Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾ.26 ರಂದು ಗುಬ್ಬಚ್ಚಿ ದಿನಾಚರಣೆ : ಪಕ್ಷಿಗಳಿಗಾಗಿ ಉಚಿತ ಮಣ್ಣಿನ ತಟ್ಟೆ ವಿವರಣಾ ಕಾರ್ಯಕ್ರಮ

Facebook
Twitter
Telegram
WhatsApp

 

ಚಿತ್ರದುರ್ಗ, (ಮಾ.23) : ಬಿರು ಬೇಸಿಗೆಯಲ್ಲಿ ಗುಟುಕು ನೀರು ದೊರೆಯದೇ, ಪರಿತಪಿಸಿ, ದಾಹದಿಂದ ಎಷ್ಟೋ ಪಕ್ಷಿಗಳು ಸಾವನ್ನಪ್ಪುತ್ತವೆ.  ಈ ಸುಡುವ ಬಿಸಿಲಿನಲ್ಲಿ ಪಕ್ಷಿಗಳ ದಾಹ ನೀಗಿಸಲು ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದೆ, ಬಾಲ್ಕನಿಯಲ್ಲಿ ಅಥವಾ ಮನೆಯ ಕಾಂಪೌಂಡ್ ಮೇಲೆ ಒಂದು ಮಣ್ಣಿನ ಪಾತ್ರೆ ಅಥವಾ ತಟ್ಟೆಯಲ್ಲಿ ನೀರನ್ನು ಇಟ್ಟು, ಅಸಹಾಯಕ ಪಕ್ಷಿಗಳಿಗೆ ನೀರುಣಿಸಿದರೆ ಹಲವಾರು ಪಕ್ಷಿಗಳ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ.

ಇದೇ ನಿಟ್ಟಿನಲ್ಲಿ, ಸಮಾಜದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಗುಬ್ಬಚ್ಚಿ ಬರ್ಡ್ ಟ್ರಸ್ಟ್ ಮತ್ತು ನಗರದ ಪ್ರತಿಷ್ಠಿತ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪಕ್ಷಿಗಳಿಗಾಗಿಯೇ ಮನೆ-ಮನೆಗೂ ಮಣ್ಣಿನ ತಟ್ಟೆಯನ್ನು ಉಚಿತವಾಗಿ ನೀಡಿ, ಸಂಸ್ಥೆಯ ಲೋಕ ಕಲ್ಯಾಣ ಧ್ಯೇಯವನ್ನು ಅನುಷ್ಟಾನಗೊಳಿಸುವ ಮಹತ್ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವ ಗುಬ್ಬಚ್ಚಿ ದಿನಾಚರಣೆ-2023 ಅಂಗವಾಗಿ ಗುಬ್ಬಚ್ಚಿ ಪಕ್ಷಿ ಹಬ್ಬ-2023 ಆಚರಣೆಯನ್ನು ದಿನಾಂಕ: 26-03-2023ರ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದು, ವಿವರವಾದ ಕರಪತ್ರವನ್ನು ಈ ಪತ್ರದೊಂದಿಗೆ ಲಗತ್ತಿಸಿದೆ.

ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಹಲವಾರು ಮೂಕ ಜೀವಿಗಳನ್ನು ಕಾಪಾಡುವ ನಮ್ಮ ಪ್ರಯತ್ನವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!