುಂಬಕ್ಕೆ ಮಾತ್ರವಲ್ಲದೆ ಪಕ್ಷ ಮತ್ತು ಸಂಘಟನೆಗೂ ಅಪಾರ ನಷ್ಠ : ಸಿ.ಟಿ ರವಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಜು.07) : ಸಿದ್ದೇಶ್ ಯಾದವ್ ರವರ ಆಕಾಲಿಕ ನಿಧನ ಅವರ ಕುಟುಂಬದವರಿಗೆ ಮಾತ್ರವಲ್ಲ ಸಂಘಟನೆ ಮತ್ತು ಪಕ್ಷಕ್ಕೂ ಸಹಾ ದುಃಖವನ್ನುಂಟು ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

ಇತ್ತೀಚೆಗೆ ನಿಧನರಾದ ಸಿದ್ದೇಶ್ ಯಾದವ್‌ರವರು ಮನೆಗೆ ಭೇಟಿ ನೀಡಿ ಮೃತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಂಟುಂಬದವರಿಗೆ ಸಾಂತ್ವಾನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದೇಶ್ ಯಾದವ್ ರವರು ನನ್ನದೊಂದಿಗೆ ಬಹಳ ವರ್ಷಗಳಿಂದ ಒಡನಾಡಿಗಳಾಗಿದ್ದರು.

ವಿದ್ಯಾರ್ಥಿ ಪರಿಷತ್ ಕಾಲದಿಂದಲೂ ಹಿಡಿದು ಬಿಜೆಪಿ ಯುವ ಮೋರ್ಚಾದಿಂದಲೂ ಪಕ್ಷದ ಹಲವಾರು ಜವಾಬ್ದಾರಿಗಳನ್ನು ಹೊತ್ತು ಕೊಂಡು ನಮ್ಮ ಜೊತೆಯಲ್ಲಿ ಉತ್ತಮವಾಗಿ ಕೆಲಸವನ್ನು ಮಾಡಿದವರು. ಅವರ ಆಕಾಲಿಕ ನಿಧನ ಅವರ ಕುಂಟುಂಬಕ್ಕೆ ಮಾತ್ರವಲ್ಲ ಪಕ್ಷ ಮತ್ತು ಸಂಘಟನೆಗೆ ದುಃಖವಾಗಿದ್ದು ಅಪಾರವಾದ ನಷ್ಠವನ್ನು ಉಂಟು ಮಾಡಿದೆ ಎಂದರು.

ಪಕ್ಷದಲ್ಲಿ ಬೆಳೆಯುತ್ತಿದ್ದ ನಾಯಕನಾಗಿದ್ದು, ಹಿಂದುಳಿದ ವರ್ಗದ ನಾಯಕರಾಗಿದ್ದು ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸಬೇಕೆಂದು ಹೋರಾಟವನ್ನು ಮಾಡುವುದರ ಮೂಲಕ ಬಹಳಷ್ಟು ಪ್ರಯತ್ನವನ್ನು ಮಾಡಿದ್ದರು. ಎರಡು ಮೂರು ಬಾರಿ ದೆಹಲಿಗೆ ಹೋಗಿ ಕಾಡುಗೊಲ್ಲರನ್ನು ಎಸ್.ಟಿ.ಗೆ ಸೇರಿಸುವ ಪ್ರಯತ್ನವನ್ನು ಮಾಡಿದ್ದರು. ಇವರ ಆಕಾಲಿಕ ನಿಧನ ಆಘಾತಕರ ಸಂಗತಿಯಾಗಿದೆ. ನಾನು ಸಿದ್ಧೇಶ್ ಯಾದವ್ ಒಟ್ಟಿಗೆ ಕೆಲಸವನ್ನು ಮಾಡಿದವರು ಅವರು ನಿಧನರಾದ ದಿನ ನಾನು ರಾಜ್ಯದಲ್ಲಿ ಇರಲಿಲ್ಲ. ಈ ಹಿನ್ನಲೆಯಲ್ಲಿ ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬ ವರ್ಗದವರಿಗೆ ಸ್ವಾಂತ್ವಾನ ಹಾಗೂ ಧೈರ್ಯವನ್ನು ತುಂಬುವ ಕಾರ್ಯವನ್ನು ಮಾಡಿದ್ದೇನೆ ಎಂದು ರವಿ ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!