Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಎಸ್ಪಿ ಕಚೇರಿ ಎದುರು ಪ್ರೇಮಿಗಳ ಕಣ್ಣೀರು : ಯಾಕೆ ಗೊತ್ತಾ..?

Facebook
Twitter
Telegram
WhatsApp

ಚಿತ್ರದುರ್ಗ: ಪ್ರೀತಿ ಅನ್ನೋದೇ ಹಾಗೇ. ಯಾರೇ ವಿರೋಧಿಸಿದರು ತನ್ನ ಪ್ರೀತಿಯಷ್ಟೇ ಮುಖ್ಯವಾಗುತ್ತದೆ. ಪ್ರೀತಿ ಕೈ ಮೀರುತ್ತಿದೆ ಎನ್ನುವಾಗ ಮನೆಯವರ ವಿರೋಧ ಕಟ್ಟಿಕೊಂಡರು ಚಿಂತೆ ಇಲ್ಲ ಎಂದು ಮದುವೆಯಾಗುವ ಎಷ್ಟೋ ಕೇಸ್ ಗಳು ಬೆಳಕಿಗೆ ಬಂದಿವೆ. ಇದೀಗ ಕೋಟೆನಾಡಿನಲ್ಲೂ ಅಂತಂದೊಂದು ಘಟನೆ ನಡೆದಿದೆ.

 

ಮಲ್ಲಿಕಾರ್ಜುನ ಹಾಗೂ ಕೀರ್ತಿ ಎಂಬುವವರು ಮದುವೆಯಾದ ಜೋಡಿಗಳು. ಚಳ್ಳಕೆರೆಯ ಚೊಕ್ಕಮದರೆಯವರು ಮಲ್ಲಿಕಾರ್ಜುನ. ಖಾಸಗಿ ಬಸ್ಸಿನ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಬಿಎಸ್ಸಿ ಓದುತ್ತಿರುವ ಕೀರ್ತಿ, ಹಿರಿಯೂರಿನ ಸೊಂಡೆಕೆರೆಯವರು. ಕಳೆದ ಒಂದು ವರ್ಷದಿಂದ ಇಬ್ಬರು ಪ್ರೀತಿಸುತ್ತಾ ಇದ್ದರು. ಇದೀಗ ಇಬ್ಬರು ಮದುವೆಯಾಗಿದ್ದು, ರಕ್ಷಣೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ.

 

ಮದುವೆಯಾದ ನಾಲ್ಕೆ ದಿನಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಮ್ಮ ಮನೆಯವರು ಬದುಕುವುದಕ್ಕೆ ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ನಾಲ್ಕು ದಿನಗಳ ಹಿಂದೆ‌ ಮಂಡ್ಯದ ದೇವಸ್ಥಾನ ಒಂದರಲ್ಲಿ ಈ ಜೋಡಿ ಮದುವೆಯಾಗಿತ್ತು. ನಮ್ಮ ಪೋಷಕರು ಬದುಕುವುದಕ್ಕೆ ಬಿಡುತ್ತಿಲ್ಲ, ಹೊಡಿತಿನಿ, ಬಡಿತೀನಿ ಅಂತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!