Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ : ನಿವೃತ್ತ ಡಿಡಿಪಿಐ ರೇವಣ ಸಿದ್ದಪ್ಪ ನವರಿಗೆ ಸನ್ಮಾನ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.05 :  ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯಲ್ಲಿ “ಶಿಕ್ಷಕರ ದಿನಾಚರಣೆಯ” ಅಂಗವಾಗಿ ಚಿತ್ರದುರ್ಗ ಜಿಲ್ಲಾ ಶಿಕ್ಷಣ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಹಾಗೂ ವಿವಿಧ ಜಿಲ್ಲೆಗಳಲ್ಲಿ  ಉನ್ನತ ಹುದ್ದೆಯನ್ನು ಅಲಂಕರಿಸಿ ಸೇವೆ ಸಲ್ಲಿಸಿ ನಿವೃತ್ತರಾದ ರೇವಣ ಸಿದ್ದಪ್ಪ ನವರನ್ನು ಸನ್ಮಾನಿಸಿಲಾಯಿತು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ  ವಿಶೇಷ ಅಹ್ವಾನಿತರಾಗಿ ಆಗಮಿಸಿ ಸನ್ಮಾನವನ್ನು ಸ್ವೀಕರಿಸಿ ಮಾತಾನಾಡಿದ ಶ್ರೀಯುತ ರೇವಣಸಿದ್ದಪ್ಪ ನವರು ಶಿಕ್ಷಕರ ಪಾತ್ರ ಮಕ್ಕಳ ಜೀವನದಲ್ಲಿ  ಅಮೂಲ್ಯವಾದುದು. ಇಂದು ಕೇವಲ ನಾಲ್ಕು ಗೋಡೆಗಳ ಮಧ್ಯೆ ಪಾಠ ಪ್ರವಚನ ಹೇಳಿಕೊಡುವವರಷ್ಟೇ ಶಿಕ್ಷಕರಲ್ಲ. ಎರಡಕ್ಷರ ಕಲಿಸಿದಾತ ಗುರು ಎಂಬಂತೆ  ನಮಗಿಂತ ಹಿರಿಯರು/ಕಿರಿಯರು  ನಾವು ಇಡುವ ಪ್ರತಿ ಹೆಜ್ಜೆಯಲ್ಲೂ ಪ್ರ್ರತಿ ಹಂತದಲ್ಲೂ, ನಮ್ಮ ತಪ್ಪು ಒಪ್ಪುಗಳನ್ನು  ತಿದ್ದಿತೀಡುವವರೆಲ್ಲರೂ  ಶಿಕ್ಷಕರಾಗಿರುತ್ತಾರೆ.

ಶಿಕ್ಷಕರಾದವರು ಮಗುವಿನ ಜ್ಞಾನದ ಮಟ್ಟಕ್ಕೆ ಇಳಿದು  ಓದಿಸುವವರು  ನಿಜವಾದ ಶಿಕ್ಷಕರಾಗುತ್ತಾರೆ. ಈ ನಿಟ್ಟಿನಲ್ಲಿ  ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯು ಚಿತ್ರದುರ್ಗದಲ್ಲಿಯೇ ಮುಂಚೂಣಿಯಲ್ಲಿದೆ.  ಅಲ್ಲದೇ  ಸಂಸ್ಥೆಯ ಕಾರ್ಯದರ್ಶಿಗಳು ಆಡಳಿತ ಮಂಡಳಿ ಹಾಗೂ  ಶಿಕ್ಷಕರು ಮುತುವರ್ಜಿ ವಹಿಸುತ್ತಿರುವುದು  ಶ್ಲಾಘನೀಯ ವಿಚಾರ ಎಂದರು.

ಸಂಸ್ಥೆಯ ಕಾರ್ಯದರ್ಶಿಗಳಾದ  ಬಿ.ವಿಜಯ್ ಕುಮಾರ್ ಅವರು ಮಾತನಾಡುತ್ತಾ  ಖಾಸಗಿ ಶಿಕ್ಷಣ ಸಂಸ್ಥೆ ನಡೆಸುವಲ್ಲಿ  ನಿಮ್ಮಂತಹ ಅಧಿಕಾರಿಗಳ ಮಾರ್ಗದರ್ಶನ  ಸಲಹೆ ಸೂಚನೆ ಅತ್ಯಮೂಲ್ಯ ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ  ಶಿಕ್ಷಣ ಇಲಾಖೆಯ ಅಧಿಕಾರಿಗಳ ಕೊಡುಗೆ ಸಹಕಾರ  ಗಣನೀಯವಾದುದು ಎಂದರು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ಸಂಸ್ಥೆಯ ಆಡಳಿತ ಮಂಡಳಿ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಾದ ಶಿಕ್ಷಕರಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ಶ್ರೀಮತಿ ಸುನಿತಾ ವಿಜಯ್ ಕುಮಾರ್, ಶೈಕ್ಷಣಿಕ ಆಡಳಿತಾಧಿಕಾರಿ ಡಾ||.ಸ್ವಾಮಿ.ಕೆ.ಎನ್ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ.ಸಂಪತ್ ಕುಮಾರ್.ಸಿ.ಡಿ,  ಐಸಿಎಸ್‍ಸಿ ಪ್ರಾಚಾರ್ಯರಾದ ಬಸವರಾಜಯ್ಯ.ಪಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!