Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುವರ್ಣಸೌಧದಲ್ಲಿ ಶಾವಿಗೆ ಒಣ ಹಾಕಿದ್ದ ಮಹಿಳೆಯ ಪರ ಅಭಿಯಾನ ಶುರು : ಏನಿದು ವಿಚಾರ..?

Facebook
Twitter
Telegram
WhatsApp

ಬೆಳಗಾವಿ: ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಶಾವಿಗೆ ಒಣ ಹಾಕಿದ ಮಹಿಳೆಯನ್ನ ಕೆಲಸದಿಂದ ಅಮಾನತು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಮಲ್ಲಮ್ಮನಿಗೆ ಮರಳಿ ಕೆಲಸ ಸಿಗಬೇಕೆಂಬ ಅಭಿಯಾನ ಆರಂಭವಾಗಿದೆ. ಸಾಕಷ್ಟು ಜನ ಮಲ್ಲವ್ವನ ಪರ ನಿಂತಿದ್ದಾರೆ.

ಅಷ್ಟೊಂದು ಭದ್ರತೆ ಇರುವ ಶಕ್ತಿ ಕೇಂದ್ರಕ್ಕೆ ಶಾವಿಗೆ ಬಂದದ್ದು ಹೇಗೆ ಎನ್ನುವ ಪ್ರಶ್ನೆ ಸಹಜವಾಗಿ ಮೂಡಿತ್ತು. ಸುವರ್ಣ ವಿಧಾನಸೌಧದ ಸ್ವಚ್ಛತೆ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಸಾಂಭ್ರಾದಿಂದ ಶಾವಿಗೆಯನ್ನು ತಂದು ಮಲ್ಲಮ್ಮಗೆ ಕೊಟ್ಟಿದ್ದಳು. ಮಲ್ಲಮ್ಮ ಶಾವಿಗೆಯನ್ನು ಇನ್ನಷ್ಟು ಒಣಗಿಸಬೇಕು ಎಂದು ಸೀರೆ ಹಾಸಿ ಒಣಹಾಕಿ, ಸ್ವಚ್ಛತಾ ಕೆಲಸ ಮಾಡುತ್ತಿದ್ದಳು. ಅದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

 

ವಿಧಾನಸೌಧದಲ್ಲಿ ಕುಳಿತು ಪೋರ್ನ್​ ವಿಡಿಯೋ ನೋಡಿದವರಿಗೆ ಶಿಕ್ಷೆ ಕೊಡುವ ಬದಲು ಸರ್ಕಾರ ಅವರನ್ನ ಸಮರ್ಥಿಸಿಕೊಳ್ಳುತ್ತೆ. ಬಡವರು-ದುರ್ಬಲರನ್ನು ನೋಡಿದರೆ ಕಾನೂನುಗಳಿಗೂ ಎಲ್ಲಿಲ್ಲದ ಹುಮ್ಮಸ್ಸು ಬಂದುಬಿಡುತ್ತೆ. ಮಲ್ಲಮ್ಮನಿಗೆ ಆಕೆಯ ಕೆಲಸ ಸಿಗುವಂತಾಗಲಿ’. ಹೀಗೆ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ಮಲ್ಲಮ್ಮನ ಪರ ‘ಐ ಸ್ಟ್ಯಾಂಡ್ ಯೂಥ್ ಮಲ್ಲವ್ವ’ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು ಮಾಡಿದ್ದಾರೆ. ಮಲ್ಲವ್ವಗೆ ಕೆಲಸ ವಾಪಸ್ ಕೊಡಿ ಎಂದು ಆಗ್ರಹಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!