Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುದೀಪ್ ತಾಯಿ ಚಿಕಿತ್ಸೆ ಫಲಕಾರಿಯಾಗದೆ ನಿಧನ : ಸರೋಜಾ ಅವ್ರಿಗೆ ಏನಾಗಿತ್ತು..?

Facebook
Twitter
Telegram
WhatsApp

ಕಿಚ್ಚ ಸುದೀಪ್ ಅವರ ಮನೆಯಲ್ಲಿ ಮೌನ ಆವರಿಸಿದೆ.. ಮನಸ್ಸಿನ ತುಂಬಾ ತಡೆಯಲಾರದ ದುಃಖವಿದೆ.. ಕಣ್ಣಲ್ಲಿ ನೀರು ತುಂಬಿದೆ.. ಅಷ್ಟು ಪ್ರೀತಿ ಮಾಡುವ ತಾಯಿ ಇಂದು ಇಹಲೋಕ ತ್ಯಜಿಸಿದ್ದಾರೆ. ಸುದೀಪ್ ಅವರಿಗೆ ಮಾತೃ ವಿಯೋಗ ಕಾಡಿದೆ‌. ಸರೋಜಾ ಅವರು ಎಲ್ಲರನ್ನು ಬಿಟ್ಟು ಬಾರದ ಲೋಕಕ್ಕೆ ಹೋಗಿದ್ದಾರೆ. ಇಂದು ಬೆಳಗ್ಗೆ 7.40 ಕ್ಕೆ ನಿಧನರಾಗಿದ್ದಾರೆ.

ಸರೋಜಾ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ ಆಸ್ಪತ್ರೆಗೂ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪತಿ ಸಂಜೀವ್, ಮಗ ಸುದೀಪ್, ಸುರೇಖಾ, ಸುಜಾತಾ ಹಾಗೂ ಐವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನದ ವೇಳೆ ಜೆಪಿ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಸಂಜೆ ಒಳಗೆ ಅಂತ್ಯ ಸಂಸ್ಕಾರ ಮಾಡಲಿದ್ದಾರೆ.

ತಾಯಿಯನ್ನು ಕಳೆದುಕೊಂಡು ಸುದೀಪ್ ದುಃಖತಪ್ತರಾಗಿದ್ದಾರೆ. ಆಪ್ತರು, ಕನ್ನಡ ಚಿತ್ರರಂಗ, ಮಾಧ್ಯಮದವರು ಸುದೀಪ್ ಅವರಿಗಾಗಿ ದೇವರಲ್ಲಿ ಪ್ರಾರ್ಥಿಸಿದ್ದಾರೆ. ತಾಯಿಯ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿ ಸುದೀಪ್ ಅವರಿಗೆ ನೀಡಲೆಂದು ಕೇಳಿಕೊಂಡಿದ್ದು, ಸರೋಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಸರೋಜಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅಜ್ಜಿ ಎಂದರೆ ಮೊಮ್ಮಕ್ಕಳಿಗೆ ತುಂಬಾನೇ ಇಷ್ಟವಿತ್ತು. ಈಗ ಮೊಮ್ಮಕ್ಕಳ ಮುಂದೆ ಅಜ್ಜಿಯ ಪಾರ್ಥಿವ ಶರೀರವಿದೆ. ಆಡಿ ಬೆಳೆದ ಮೊಮ್ಮಕ್ಕಳಿಗೆ ಮಾತಾಡದೆ, ಉಸಿರಾಡದೆ, ತಬ್ಬದೆ ಮಲಗಿದ ದೇಹ ನೋಡುವುದು ಸುಲಭವಲ್ಲ. ಮೊಮ್ಮಕ್ಕಳಿಗೂ ಆ ದೇವರು ದುಃಖ ತಡೆದುಕೊಳ್ಳುವ ಶಕ್ತಿ ನೀಡಲಿ ಎಂದೇ ಎಲ್ಲರೂ ಹಾರೈಸುತ್ತಿದ್ದಾರೆ. ಜೆಪಿ ನಗರದ ನಿವಾಸಕ್ಕೆ 12 ಗಂಟೆಯಷ್ಟರಲ್ಲಿ ಪಾರ್ಥಿವ ಶರೀರ ಬರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ

ಚಿತ್ರದುರ್ಗ | ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ ಆಚರಣೆ : ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಹಿಂದಿನಿಂದಲೂ ಈಡಿಗರ ಸಮುದಾಯದ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯವಿಟ್ಟುಕೊಂಡಿದೆ. ನನ್ನ

ಚಿತ್ರದುರ್ಗ | ಒನಕೆ ಓಬವ್ವ ಜಯಂತಿ ಅದ್ದೂರಿ ಆಚರಣೆಗೆ ಸಿದ್ದತೆ : ಪೂರ್ವಭಾವಿ ಸಭೆಯಲ್ಲಿ ಮುಖಂಡರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಮುಂದಿನ ತಿಂಗಳು ನಡೆಯುವ ಒನಕೆ ಓಬವ್ವ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ

error: Content is protected !!