Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೀಘ್ರವೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ವಿ.ಸೋಮಣ್ಣ

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರು ನಗರ ಸೇರಿ ವಿವಿಧ ಜಿಲ್ಲೆಗಳ ಉಸ್ತುವಾರಿ ಯಾರಿಗೆ ನೀಡಬೇಕೆಂಬುದು ಮುಖ್ಯಮಂತ್ರಿಗಳ ಪರಮಾಧಿಕಾರ. ಆ ವಿಚಾರದಲ್ಲಿ ನಾನು ಮೂಗು ತೂರಿಸುವುದಿಲ್ಲ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮುಖ್ಯಮಂತ್ರಿಗಳು ಉಸ್ತುವಾರಿ ಸಚಿವರ ಕುರಿತು ನಿರ್ಧರಿಸಲಿದ್ದಾರೆ ಎಂದು ವಸತಿ ಮತ್ತು ಮೂಲಸೌಲಭ್ಯ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ನಗರದ ಉಸ್ತುವಾರಿಯನ್ನು ಅಶೋಕನಿಗೆ ಕೊಡ್ತಾರಾ, ಸಿಎಂ ಇಟ್ಟುಕೊಳ್ಳುತ್ತಾರಾ ಇಲ್ಲಾ ಸೋಮಣ್ಣನಿಗೆ ಕೊಡ್ತಾರಾ, ಇಲ್ಲಾ ಎರಡು ಮಾಡ್ತಾರ, ಏನು ಮಾಡಿದ್ರೂ ನಮ್ಮ ತಕರಾರಿಲ್ಲ” ಎಂದು ತಿಳಿಸಿದರು.

ಬೆಂಗಳೂರು ನಗರಕ್ಕೆ ಯಾರನ್ನೂ ಉಸ್ತುವಾರಿ ಸಚಿವರನ್ನಾಗಿ ಮಾಡಿಲ್ಲ. ಕೋವಿಡ್ ನಿರ್ವಹಣೆ, ದಸರಾ ಮತ್ತು ಸ್ವಾತಂತ್ರ್ಯೋತ್ಸವ ಸಂಬಂಧ ತಾತ್ಕಾಲಿಕ ನೇಮಕಾತಿ ನಡೆದಿದೆ ಎಂದು ಸೋಮಣ್ಣ ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ನಾನು ಜೆ.ಎಚ್.ಪಟೇಲ್ ಅವರ ಸಚಿವ ಸಂಪುಟದಲ್ಲಿ ಬೆಂಗಳೂರು ನಗರದ ಸಚಿವನಾಗಿದ್ದವನು. ನನಗೆ ಎಲ್ಲರಿಗಿಂತ ಹೆಚ್ಚು ಅನುಭವ ಮತ್ತು ಅರ್ಹತೆ ಇದೆ. ಆದ್ದರಿಂದ ನನ್ನ ಹೆಸರನ್ನೂ ಪರಿಗಣಿಸಿ ಎಂದು ಮುಖ್ಯಮಂತ್ರಿಗಳನ್ನು ಕೇಳಿರುವುದು ನಿಜ. ಬುದ್ಧಿವಂತರಿದ್ದರೆ ಚರ್ಚೆ ನಡೆಯುತ್ತದೆ. ಬೆಂಗಳೂರು ನಗರದ ಎಲ್ಲ ಶಾಸಕರೂ ಒಗ್ಗಟ್ಟಾಗಿದ್ದೇವೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಣೇಶ್‍ನಾಯ್ಕ ನಿಧನ

  ಸುದ್ದಿಒನ್, ಚಿತ್ರದುರ್ಗ, ಮೇ. 14 : ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್‍ನಾಯ್ಕ(55) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು

ಟೀಂ ಇಂಡಿಯಾದ ಕೋಚ್ ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ : ಏನೆಲ್ಲಾ ಕ್ವಾಲಿಟಿ ಬೇಕು ಗೊತ್ತಾ..?

  ಐಪಿಎಲ್ ಮುಗಿದ ಬಳಿಕ ಟಿ-20 ವಿಶ್ವಕಪ್ ಶುರುವಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯುವುದು ಅನುಮಾನ. ಜೂನ್ ನಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿಯಲಿದೆ.‌ ಬಿಸಿಸಿಐ ಹೊಸ ಕೋಚ್

ಸಹಕಾರಿ ಸಂಘಗಳಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನೀಡಿ : ರಾಜ್ಯ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್,  ಚಿತ್ರದುರ್ಗ ಮೇ. 14 :  ರಾಜ್ಯ ಸರ್ಕಾರ ಜಿ.ಪಂ. ತಾ.ಪಂ. ಗ್ರಾ.ಪಂ. ಹಾಗೂ ಮಹಾನಗರಪಾಲಿಕೆ, ನಗರಸಭೆ, ಪಟ್ಟಣ

error: Content is protected !!