Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾ ಸೋಲಿನ ಬಗ್ಗೆ ಅಭಿಮಾನಿಗಳು ಮಾತ್ರವಲ್ಲ, ನೆರೆ ದೇಶದ ಆಟಗಾರರಿಗೂ ಬೇಸರ..!

Facebook
Twitter
Telegram
WhatsApp

ಪಾಕಿಸ್ತಾನದ ವಿರುದ್ಧ ಸೋತರು ನ್ಯೂಜಿಲೆಂಡ್ ವಿರುದ್ಧ ಗೆದ್ದೇ ಗೆಲ್ತಾರೆ ಅನ್ನೋ ಭರವಸೆ ಇತ್ತು. ಆದ್ರೆ ನ್ಯೂಜಿಲೆಂಡ್ ವಿರುದ್ಧವೂ ಟೀ ಇಂಡಿಯಾ ಸೋತಿದೆ. ಈ ಸೋಲಿಗೆ ಅಭಿಮಾನಿಗಳು ಮಾತ್ರವಲ್ಲ, ನೆರೆ ದೇಶದ ಅನುಭವಿ ಆಟಗಾರರು ಕೂಡ ಬೇಸರ ಮಾಡಿಕೊಂಡಿದ್ದಾರೆ.

ಈ ಬಾರಿಯ T20 ವಿಶ್ವಕಪ್ ನ ಸೆಮಿಫೈನಲ್ ಗೆ ಭಾರತ ಮುಂದುವರೆಯಬೇಕೆಂದರೆ ಅದು ನ್ಯೂಜಿಲೆಂಡ್ ವಿರುದ್ಧದ ಗೆಲುವು ಅನಿವಾರ್ಯವಾಗಿತ್ತು. ಆದ್ರೆ ಆ ಪಂದ್ಯದಲ್ಲೂ ಸೋಲನ್ನ ಅನುಭವಿಸಿದೆ. ಎಂಟು ವಿಕೆಟ್ ಗಳಿಂದ ಸೋಲು ಕಂಡಿದೆ. ಇದು ಇಡೀ ಟೀಂ ಇಂಡಿಯಾ ಅಭಿಮಾನಿಗಳನ್ನ ನಿರಾಸೆಗೊಳಿಸಿದ್ದಲ್ಲದೇ, ಬೇಸರಕ್ಕೂ ಕಾರಣವಾಗಿದೆ.

ಈ ಸೋಲಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಪಾಕಿಸ್ತಾನದ ಮಾಜಿ ಬೌಲರ್ ಶೋಯಬ್ ಅಖ್ತರ್, ನೀವೂ ಕ್ರಿಕೆಟ್ ಆಡಬೇಕಿರುವುದು ಇನ್ಸ್ಟಾಗ್ರಾಮ್ ನಲ್ಲಾ ಅಥವಾ ಮೈದಾನದಲ್ಲಾ ಅಂತ ಯೋಚಿಸಿ ಎಂದು ಸಲಹೆ ನೀಡಿದ್ದಾರೆ. ನಾನು ಪಂದ್ಯದ ಮೊದಲು ಹೇಳಿದಂತೆ, ನ್ಯೂಜಿಲೆಂಡ್ ಟಾಸ್ ಗೆದ್ದರೆ ಭಾರತಕ್ಕೆ ತುಂಬಾ ಕಷ್ಟ ಎಂದು ನಾನು ಬಹಳ ಸಮಯದಿಂದ ಹೇಳುತ್ತಿದ್ದೆ. ಅದೇ ವಿಷಯ ಸಂಭವಿಸಿದೆ, ಇಂದು ಭಾರತ ತಂಡವು ತುಂಬಾ ಕೆಟ್ಟದಾಗಿ ಆಡಿದೆ. ಯಾವ ಸಮಯದಲ್ಲಾದರೂ ಅವರು ಪಂದ್ಯದಲ್ಲಿದ್ದರು ಎಂದು ನನಗೆ ಅನಿಸಲಿಲ್ಲ. ಅವರು ತುಂಬಾ ಒತ್ತಡದಲ್ಲಿ ಕಾಣಿಸಿಕೊಂಡರು, ಎರಡು ತಂಡಗಳು ಆಡುತ್ತಿರುವುದನ್ನು ನೋಡಿ, ಟೀಮ್ ಇಂಡಿಯಾ ಇಂದಿನ ಪಂದ್ಯವನ್ನು ಆಡಿದ ರೀತಿಗೆ ತುಂಬಾ ಬೇಸರವಾಯಿತು ಎಂದಿದ್ದಾರೆ.

ಶಾಹಿದ್ ಅಫ್ರಿದಿ ಕೂಡ ಟೀಂ ಇಂಡಿಯಾ ಸೋಲಿನ ಬಗ್ಗೆ ಬೇಸರಪಟ್ಟುಕೊಂಡು ಟ್ವೀಟ್ ಮಾಡಿದ್ದು, ಭಾರತ ತಂಡ ಈಗ ಸೆಮಿಫೈನಲ್ ತಲುಪಿರುವುದು ಈಗ ಪವಾಡವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ದಾಂಪತ್ಯ ಜೀವನ ಇದ್ದಕ್ಕಿದ್ದಂತೆ ಬಿರುಕು ಏಕೆ?

ಈ ರಾಶಿಯವರ ದಾಂಪತ್ಯ ಜೀವನ ಇದ್ದಕ್ಕಿದ್ದಂತೆ ಬಿರುಕು ಏಕೆ? ಈ ಪಂಚರಾಶಿಗಳ ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ, ಗುರುವಾರ ರಾಶಿ ಭವಿಷ್ಯ -ಮೇ-16,2024 ಸೀತಾ ನವಮಿ ಸೂರ್ಯೋದಯ: 05:47, ಸೂರ್ಯಾಸ್ತ : 06:37

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

error: Content is protected !!