Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೌಢ್ಯತೆ ಸಮಾಜಕ್ಕೆ ಅಪಾಯಕಾರಿ :  ಎನ್.ದೇವರಹಳ್ಳಿ ಗ್ರಾಮದಲ್ಲಿ ಜಾಗೃತಿ ಮೂಡಿಸಿದ ಸಿಇಒ ಸೋಮಶೇಖರ್

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆ.29 : ಸಂವಿಧಾನದಲ್ಲಿ ಎಲ್ಲರಿಗೂ ಜೀವಿಸುವ ಹಕ್ಕು ಇದೆ. ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾದ ಜೋಡಿಯನ್ನು ಬಹಿಷ್ಕಾರ ಹಾಕಿರುವುದು ಕಾನೂನುಬಾಹಿರ. ಯಾರು ಕೂಡ ಕಾನೂನು ವಿರುದ್ಧವಾದ  ಕೆಲಸವನ್ನು ಮಾಡಬಾರದು ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಹೇಳಿದರು.

ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿ ಗ್ರಾಮದಲ್ಲಿ ನಡೆದ ಅಂತರ್ಜಾತಿ ವಿವಾಹದ ಕಾರಣದಿಂದ ಉದ್ಭವಿಸಿದ ಸಾಮಾಜಿಕ ಬಹಿಷ್ಕಾರ ನಡೆಯ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದರು.

ಮೌಢ್ಯತೆಯು ಸಮಾಜಕ್ಕೆ ಅಪಾಯಕಾರಿಯಾಗಿದ್ದು, ಯಾವುದೇ ನಾಗರೀಕರೂ ಇಂತಹ ಘಟನೆಗಳಿಗೆ ಬೆಂಬಲಿಸಬಾರದು. ಅದರಲ್ಲೂ ವಿಶೇಷವಾಗಿ ಗ್ರಾಮ ಪಂಚಾಯಿತಿ ಸದಸ್ಯರು ಬೆಂಬಲಿಸಿದ್ದೇ ಆದಲ್ಲಿ, ಅಂತಹವರ ಸದಸ್ಯತ್ವ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದರು.

ಇನ್ನು ಸಾಂತ್ವನ ಕೇಂದ್ರದಲ್ಲಿರುವ ದಂಪತಿ ಮತ್ತು ಮಗು ಕರೆದುಕೊಂಡು ಬರಲಾಗುವುದು. ಗ್ರಾಮಸ್ಥರು  ಸಂತೋಷದಿಂದ ಸ್ವಾಗತಿಸಿ ಗ್ರಾಮಸ್ಥರಲ್ಲಿ ಮನವಿ ಮಾಡಿ ಪ್ರಕರಣ ಸುಖಾಂತ್ಯವಾಗುವಂತೆ ಕ್ರಮವಹಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ರೆಹಮಾನ್  ಪಾಷ,ತಾಪಂ ಇ ಒ ಹೊನ್ನಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ  ಕೆ.ಎಸ್. ಸುರೇಶ್, ತಳುಕು ವೃತ್ತ ನಿರೀಕ್ಷಕ ಸಮೀವುಲ್ಲಾ, ನಾಯಕನಹಟ್ಟಿ ಪಿ.ಎಸ್.ಐ. ದೇವರಾಜ್ , ಪಿಡಿಒ ಶಶಿಕಲಾ,ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!